ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕಳೆದ ಮೂರು ವರ್ಷಗಳಿಂದ ಜುಲೈ, ಆಗಸ್ಟ್ ತಿಂಗಳಲ್ಲಿ ಮಲೆನಾಡಿನಲ್ಲಿ ವರುಣ ಅಬ್ಬರಿಸುತ್ತ ಇದ್ದಾನೆ. ಮಳೆಯ ಅಬ್ಬರ ಜೋರಾಗಿದೆ. ಅಲ್ಲದೆ ಪರ್ವತ ,ಬೆಟ್ಟಗಳ ಕುಸಿತವು ಜೋರಾಗಿದೆ. ಇಂತಹ ಸಂದರ್ಭದಲ್ಲಿ ಈ ಬಾರಿಯೂ ಮಳೆಯ ಅಬ್ಬರ ಜೋರಾದರೆ, ಅದನ್ನು ಎದುರಿಸಲು ಸರಕಾರ ಸಿದ್ಧವಾಗಿದೆಯೇ ಎಂಬ ಪ್ರಶ್ನೆ ಜನತೆಯನ್ನು ಕಾಡುತ್ತಿದೆ.
ಮಲೆನಾಡಿನ ಪ್ರದೇಶಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಕಳೆದ ಮೂರು ವರ್ಷಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದರು.
ಬೆಟ್ಟ ಕುಸಿತಗಳ ಭೀಕರ ಸ್ಥಿತಿಯನ್ನು ಕಳೆದ ಮೂರು ವರ್ಷಗಳಿಂದ ಈ ಪ್ರದೇಶಗಳು ನೋಡುತ್ತ ಬಂದಿವೆ. ಅದರಲ್ಲೂ ಕೊಡಗಿನಲ್ಲಿ ಭೀಕರವಾಗಿ ಬೆಟ್ಟ ಕುಸಿತದ ಪ್ರಸಂಗಗಳು ಜರುಗಿವೆ. ಈ ಬಾರಿ ಏನಾಗಬಹುದು ಎಂದು ಈ ಪ್ರದೇಶದ ಜನರು ಯೋಚಿಸುತ್ತಿದ್ದಾರೆ. ಅದರಲ್ಲೂ ಕೊಡಗಿನ ಮಂದಿ ಈ ಬಾರಿಯೂ ಮಳೆ ಜೋರಾದಾಗ ಆತಂಕಕ್ಕೆ ಒಳಗಾಗುತ್ತಿದ್ದಾರೆ. ಹೆಚ್ಚಾಗಿ ಪ್ರತಿವರ್ಷ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಈ ಪ್ರಕರಣಗಳು ವರದಿಯಾಗಿದ್ದು, ಕೆಲವೇ ದಿನಗಳಲ್ಲಿ ಜುಲೈ ತಿಂಗಳು ನಮ್ಮ ಮುಂದಕ್ಕೆ ಬರಲಿದೆ.
ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕಳೆದ ಮೂರು ವರ್ಷಗಳಿಂದ ಈ ಪ್ರದೇಶದಲ್ಲಿ ಜರುಗಿದ ಬೆಟ್ಟ ಕುಸಿತದ ಪ್ರಕರಣಗಳು ಮತ್ತೊಮ್ಮೆ ಆಗಬಾರದು ಎಂದು ಈ ಪ್ರದೇಶದ ಜನರು ಪ್ರಾರ್ಥಿಸುತ್ತಿದ್ದಾರೆ.
ಜಿಲ್ಲಾಡಳಿತ ಮತ್ತು ಸರಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಹಿಂದಿಗಿಂತಲೂ ಹೆಚ್ಚಾಗಿದೆ. ಯಾಕೆಂದರೆ ಕಳೆದ ಮೂರು ವರ್ಷಗಳ ಅನುಭವಗಳ ಆಧಾರದ ಮೇಲೆ ಈ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಈ ರೀತಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಆಗುವ ಹಾನಿಯನ್ನು ತಪ್ಪಿಸಬಹುದು. ಆ ಮೂಲಕ ಜನರ ಭಯವನ್ನು ಹೋಗಲಾಡಿಸಬಹುದು. ಸರ್ಕಾರ ಮತ್ತು ಜಿಲ್ಲಾಡಳಿತ ಗೆ ಜನರಲ್ಲಿ ಆತಂಕ ಇರದಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಇದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?