ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ನವದೆಹಲಿ: ಇನ್ಮುಂದೆ ಜುಲೈ 18ರಂದು ಜಾರಿಗೆ ಬಂದ ಜಿಎಸ್ಟಿ ಹೊಸ ನಿಯಮಗಳ ಅನ್ವಯ ಜಿಎಸ್ಟಿ ಅಡಿಯಲ್ಲಿ ನೋಂದಾಯಿಸಲ್ಪಟ್ಟ ಹಿಡುವಳಿದಾರನು ಆಸ್ತಿಯನ್ನು ಬಾಡಿಗೆ ಪಡೆಯಲು ಶೇ.18 ರಷ್ಟು ತೆರಿಗೆ ಪಾವತಿಸಬೇಕು. ನೀವು ಪಾವತಿಸುವ ಬಾಡಿಗೆಗೆ ಶೇ.18 ರಷ್ಟು ಜಿಎಸ್ಟಿ ಅನ್ವಯಿಸುತ್ತದೆ ಎಂದು ಹೇಳಲಾಗಿದೆ.
ಈ ಹಿಂದೆ ಬಾಡಿಗೆ ಅಥವಾ ಲೀಸ್ನಲ್ಲಿ (ಭೋಗ್ಯಕ್ಕೆ) ನೀಡಲಾದ ಕಚೇರಿಗಳು ಅಥವಾ ವಾಣಿಜ್ಯ ಆಸ್ತಿಗಳಿಗೆ ಮಾತ್ರ ಜಿಎಸ್ಟಿ ವಿಧಿಸಲಾಗಿತ್ತು. ಆದರೆ ಕಾರ್ಪೊರೇಟ್ ಹೌಸ್ಗಳು, ವ್ಯಕ್ತಿಗಳಿಂದ ಪಡೆಯುವ ಬಾಡಿಗೆ ಅಥವಾ ಗುತ್ತಿಗೆಯ ಆಸ್ತಿಗಳ ಮೇಲೆ ಯಾವುದೇ ಜಿಎಸ್ಟಿ ವಿಧಿಸಲಾಗಿರಲಿಲ್ಲ. ಆದರೆ ಹೊಸ ನೀತಿಯ ಅನ್ವಯ ನೋಂದಾಯಿತ ಹಿಡುವಳಿದಾರನು ರಿವರ್ಸ್ ಚಾರ್ಜ್ ಮಕ್ಯಾನಿಸಂ (ಆರ್ಸಿಎಂ) ಅಡಿಯಲ್ಲಿ ತೆರಿಗೆ ಪಾವತಿಸಲು ಹೊಣೆಗಾರನಾಗಿರುತ್ತಾನೆ. ಯಾರಿಗೆ ಅನ್ವಯ?:
ಹೊಸ ನಿಯಮಗಳ ಅನ್ವಯ ಜಿಎಸ್ಟಿ ಅಡಿಯಲ್ಲಿ ಆಸ್ತಿಯನ್ನು ನೋಂದಾಯಿಸಿಕೊಂಡ ಹಾಗೂ ಜಿಎಸ್ಟಿ ರಿಟರ್ನ್ಗಳನ್ನು ಸಲ್ಲಿಸಲು ಹೊಣೆಯಾಗಿದ್ದಾಗ ಮಾತ್ರ ಅವರಿಗೆ ತೆರಿಗೆ ಪಾವತಿ ಅನ್ವಯಿಸುತ್ತದೆ. ಆದರೆ ಆಸ್ತಿ ಮಾಲೀಕರು ಯಾವುದೇ ಕಾರಣಕ್ಕೂ ಜಿಎಸ್ಟಿ ಪಾವತಿಸಲು ಜವಾಬ್ದಾರಿಯಾಗಿರುವುದಿಲ್ಲ ಎಂದು ಹೊಸ ನಿಯಮ ಹೇಳುತ್ತದೆ.
ಅಲ್ಲದೇ ಸಾಮಾನ್ಯ ವೇತನದಾರರು ವಸತಿ, ಮನೆ, ಫ್ಲಾಟ್ ಅನ್ನು ಬಾಡಿಗೆ ಅಥವಾ ಗುತ್ತಿಗೆ ಪಡೆದುಕೊಂಡರೆ ಅವರು ಜಿಎಸ್ಟಿ ಪಾವತಿಸಬೇಕಾಗಿಲ್ಲ. ವ್ಯಾಪಾರ ಅಥವಾ ಬ್ಯುಸಿನೆಸ್ ಮಾಡುವವರು ಮಾತ್ರ ನಿಯಮಿತಕ್ಕಿಂತ ಹೆಚ್ಚಿನ ವಹಿವಾಟು ನಿರ್ವಹಿಸುವಾಗ ಕಡ್ಡಾಯವಾಗಿ ತಮ್ಮ ಮಾಲೀಕರಿಗೆ ಜಿಎಸ್ಟಿ ಪಾವತಿಸಲೇಬೇಕಾಗುತ್ತದೆ ಎಂದು ಕ್ಲಿಯರ್ಟ್ಯಾಕ್ಸ್ನ ಸಂಸ್ಥಾಪಕ ಹಾಗೂ ಸಿಇಒ ಅರ್ಚಿತ್ ಗುಪ್ತಾ ವಿವರಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಜಿಎಸ್ಟಿ ಮಂಡಳಿಯು 47ನೇ ಸಭೆಯ ಬಳಿಕ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?