ಮತ ಪರಿಷ್ಕರಣೆ ನೆಪದಲ್ಲಿ 7 ಲಕ್ಷಕ್ಕೂ ಹೆಚ್ಚು ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದು ಬೆಳಕಿಗೆ ಬಂದಿದ್ದು, ಕೊಡಗಿನಲ್ಲಿ ಈ ರೀತಿ ನಡೆಯದಂತೆ ಜಿಲ್ಲಾಧಿಕಾರಿಗಳು ಗಮನ ಹರಿಸಬೇಕೆಂದು ವಹಿಸಿಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮನವಿ ಮಾಡಿದರು.
ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯ ಸಂದರ್ಭ ಕೆಲವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈ ಬಿಡುವ ಕೆಲಸಗಳು ನಡೆಯುತ್ತಿದ್ದು, ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ನ್ಯಾಯಯುತವಾಗಿ ಮತ ಪರಿಷ್ಕಣೆ ಮಾಡುವಂತೆ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತರರಾದ ಟಾಟು ಮೊಣ್ಣಪ್ಪ, ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಸೂರಜ್ ಹೊಸೂರು, ಕೆಪಿಸಿಸಿ ಮುಖ್ಯ ತರಬೇತುದಾರರಾದ ಜಾನ್ಸನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ತೆನ್ನಿರಾ ಮೈನಾ, ಜಿ.ಪಂ ಮಾಜಿ ಸದಸ್ಯ ಬಿ.ಎನ್.ಪ್ರಥ್ಯು ಹಾಜರಿದ್ದರು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?