ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಲವಂತಿಗೆ ಗ್ರಾಮದ ಬಲ್ಲರಾಯನದುರ್ಗ ಕೆಳಭಾಗದಲ್ಲಿ ಸ್ಫೋಟದ ಸದ್ದು!

Twitter
Facebook
LinkedIn
WhatsApp
ಮಲವಂತಿಗೆ ಗ್ರಾಮದ ಬಲ್ಲರಾಯನದುರ್ಗ ಕೆಳಭಾಗದಲ್ಲಿ ಸ್ಫೋಟದ ಸದ್ದು!

ಬೆಳ್ತಂಗಡಿ(ಜು.16): ತಾಲೂಕಿನ ಮಲವಂತಿಗೆ ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಂಚಿನಲ್ಲಿರುವ ಬಲ್ಲರಾಯನದುರ್ಗದ ಕೆಳಭಾಗದಿಂದ ಭಾರಿ ಸ್ಫೋಟದ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿರುವ ಕುರಿತು ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಭಾಗದಲ್ಲಿ ಮಕ್ಕಿ, ಪರ್ಲ, ದೈಪಿತ್ತಿಲು, ಎಲ್ಯರಕಂಡ ಸಹಿತ ಸುತ್ತಮುತ್ತ 16ಕ್ಕೂ ಅಧಿಕ ಮನೆಗಳಿವೆ. ಕಳೆದ ವರ್ಷ ಆಗಸ್ವ್‌ ಅವಧಿಯಲ್ಲಿ ಈ ಪ್ರದೇಶದಲ್ಲಿ ಭಾರಿ ಭೂ ಕುಸಿತ ಉಂಟಾದ ಹಿನ್ನೆಲೆ ಇಲ್ಲಿನ 40ಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಿ ಬೇರೆಡೆ ಆಶ್ರಯ ನೀಡಲಾಗಿತ್ತು.

ಗುರುವಾರ ರಾತ್ರಿ ವೇಳೆಗೆ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಇದೇ ಪ್ರದೇಶದಲ್ಲಿ ಹಾದು ಬರುವ ಹಳ್ಳದಲ್ಲಿ ಮಣ್ಣುಮಿಶ್ರಿತ ನೀರು ಬರುತ್ತಿರುವುದಾಗಿ ಸ್ಥಳೀಯರ ಕೇಶವ ಎಂಬವರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ 250 ಹೇಕ್ಟೇರ್‌ ಅಧಿಕ ಕೃಷಿ ಹೊಂದಿದ್ದು, ಕಳೆದ ಮೂರು ವರ್ಷಗಳ ಹಿಂದೆ ಭೂ ಕುಸಿತ ಉಂಟಾದ ಬಳಿಕ ಅರಣ್ಯ ಇಲಾಖೆಯು ಇಲ್ಲಿನ ಕುಟುಂಬಗಳನ್ನು ಪರಿಹಾರ ಒದಗಿಸಿ ಸ್ಥಳಾಂತರಿಸಲು ನಿರ್ಧರಿಸಿತ್ತು. ಅರಣ್ಯ ಇಲಾಖೆ, ಕಂದಾಯ ಇಲಾಖೆ ಸರ್ವೇ ಕಾರ್ಯ ನಡೆಸಿ ಬಳಿಕ ಯಾವುದೇ ಸ್ಪಂದನೆ ನೀಡದ ಕಾರಣ ಇಲ್ಲಿನ ಮಂದಿ ಅತ್ತ ಸ್ಥಳಾಂತರಗೊಳ್ಳದೆ, ಇತ್ತ ಅಲ್ಲಿಯೂ ವಾಸಿಸಲು ಆಗದೆ ಭಯದಲ್ಲೇ ದಿನದೂಡುವಂತಾಗಿದೆ. ಕಳೆದ ಎರಡು ದಿನಗಳಿಂದ ಚಿಕ್ಕಮಗಳೂರು ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಭೂ ಕುಸಿತ ಉಂಟಾಗುತ್ತಿದೆ. ಇದೀಗ ಮಲವಂತಿಗೆ ಸಮೀಪ ಬಲ್ಲರಾಯನದುರ್ಗದ ಭಾಗದಲ್ಲಿ ಭೂಕುಸಿತ ಉಂಟಾಗಿರುವ ಸಾಧ್ಯತೆ ಎದುರಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist