ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮರ್ಯಾದೆ ಹತ್ಯೆ; ಅಳಿಯನನ್ನು ಮಚ್ಚಿನಿಂದ ಕೊಚ್ಚಿ ಮಗಳ ಸೌಭಾಗ್ಯ ಕಿತ್ತುಕೊಂಡ ತಂದೆ

Twitter
Facebook
LinkedIn
WhatsApp
ಮರ್ಯಾದೆ ಹತ್ಯೆ; ಅಳಿಯನನ್ನು ಮಚ್ಚಿನಿಂದ ಕೊಚ್ಚಿ ಮಗಳ ಸೌಭಾಗ್ಯ ಕಿತ್ತುಕೊಂಡ ತಂದೆ

ಬಾಗಲಕೋಟೆ: ಜಿಲ್ಲೆಯಲ್ಲೊಂದು ಮರ್ಯಾದೆ ಹತ್ಯೆ(Honor killing) ನಡೆದಿದೆ. ಅಳಿಯನನ್ನು ಮಚ್ಚಿನಿಂದ ಕೊಚ್ಚಿ ಮಾವ ಕೊಲೆ ಮಾಡಿದ್ದಾನೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಟಕ್ಕೋಡ ಗ್ರಾಮದ ಹನುಮಾನ್ ದೇವಸ್ಥಾನದ ಬಳಿ ಅಳಿಯ ಭುಜಬಲ ಕರ್ಜಗಿ(34)ಯನ್ನು ಮಾವ ತಮ್ಮನಗೌಡ ಕೊಚ್ಚಿ ಕೊಲೆ ಮಾಡಿದ್ದಾನೆ.

ತಮ್ಮನಗೌಡ ಪುತ್ರಿ ಭಾಗ್ಯಶ್ರೀ ಅನ್ಯ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಇದಕ್ಕೆ ಹಗೆ ಸಾಧಿಸುತ್ತಿದ್ದ ತಂದೆ ತನ್ನ ಮಗಳ ಸೌಭಾಗ್ಯವನ್ನೇ ಕಿತ್ತುಕೊಂಡಿದ್ದಾನೆ. ಅಳಿಯನ ಕಣ್ಣಿಗೆ ಕಾರದ ಪುಡಿ ಎರಚಿ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಇನ್ನು ಕೊಲೆ ಆರೋಪಿ ತಮ್ಮನಗೌಡ ಹಾಗೂ ಕೃತ್ಯಕ್ಕೆ ಸಾಥ್ ಕೊಟ್ಟ ಇನ್ನಿಬ್ಬರಿಗಾಗಿ ಪೊಲೀಸರು ಬಲೆ ಬೀಸಿದ್ದು ಹುಡುಕಾಟ ಶುರು ಮಾಡಿದ್ದಾರೆ.

ಒಂದೇ ಗ್ರಾಮದ ಕ್ಷತ್ರೀಯ ಜಾತಿಯ ಭಾಗ್ಯಶ್ರೀ ಹಾಗೂ ಜೈನ ಸಮುದಾಯದ ಭುಜಬಲ ಇಬ್ಬರೂ ಪ್ರೀತಿಸಿ ವರ್ಷದ ಹಿಂದೆ ಮನೆ ಬಿಟ್ಟು ಹೋಗಿ ಮದುವೆ ಆಗಿದ್ದರು. ಬಳಿಕ ಇಬ್ಬರೂ ಟಕ್ಕೋಡ ಗ್ರಾಮದಲ್ಲೇ ಬಂದು ನೆಲೆಸಿದ್ದರು. ಮಗಳ ಮದುವೆಯ ಸೇಡು ಇಟ್ಟುಕೊಂಡಿದ್ದ ತಮ್ಮನಗೌಡ, ಡಿ.17ರ ರಾತ್ರಿ 8.30ಕ್ಕೆ ಅಳಿಯನನ್ನು ಕೊಂದು ಪರಾರಿಯಾಗಿದ್ದಾನೆ. ಈ ಕೃತ್ಯಕ್ಕೆ ಇಬ್ಬರು ಸ್ನೇಹಿತರು ಸಹಾಯ ಮಾಡಿದ್ದಾರೆ ಎಂಬ​ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಘಟನೆ ಸಂಬಂಧ ಸಾವಳಗಿ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ