
ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಹಲವು ನಿಂದನಾತ್ಮಕ ಟ್ವೀಟ್ಗಳನ್ನು ಮಾಡಿ ನಾಲ್ಕು ದಿನಗಳ ಹಿಂದೆ ಜೈಲು ಸೇರಿದ್ದ ದಲಿತ ಮುಖಂಡ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಇಂದು ಅಸ್ಸಾಂ ನ್ಯಾಯಾಲಯ ಜಾಮೀನು ನೀಡಿತ್ತು. ನಿನ್ನೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಅಂತಿಮವಾಗಿ ಜಿಗ್ನೇಶ್ ಮೇವಾನಿಗೆ ಬೇಲ್ ಸಿಕ್ಕು, ಅವರು ಜೈಲಿನಿಂದ ಹೊರಬಂದಿದ್ದರು. ಆದರೆ ಈಗ ಮತ್ತೊಂದು ಕೇಸ್ನಲ್ಲಿ ಮತ್ತೊಮ್ಮೆ ಜಿಗ್ನೇಶ್ ಮೇವಾನಿ ಬಂಧನವಾಗಿದೆ. ಈ ಬಾರಿ ಅಸ್ಸಾಂನ ಬಾರ್ಪೇಟಾ ಪೊಲೀಸರು ಜಿಗ್ನೇಶ್ರನ್ನು ಬಂಧಿಸಿದ್ದಾರೆ. ಆದರೆ ಈಗ ಜಿಗ್ನೇಶ್ ಬಂಧನವಾಗಿದ್ದೇಕೆ ಎಂಬ ಬಗ್ಗೆ ಅವರು ಮಾಹಿತಿ ನೀಡಿಲ್ಲ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೀಳಾಗಿ ಹಲವು ಟ್ವೀಟ್ಗಳನ್ನು ಮಾಡಿದ್ದ ಮೇವಾನಿ ವಿರುದ್ಧ ಅಸ್ಸಾಂನ ಕೊಕ್ರಾಝರ್ನ ಬಿಜೆಪಿ ನಾಯಕ ಅರೂಪ್ ಕುಮಾರ್ ಡೇ ದೂರು ನೀಡಿದ್ದರು. ಎಫ್ಐಆರ್ ಕೂಡ ದಾಖಲಾಗಿತ್ತು. ಹೀಗಾಗಿ ಗುರುವಾರ ಆದರೆ ತಮ್ಮ ಬಂಧನವನ್ನು ಜಿಗ್ನೇಶ್ ಮೇವಾನಿ ಖಂಡಿಸಿದ್ದರು. ಪ್ರಧಾನಿ ಕಾರ್ಯಾಲಯ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದರು. ಗುಜರಾತ್ನ ಪಾಲನ್ಪುರದಲ್ಲಿರುವ ಸರ್ಕೀಟ್ ಹೌಸ್ನಲ್ಲಿ ಜಿಗ್ನೇಶ್ರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist