ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು
ಕೊಪ್ಪಳ(30-11-2021): ಯಾರ ನಾಲಗೆಯನ್ನು ಕಟ್ಟಿಹಾಕಿದ್ರೂ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರ ಬಾಯಿ ಮುಚ್ಚಿಸುವುದು ನಿಜಕ್ಕೂ ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಈಶ್ವರಪ್ಪ ಅಲವು ಬಾರಿ ಮಾತನಾಡಿ ವಿವಾದನ್ನು ಸೃಷ್ಟಿಸಿದ್ದರು. ಇದೀಗ ಈ ಬಾರಿ ಕೊಟ್ಟ ಹೇಳಿಕೆ ಬಿಜೆಪಿಗೆ ಮುಜುಗರ ತರಿಸುವಂತೆ ಮಾಡಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಮಾತನಾಡುತ್ತಿದ್ದ ಈಶ್ವರಪ್ಪ, ಆಪರೇಶನ್ ಕಮಲದ ವಿಚಾರವನ್ನು ಪ್ರಸ್ತಾಪಿಸಿ ಶಾಸಕರನ್ನು ಬಿಜೆಪಿ ಖರೀದಿಸಿರುವ ಬಗ್ಗೆ ಪರೋಕ್ಷವಾಗಿ ಸುಳಿವನ್ನು ನೀಡಿದ್ದಾರೆ. ಇದು ಬಿಜೆಪಿಗರಿಗೆ ಮುಜುಗರವನ್ನುಂಟು ಮಾಡಿದೆ.
ರಾಜ್ಯದಲ್ಲಿ ನಾಲ್ಕು ಬಾರಿ ಬಿಜೆಪಿ ಅಧಿಕಾರಕ್ಕೆ ಬಂತು, ಯಡಿಯೂರಪ್ಪನವರು ಮುಖ್ಯಮಂತ್ರಿಗಳಾದರು. ಆದರೆ, ನಮ್ಮ ದುರಾದೃಷ್ಟ ಪೂರ್ಣ ಬಹುಮತ ಸಿಗಲಿಲ್ಲ. ಹಾಗಾಗಿ, ಅವನ್ಯಾರನ್ನೋ ಕರೆದುಕೊಂಡು ಬಾ..ಅವನಿಗೆ ದುಡ್ಡು ಕೊಡು. ಇದೇ ಆಯಿತು ಎಂದು ಸಚಿವ ಈಶ್ವರಪ್ಪ ಹೇಳುವ ಮೂಲಕ ಆಪರೇಶನ್ ಕಮಲದ ಬಗ್ಗೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಹಾನ್ ದೇಶಭಕ್ತ, ಸಿದ್ದರಾಮಯ್ಯನವರ ಕಣಕಣದಲ್ಲೂ ಮೋಸಗಾರಿಕೆ ಇದೆ, ಅವರು ಮಹಾನ್ ಕುಡುಕ, ಅದ್ಯಾವಾಗ ಕುಡಿಯುತ್ತಾರೆ ಎನ್ನುವುದು ಗೊತ್ತಾಗುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?