ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೊಗೋಟಾ: ಕೊಲಂಬಿಯಾದ (Colombia) ಮಹಿಳಾ ಪೊಲೀಸ್ (Women Police) ಅಧಿಕಾರಿಯೊಬ್ಬರು ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ (Social Media) ಭಾರೀ ಸದ್ದು ಮಾಡ್ತಿದ್ದಾರೆ. ಈಕೆಯ ಮಾಡೆಲಿಂಗ್ (Model) ಫೋಟೋಗಳು ಹಾಗೂ ಚಟುವಟಿಕೆಗಳನ್ನು ನೋಡಿ, ಅಭಿಮಾನಿಗಳು ಈಕೆಯನ್ನ ವಿಶ್ವದ ಅತ್ಯಂತ ಸುಂದರ ಮಹಿಳಾ ಪೊಲೀಸ್ (World Beautiful Cop) ಎಂದು ಕರೆದಿದ್ದಾರೆ.
ಆದ್ರೆ ಇಂದಿಗೂ ರಾಷ್ಟ್ರೀಯ ಪೊಲೀಸ್ ಪಡೆಗೆ ಸೇವೆ ಸಲ್ಲಿಸುವುದ್ನು ಗೌರವವೆಂದೇ ಪರಿಗಣಿಸುವ ಮಹಿಳಾ ಪೊಲೀಸ್ ಡಯಾನಾ ರಾಮಿರೆಜ್ (Diana Ramirez) ತನ್ನ ಇನ್ಸ್ಟಾಗ್ರಾಮ್ನಲ್ಲಿ 4 ಲಕ್ಷ ಫಾಲೋವರ್ಸ್ಗಳನ್ನ ಹೊಂದಿದ್ದಾರೆ.
ಮಾಹಿತಿಗಳ ಪ್ರಕಾರ, ವಿಶ್ವದಲ್ಲೇ ಅತ್ಯಂತ ಅಪಾಯಕಾರಿ ನಗರವೆಂದು ಪರಿಗಣಿಸುವ ಕೊಲಂಬಿಯಾದ (Colombia) ಮೆಡಿಲಿನ್ನಲ್ಲಿ ಗಸ್ತು ತಿರುಗುವ ರಾಮಿರೇಜ್ ಆಗಾಗ್ಗೆ ಕೆಲವು ಮಾಡೆಲಿಂಗ್ ಚಟುವಟಿಗಳನ್ನೂ ಮಾಡುತ್ತಾ ಅದನ್ನು ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ಅಭಿಮಾನಿಗಳು ಈಕೆಯನ್ನು ಸಂಪೂರ್ಣ ಮಾಡೆಲಿಂಗ್ ಆಗಿ ಬದಲಾಗುವಂತೆ ಸಲಹೆಗಳು ಕೇಳಿ ಬರುತ್ತಿದ್ದಂತೆ ನಾನು ಮಾಡೆಲ್ ಆಗಲು ಅಥವಾ ಆನ್ಲೈನ್ನಲ್ಲಿ ಫೇಮಸ್ ಆಗಲು ನನ್ನ ಪೊಲೀಸ್ ಉದ್ಯೋಗ(Police Job) ಬಿಟ್ಟುಕೊಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.
ನಾನು ಯಾವುದಕ್ಕೂ ಹಿಂಜರಿಯುವುದಿಲ್ಲ, ಏಕೆಂದರೆ ನನಗೆ ಮತ್ತೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಆದರೂ ನಾನು ಪೊಲೀಸ್ ಅಧಿಕಾರಿಯಾಗಿ ಇರುತ್ತೇನೆ. ಏಕೆಂದರೆ ನಾನು ನಾನಾಗಿ ಇದ್ದೇನೆ, ಅದಕ್ಕಾಗಿ ನನ್ನ ಸಂಸ್ಥೆಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.
ಹೆಚ್ಚಿನ ಡಿಜಿಟಲ್ ಫಾಲೋವರ್ಸ್ಗಳನ್ನು ಹೊಂದಿರುವ ಡಯಾನಾ ವರ್ಷದ ಅತ್ಯುತ್ತಮ ಪೊಲೀಸ್ ಅಥವಾ ಮಿಲಿಟರಿ ಪ್ರಭಾವಿ ಎಂದು ನಾಮನಿರ್ದೇಶನಗೊಂಡಿದ್ದಾರೆ. ಇದರೊಂದಿಗೆ ಪೊಲೀಸ್ ಪಡೆ ಪ್ರತಿನಿಧಿಸುವುದು ನನ್ನ ಗೌರವ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.
ಇದಕ್ಕೆ ಅಭಿಮಾನಿಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಡಯಾನಾ ರಾಮಿರೆಜ್ ಅತ್ಯಂತ ಸುಂದರ ಪೊಲೀಸ್ ಅಧಿಕಾರಿ, ಅಸಾಧಾರಣ ಸುಂದರಿ, ನಾನು ಅವರನ್ನು ಪ್ರೀತಿಸುತ್ತೇನೆ ಎಂದು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ. ಡಯಾನಾ ಅವರ ಅಭಿಪ್ರಾಯಗಳನ್ನು ಸಂತೋಷದಿಂದಲೇ ಸ್ವೀಕರಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?