ಸೋಮವಾರ, ಏಪ್ರಿಲ್ 29, 2024
ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆ ನಿರಾಕರಿಸಿದ್ದಕ್ಕೆ ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿದ – ಇಬ್ಬರ ಸ್ಥಿತಿ ಚಿಂತಾಜನಕ

Twitter
Facebook
LinkedIn
WhatsApp
ಹೇಳದೇ ಎಲ್ಲೋ ಹೋಗಿದ್ದಾಳೆ – ಮಗಳನ್ನೇ ಕೊಂದು ಟ್ರಾಲಿ ಬ್ಯಾಗ್‍ನಲ್ಲಿ ಶವ ತುಂಬಿ ಎಸೆದ ತಂದೆ

ಮುಂಬೈ: ಮದುವೆಯಾಗಲು ನಿರಾಕರಿಸಿದ್ದಕ್ಕೆ ಪಿಎಚ್‍ಡಿ ವಿದ್ಯಾರ್ಥಿಯೊಬ್ಬ ತನಗೆ ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿ ಹತ್ಯೆಗೈಯ್ಯಲು ಯತ್ನಿಸಿರುವ ಘಟನೆ ಮಹಾರಾಷ್ಟ್ರದ (Maharashtra) ಔರಂಗಾಬಾದ್‍ನಲ್ಲಿ (Aurangabad) ನಡೆದಿದೆ. ಇದೀಗ ಇಬ್ಬರಿಗೂ ಸುಟ್ಟ ಗಾಯವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಇಬ್ಬರೂ ಪ್ರಾಣಿಶಾಸ್ತ್ರದ (Zoology) ಪಿಎಚ್‍ಡಿ ವಿದ್ಯಾರ್ಥಿಗಳಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಲ್ಲಿ (Dr Babasaheb Ambedkar Marathwada University) ಅಧ್ಯಯನ ಮಾಡುತ್ತಿದ್ದರು.

ಹನುಮಾನ್ ತೆಕಡಿಯಲ್ಲಿರುವ ಸರ್ಕಾರಿ ಫೋರೆನ್ಸಿಕ್ ಕಾಲೇಜಿನ ಬಯೋಫಿಸಿಕ್ಸ್ ವಿಭಾಗದ ಕ್ಯಾಬಿನ್‍ನಲ್ಲಿ ಯುವತಿ ತನ್ನ ಪ್ರಾಜೆಕ್ಟ್ ಮಾಡುತ್ತಿದ್ದಾಗ ಆರೋಪಿ ಒಳಗೆ ನುಗ್ಗಿದ್ದಾನೆ. ನಂತರ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದೇಕೆ ಎಂದು ಪ್ರಶ್ನಿಸಲು ಆರಂಭಿಸಿದ್ದಾನೆ. ನಂತರ ತನ್ನ ಮೇಲೆ ಹಾಗೂ ಯುವತಿಯ ಮೇಲೆ ಪೆಟ್ರೋಲ್ ಸುರಿದು ಲೈಟರ್‍ನಿಂದ ಬೆಂಕಿ ಹಚ್ಚಿಕೊಂಡಿದ್ದಾನೆ. ನಂತರ ಯುವತಿಯನ್ನು ಗಟ್ಟಿಯಾಗಿ ತಬ್ಬಿಕೊಂಡಿದ್ದಾನೆ ಎಂದು ಬೇಗಂಪುರ ಠಾಣೆಯ ಪಿಐ ಪ್ರಶಾಂತ್ ಪೋತದಾರ ತಿಳಿಸಿದ್ದಾರೆ.

ಇದೀಗ ಇಬ್ಬರನ್ನು ಚಿಕಿತ್ಸೆಗಾಗಿ ಔರಂಗಾಬಾದ್‍ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವ್ಯಕ್ತಿಗೆ 90% ಸುಟ್ಟ ಗಾಯಗಳಾಗಿದ್ದರೆ, ಯುವತಿಗೆ 55% ಸುಟ್ಟ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಮಹಿಳೆಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 307, 326A, 354D, 506,34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ