ಗುರುವಾರ, ಮಾರ್ಚ್ 28, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮನೆ ಮುಂದೆ ಮಲಗಿದವರ ಮೇಲೆ ಹುಚ್ಚು ನಾಯಿ ದಾಳಿ – 25ಕ್ಕೂ ಅಧಿಕ ಜನ ಆಸ್ಪತ್ರೆ ದಾಖಲು

Twitter
Facebook
LinkedIn
WhatsApp

ಬಳ್ಳಾರಿ: ನಗರದಲ್ಲಿ ಕಳೆದ 2 ತಿಂಗಳ ಹಿಂದೆ ಅಷ್ಟೇ ನಾಯಿ ಕಡಿತಕ್ಕೆ (Dog Bite) ಇಬ್ಬರು ಅಮಾಯಕ ಬಾಲಕರು ಬಲಿಯಾಗಿದ್ದರು. ಘಟನೆ ಮಾಸುವ ಮುನ್ನವೇ ಮತ್ತೊಂದು ಹುಚ್ಚು ನಾಯಿ ದಾಳಿ ಘಟನೆ ವರದಿಯಾಗಿದೆ.

ರಾತ್ರಿ ತಮ್ಮ ಮನೆ ಮುಂದೆ ಮಲಗಿದ್ದವರ ಮೇಲೆ ನಾಯಿ ದಾಳಿ ಮಾಡಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ 2 ತಿಂಗಳ ಹಿಂದೆ ಬಳ್ಳಾರಿ (Bellary) ಬಾದನಟ್ಟಿ ಗ್ರಾಮದಲ್ಲಿ ಇಬ್ಬರು ಮಕ್ಕಳ ಮೇಲೆ ನಾಯಿ ದಾಳಿ ಮಾಡಿದ್ದು, ಇದರಿಂದ ಇಬ್ಬರು ಮಕ್ಕಳು ಅಸುನೀಗಿದ್ದರು. ಈಗ ಮತ್ತೆ ನಾಯಿ ದಾಳಿಯಿಂದಾಗಿ ಬಳ್ಳಾರಿಯ ಜನತೆ ಬೆಚ್ಚಿ ಬಿದ್ದಿದೆ. ಮಂಗಳವಾರ ಮುಂಜಾನೆ ಬಳ್ಳಾರಿಯ ಕೌಲ್ ಬಜಾರ್ ವ್ಯಾಪ್ತಿಯ ವಾರ್ಡ್ ನಂಬರ್ 30 ರಲ್ಲಿ ವಟ್ಟಲಗೇರಿ ಏರಿಯಾದಲ್ಲಿ ನಾಯಿ ದಾಳಿ ಮಾಡಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಹುಚ್ಚು ನಾಯಿ ದಾಳಿ ಮಾಡಿದ್ದು, 25 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮನೆ ಮುಂದೆ ರಾತ್ರಿ ಮಲಗಿದ್ದ ಜನರ ಮೇಲೆ ನಾಯಿ ದಾಳಿ ಮಾಡಿದ್ದು, 6 ಮಹಿಳೆಯರು 7 ಮಕ್ಕಳು ಸೇರಿದಂತೆ ಒಟ್ಟು 25 ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದೆ. ನಾಯಿ ಕಡಿತದ ಬಳಿಕ ಬಳ್ಳಾರಿ ಜಿಲ್ಲೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ನಾಯಿ ದಾಳಿಗೊಳಗಾದ ಜನರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ