ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಧಾರಾಕಾರ ಮಳೆಯ ನಡುವೆ ನಾಯಕರು ವೇದಿಕೆ ಮೇಲೆ ಕೈ ಎತ್ತಿ ಹಿಡಿದು ಶಕ್ತಿ ಪ್ರದರ್ಶಿಸಿದ್ರೆ, ಮತ್ತೊಂದೆಡೆ ಮಳೆಯಲ್ಲಿ ನೆನೆಯುತ್ತಾ ರಾಹುಲ್ ಗಾಂಧಿ ಅಬ್ಬರದ ಭಾಷಣ ಮಾಡಿದರು.
ಮೈಸೂರಿನ ಬಂಡಿಪಾಳ್ಯದಲ್ಲಿ ಧಾರಕಾರ ಮಳೆಯಲ್ಲಿ ನೆನೆಯುತ್ತ ಭಾಷಣ ಮಾಡಿದ ರಾಹುಲ್ ಗಾಂಧಿ, ಭಾರತ್ ಜೋಡೋ ಯಾತ್ರೆ ಯಾವುದೇ ಕಾರಣಕ್ಕೂ ನಿಲ್ಲಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಯಾತ್ರೆ ನಡೆಯುತ್ತಿದೆ. ಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಎಷ್ಟೇ ಹಿಂಸೆ ಕೊಟ್ಟರೂ ಭಾರತ್ ಜೋಡೋ ಯಾತ್ರೆ ನಿಲ್ಲಲ್ಲ. ಗಾಳಿ, ಮಳೆ, ಬಿಸಿಲು ಬಂದರೂ ಜೋಡೋ ಯಾತ್ರೆ ನಿಲ್ಲಲ್ಲ. ಕಾಂಗ್ರೆಸ್ ದೇಶದ ಜನರ ಸಹಾಯಕ ನಿಲ್ಲುತ್ತದೆ. ಯಾತ್ರೆಯಲ್ಲಿ ದ್ವೇಷ, ಅಸೂಯೆ ಇರಲ್ಲ. ಬದಲಿಗೆ ಪ್ರೀತಿ, ಸಹಬಾಳ್ವೆ ಇರುತ್ತೆ ಎಂದು ಗುಡುಗಿದರು.
ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ನೋಟ್ ಬ್ಯಾನ್ನಿಂದಾಗಿ ಸಣ್ಣ ಪುಟ್ಟ, ಮಧ್ಯಮ ವ್ಯಾಪರಸ್ಥರು ಇವತ್ತಿಗೂ ಸಮಸ್ಯೆ ಎದುರಿಸುತ್ತಿದ್ದಾರೆ. ಇದರ ಲಾಭ ಕೇವಲ 3-4 ಉದ್ಯಮಿಗಳಿಗೆ ದೊರೆಯುತ್ತಿದೆ. ಒಂದೆಡೆ ನಿರುದ್ಯೋಗ, ಮತ್ತೊಂದೆಡೆ ಬೆಲೆ ಏರಿಕೆ ಬಿಸಿ. ಆದ್ದರಿಂದ ನಾವು ಜೋಡೋ ಯಾತ್ರೆ ಶುರು ಮಾಡಿದ್ದೇವೆ ಎಂದರು.
ರಾಜ್ಯದಲ್ಲಿ ಬಿಜೆಪಿ ಏನು ಮಾಡ್ತಾ ಇದೆ. ಸಿಎಂ ಹಾಗೂ ಸರ್ಕಾರ ಭ್ರಷ್ಟಾಚಾರದಲ್ಲಿ ದಾಖಲೆ ಬರೆದಿದೆ. ಭ್ರಷ್ಟಾಚಾರದ ಎಲ್ಲಾ ದಾಖಲೆಗಳನ್ನು ಮುರಿದಿದೆ. 40% ಕಮಿಷನ್ ಪಡೆದಿರುವ ಆರೋಪವಿದೆ. ಗುತ್ತಿಗೆದಾರ ಸಂಘದವರು ಪಿಎಂಗೆ ಪತ್ರ ಬರೆದಿದ್ದಾರೆ. 40% ಕಮಿಷನ್ ಸರ್ಕಾರ ಕಮಿಷನ್ ಇಲ್ಲದೆ ಯಾವುದೇ ಕೆಲಸ ಆಗಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?