ಕೀವ್: 20 ಫೆಬ್ರವರಿಯಿಂದ ರಷ್ಯಾ, ಉಕ್ರೇನ್ ಮೇಲೆ ನಿರಂತರವಾಗಿ ಯುದ್ಧ ಮಾಡುತ್ತಿದೆ. ಆದರೆ ಈಗ ಈ ಯುದ್ಧ ಕೊನೆಗೂ ಮುಕ್ತಾಯವಾಗಿದ್ದು, ಉಕ್ರೇನ್ ಸೇನೆ ಮರಿಯುಪೋಲ್ನಲ್ಲಿ ರಷ್ಯಾಗೆ ಶರಣಾಗಿದೆ.
ಮರಿಯುಪೋಲ್ನ ಅಜೋವ್ಸ್ಟಾಲ್ ಸ್ಟೀಲ್ವರ್ಕ್ಸ್ ನಲ್ಲಿ ರಷ್ಯಾದ ಪಡೆಗಳಿಗೆ 250ಕ್ಕೂ ಹೆಚ್ಚು ಉಕ್ರೇನಿಯನ್ ಸೈನಿಕರು ಶರಣಾಗಿದ್ದಾರೆ. ಈ ಹಿನ್ನೆಲೆ ಇವರ ಕಲ್ಯಾಣಕ್ಕಾಗಿ ಬುಧವಾರ ವಿಶೇಷ ಕಾಳಜಿ ಮಾಡಲು ರಷ್ಯಾ ನಿರ್ಧರಿಸಿದೆ.
ಕಳೆದ 24 ಗಂಟೆಗಳಲ್ಲಿ 265 ಸೈನಿಕರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗಿದ್ದಾರೆ. ಇದರಲ್ಲಿ 51 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ವೈದ್ಯಕೀಯ ಆರೈಕೆಯ ಅಗತ್ಯವಿರುವವರನ್ನು ನೊವೊಜೊವ್ಸ್ಕ್ ಪಟ್ಟಣದ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಉಕ್ರೇನ್ ಸೈನಿಕರನ್ನು ಯುದ್ಧಾಪರಾಧಿಗಳು ಅಥವಾ ಯುದ್ಧ ಖೈದಿಗಳು ಎಂದು ಪರಿಗಣಿಸಲಾಗುವುದೇ ಎಂದು ಮಂಗಳವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಕ್ತಾರರು ಉತ್ತರವನ್ನು ನೀಡಲಿಲ್ಲ. ಆದರೆ, ಅಂತರರಾಷ್ಟ್ರೀಯ ಕಾನೂನುಗಳ ಪ್ರಕಾರ ಶರಣಾದ ಸೈನಿಕರನ್ನು ನೋಡಿಕೊಳ್ಳಲಾಗುವುದು ಎಂದು ಭರವಸೆ ಕೊಟ್ಟರು.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?