ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿಯೂಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ(Channarayapatna) ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. ಸೋಮಶೇಖರ್, ಭಾಗ್ಯ ದಂಪತಿ ಪುತ್ರಿ ದೀಪಾ(34) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಇವರು ಚನ್ನರಾಯಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ದೀಪಾ ಇಂದು(ಮೇ.09) ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ
Twitter
Facebook
LinkedIn
WhatsApp
ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ; ಹರಿಯಾಣದ ಇಬ್ಬರ ಬಂಧನ
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ (Melbourne) ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ (Haryana) ಮೂಲದ ಕರ್ನಾಲ್ನ ಇಬ್ಬರು ಸಹೋದರರನ್ನು ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ನಲ್ಲಿ ಬಂಧಿಸಲಾಗಿದೆ. ಹತ್ಯೆಗೀಡಾದ ಕರ್ನಾಲ್ ಮೂಲದ ವಿದ್ಯಾರ್ಥಿ ಆಸ್ಟ್ರೇಲಿಯಾದಲ್ಲಿ ಎಂಟೆಕ್ ಪದವಿ ಓದುತ್ತಿದ್ದರು.
ವಿಕ್ಟೋರಿಯಾ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯ ನಂತರ ಮಂಗಳವಾರ ಬೆಳಿಗ್ಗೆ ಗೌಲ್ಬರ್ನ್ನಲ್ಲಿ ಅಭಿಜಿತ್ (26) ಮತ್ತು ರಾಬಿನ್ ಗಾರ್ಟನ್ (27) ಎಂಬ ಇಬ್ಬರನ್ನು ಬಂಧಿಸಲಾಗಿದೆ. ದಿ ಟೈಮ್ಸ್ ಆಫ್ ಇಂಡಿಯಾದ ಪ್ರಕಾರ, ಕೊಲೆ ಮಾಡಿರುವ ಸಹೋದರರು ಕರ್ನಾಲ್ನ ಬಸ್ತಾರಾ ಗ್ರಾಮದ ನಿವಾಸಿಗಳಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ವಿಚಾರಣೆಗೆ ಕರೆದೊಯ್ಯಲಾಗಿದೆ. ಬಳಿಕ ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಮೆಲ್ಬೋರ್ನ್ನ ಆಗ್ನೇಯದಲ್ಲಿರುವ ಓರ್ಮಂಡ್ ಮನೆಯಲ್ಲಿ 22 ವರ್ಷದ ನವಜೀತ್ ಸಂಧು ಮತ್ತು 30 ವರ್ಷದ ಶರ್ವನ್ ಕುಮಾರ್ ಇಬ್ಬರೂ ವಾಸವಾಗಿದ್ದರು. ಅವರ ಮೇಲೆ ದಾಳಿ ಮಾಡಿದ ಸಹೋದರರಿಬ್ಬರು ಅಲ್ಲಿಂದ ಪರಾರಿಯಾಗಿದ್ದರು. ಭಾನುವಾರದಿಂದ ಅವರು ನಾಪತ್ತೆಯಾಗಿದ್ದರು. ಈ ದಾಳಿಯಲ್ಲಿ ಒಬ್ಬಾತ ಮೃತಪಟ್ಟಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.ಕರ್ನಾಲ್ನ ಗಗ್ಸಿನಾ ಗ್ರಾಮದ ನವಜೀತ್ ಸಂಧು ಅವರ ಎದೆಗೆ ಭಾನುವಾರ ರಾತ್ರಿ ಮಾರಣಾಂತಿಕವಾಗಿ ಇರಿದಿದ್ದರು. ಕರ್ನಾಲ್ನ ನಿವಾಸಿಯಾದ ಅವರ ಚಿಕ್ಕಪ್ಪ ಯಶವೀರ್ ಪ್ರಕಾರ, ಸಂಧು ಅವರು ಕೆಲವು ಬಾಡಿಗೆ ವಿಚಾರದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ನಡುವಿನ ಜಗಳದಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿತ್ತು.