ಭಾರತವು ಮಾತನಾಡಲು ಅವಕಾಶವಿಲ್ಲದ ದೇಶವಾಗಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ. ಲಂಡನ್ನಲ್ಲಿ ನಡೆದ ‘ಐಡಿಯಾಸ್ ಫಾರ್ ಇಂಡಿಯಾ’ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ ರಾಹುಲ್, ‘‘ನಾನು ಕೇಳಲು ಬಯಸುತ್ತೇನೆ ಎಂಬ ಮನೋಭಾವವನ್ನು ಪ್ರಧಾನಿಯಾದವರು ಹೊಂದಿರಬೇಕು. ಆದರೆ ನಮ್ಮ ಪ್ರಧಾನಿ ಮಾತುಗಳನ್ನು ಕೇಳಿಸಿಕೊಳ್ಳುತ್ತಿಲ್ಲ’’ ಎಂದು ಟೀಕಿಸಿದ್ದಾರೆ. ಮುಂದುವರೆದು ಮಾತನಾಡಿದ ಅವರು, ‘‘ಮಾತನಾಡಲು ಅನುಮತಿಸದ ದೇಶವನ್ನು ಮತ್ತು ಮುಕ್ತವಾಗಿ ಮಾತನಾಡದ ಪ್ರಧಾನಿಯನ್ನು ನಾವು ಹೊಂದಲು ಸಾಧ್ಯವಿಲ್ಲ’’ ಎಂದಿದ್ದಾರೆ.
ಚರ್ಚೆಯ ವೇಳೆ ರಾಹುಲ್ ಗಾಂಧಿ ಬಿಜೆಪಿ ಮತ್ತು ಆರ್ಎಸ್ಎಸ್ ಸಂಘಟನೆಗಳನ್ನೂ ಟೀಕಿಸಿದ್ದಾರೆ. ‘‘ಭಾರತವೆಂದರೆ ಅದರ ಜನರು ಎಂದು ನಾವು ನಂಬುತ್ತೇವೆ. ಆದರೆ ಬಿಜೆಪಿ ಮತ್ತು ಆರೆಸ್ಸೆಸ್ ಭಾರತವು ಕೇವಲ ಭೌಗೋಳಿಕ ಪ್ರದೇಶ ಎಂದು ನಂಬುತ್ತದೆ. ಇದು ‘ಸೋನೆ ಕಿ ಚಿಡಿಯಾ’ (ಚಿನ್ನದ ಹಕ್ಕಿ) ಆಗಿದ್ದು, ಅದರ ಪ್ರಯೋಜನಗಳು ಕೆಲವರಿಗೆ ಮಾತ್ರ ಸಿಗುತ್ತವೆ. ನಮ್ಮ ಪ್ರಕಾರ ನೀವು ದಲಿತರಾಗಿದ್ದರೂ, ಬ್ರಾಹ್ಮಣರಾಗಿದ್ದರೂ ಎಲ್ಲರಿಗೂ ಸಮಾನ ಪ್ರವೇಶ ಇರಬೇಕು’’ ಎಂದು 51 ವರ್ಷದ ರಾಹುಲ್ ಹೇಳಿದ್ದಾರೆ.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?