ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಧ್ಯಮದವರು ಬಂದು ಮುಖ ತೋರಿಸುವವರೆಗೂ ನಾ ಇಳಿಯಲ್ಲ ;ಟಿಕೆಟ್ ಕೊಡಲಿಲ್ಲವೆಂದು ಟವರ್ ಏರಿ ಕುಳಿತ ಬಿಜೆಪಿ ಕಾರ್ಯಕರ್ತ

Twitter
Facebook
LinkedIn
WhatsApp
census1655064901 2

ಚಿಕ್ಕಮಗಳೂರು: ಟಿಕೆಟ್ ಸಿಗದ ಹಿನ್ನೆಲೆ ಮನನೊಂದು ಬಿಜೆಪಿ ಕಾರ್ಯಕರ್ತನೋರ್ವ (BJP Worker) 100 ಅಡಿ ಎತ್ತರದ ಟವರ್ (Tower) ಏರಿ ಆತ್ಮಹತ್ಯೆಯ ಬೆದರಿಕೆ ಒಡ್ಡಿರುವ ಘಟನೆ ಜಿಲ್ಲೆಯ ಅಜ್ಜಂಪುರ (Ajjampur) ತಾಲೂಕಿನ ಶಿವನಿ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.

ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಸಿರುವ ರಂಗಪ್ಪ ಬೋವಿಯನ್ನು ಕೆಳಗಿಳಿಸಲು ಪೊಲೀಸರು ಹಾಗೂ ಸ್ಥಳೀಯರು ಹರಸಹಾಸಪಡುತ್ತಿದ್ದಾರೆ. ಟಿವಿಯವರು ಬಂದು ಮುಖ ಹಾಗೂ ಲೋಗೋ ತೋರಿಸುವವರೆಗೂ ನಾನು ಕೆಳಗೆ ಇಳಿಯುವುದಿಲ್ಲ ಎಂದು ರಂಗಪ್ಪ ಹಠಕಟ್ಟಿದ್ದಾನೆ.

ನಾನು ಚುನಾವಣೆಗೆ ಸ್ಪರ್ಧಿಸಿದರೆ ಬಿಜೆಪಿಯಿಂದಲೇ ಸ್ಪರ್ಧಿಸಬೇಕು. ಎಸ್‌ಸಿ, ಎಸ್‌ಟಿ ಸಮಾಜಕ್ಕೆ ಮುಂದೆ ಆಗುತ್ತದೆ ಎಂದು ಹೇಳುವುದಕ್ಕಿಂತ ಹಿಂದಿನಿಂದಲೂ ಕೂಡ ಅನ್ಯಾಯವಾಗಿದೆ. ದಲಿತ ಜನರಲ್ಲಿ ಒಗ್ಗಟ್ಟಿಲ್ಲ ಎಂಬ ಭಾವನೆ ಮೂಡಿದೆ. ನೀವೆಲ್ಲ ಸೇರಿ ನನ್ನನ್ನು ಉಳಿಸಿಕೊಳ್ಳುವುದಾದರೆ ಉಳಿಸಿಕೊಳ್ಳಿ. ಇಲ್ಲವಾದರೆ ಕೆಳಗೆ ಬೀಳುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.

ನನ್ನನು ಏಳುವರೆ ವರ್ಷದ ಹಿಂದೆ ಕರೆದರು. ನೋಡೋದಕ್ಕೆ ಒಳ್ಳೆಯ ಆಳು. ನಿನ್ನನ್ನು ನೋಡಿದರೆ ಜನ ಹೆದರುತ್ತಾರೆ, ಹಣ ಕೊಡುತ್ತಾರೆ. ರೌಡಿಸಂ ಹಾಗೂ ರಿಯಲ್ ಎಸ್ಟೇಟ್‌ಗೆ ಬಾ ಎಂದು ಕರೆದರು. ಆದರೆ ನಾನು ಹೋಗಲಿಲ್ಲ. ನನಗೆ ಡಿಗ್ರಿ ಹಾಗೂ ಡಬಲ್ ಡಿಗ್ರಿ ಓದಿರುವ ಮೂವರು ಮಕ್ಕಳಿದ್ದಾರೆ. ಅವರಿಗೂ ಕೂಡಾ ಫೋನ್ ಆಪರೇಷನ್ ಮೂಲಕ ಕೆಲಸ ಸಿಗದಂತೆ ಮಾಡಿದ್ದಾರೆ. ನನ್ನ ಖಾತೆಯಲ್ಲಿದ್ದ ಹಣವನ್ನೂ ಹ್ಯಾಕ್ ಮಾಡಿದ್ದಾರೆ. ನಾನು ಶಿಕ್ಷಕರು, ಸೈನಿಕರು, ಆರಕ್ಷಕರಿಗೆ ತುಂಬಾ ಬೆಲೆ ಕೊಡುತ್ತೇನೆ. ನಾನು ಸತ್ತರೂ ಕೂಡ ನನ್ನ ಮಕ್ಕಳಿಗಾದರೂ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದಾನೆ.

ನನಗಾದ ನೋವು ಬೇರೆ ಯಾವ ಸಣ್ಣ ಹಾಗೂ ಬಡ ಸಮಾಜಗಳಿಗೆ ಆಗಬಾರದು ಎಂದು ಹೇಳಿದ್ದು, ಟವರ್ ಹತ್ತಿ ವೀಡಿಯೋ ರೆಕಾರ್ಡ್ ಮಾಡಿದ್ದಾನೆ. ವೀಡಿಯೋದಲ್ಲಿ ಆತ ಉದ್ಭವ ಆಂಜನೇಯ ಸ್ವಾಮಿ, ನಿರಂಜನ ಸ್ವಾಮೀಜಿಗೆ ವಂದನೆ ತಿಳಿಸಿದ್ದಾನೆ. ಆತನನ್ನು ಟವರ್‌ನಿಂದ ಕೆಳಗಿಳಿಸಲು ಅಜ್ಜಂಪುರ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ