ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

 ಮಾಸ್ಕ್ ಹಾಕಿ ಸಾಗರ ಜಾತ್ರೆ ಸುತ್ತಾಡಿದ ದಿವ್ಯಾ ಉರುಡುಗ

Twitter
Facebook
LinkedIn
WhatsApp
ಮಾಸ್ಕ್ ಹಾಕಿ ಸಾಗರ ಜಾತ್ರೆ ಸುತ್ತಾಡಿದ ದಿವ್ಯಾ ಉರುಡುಗ

ದಿವ್ಯಾ ಉರುಡುಗ (Divya Uruduga) ಅವರು ಎರಡು ಬಾರಿ ಬಿಗ್ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧೆ ಮಾಡಿ ಬಂದಿದ್ದಾರೆ. ಅವರು ಸ್ಪರ್ಧೆ ಮಾಡಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್​ 9’ ಕಳೆದ ವರ್ಷಾಂತ್ಯಕ್ಕೆ ಪೂರ್ಣಗೊಂಡಿದೆ. ‘ಬಿಗ್​ ಬಾಸ್​​’ನಿಂದ ದಿವ್ಯಾ ಉರುಡುಗ ಖ್ಯಾತಿ ಹೆಚ್ಚಿದೆ. ಈಗ ದಿವ್ಯಾ ಉರುಡುಗ ಅವರು ಸಾಗರದ ಜಾತ್ರೆಯಲ್ಲಿ ಮಾಸ್ಕ್ ಹಾಕಿ ಸುತ್ತಾಡಿದ್ದಾರೆ. ಈ ವಿಡಿಯೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ದಿವ್ಯಾ ಉರುಡುಗ ಅವರು ತೀರ್ಥಹಳ್ಳಿಯವರು. ಅವರಿಗೆ ಊರಿನ ಬಗ್ಗೆ ಸಾಕಷ್ಟು ಪ್ರೀತಿ ಇದೆ. ಅನೇಕ ಬಾರಿ ಇದನ್ನು ಅವರು ಹೇಳಿಕೊಂಡಿದ್ದಿದೆ. ಈಗ ದಿವ್ಯಾ ಉರುಡುಗ ಅವರು ಸಾಗರದ ಜಾತ್ರೆಗೆ ತೆರಳಿದ್ದಾರೆ. ಈ ವಿಡಿಯೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕಂಡರೆ ಮುತ್ತಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಮಾಸ್ಕ್ ಹಾಕಿ ಅವರು ಓಡಾಡಿದ್ದಾರೆ. ಹೀಗಾಗಿ, ಅವರನ್ನು ಗುರುತಿಸೋದು ಕಷ್ಟವಾಗಿದೆ.

ದಿವ್ಯಾ ಉರುಡುಗ ಹಂಚಿಕೊಂಡಿರುವ ರೀಲ್ಸ್​ಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ನಾನು ಜಾತ್ರೆಯಲ್ಲಿದ್ದರೂ ನಿಮ್ಮನ್ನು ಗುರುತಿಸೋಕೆ ಸಾಧ್ಯವಾಗಲಿಲ್ಲವಲ್ಲ’ ಎಂದಿದ್ದಾರೆ. ಇನ್ನೂ ಕೆಲವರು ‘ಅರವಿಂದ್ ಕೆಪಿ ಬಂದಿಲ್ಲವೇ, ಅವರಿಗೂ ಜಾತ್ರೆ ತೋರಿಸಬಹುದಿತ್ತು’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.

ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಮೊದಲ ಬಾರಿಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟರು. ಅಲ್ಲಿ ಬೈಕರ್ ಅರವಿಂದ್ ಕೆಪಿ ಪರಿಚಯ ಅವರಿಗೆ ಆಯಿತು. ಇಬ್ಬರೂ ಪರಸ್ಪರ ಪ್ರೀತಿಸೋಕೆ ಆರಂಭಿಸಿದರು. ಈ ಕಾರಣಕ್ಕೂ ಅವರು ಹೆಚ್ಚು ಗಮನ ಸೆಳೆದರು. ಎಂಟನೇ ಸೀಸನ್​ನಲ್ಲಿ ಅವರು ಎರಡನೇ ರನ್ನರ್ ಅಪ್ ಆದರು. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲೂ ದಿವ್ಯಾ ಸ್ಪರ್ಧೆ ಮಾಡಿದ್ದರು. ಅರವಿಂದ್ ಇಲ್ಲ ಎನ್ನುವ ಕಾರಣಕ್ಕೆ ಅವರು ಕೊಂಚ ಡಲ್ ಆದರು. ಆದರೆ, ಕೊನೆಯಲ್ಲಿ ಒಳ್ಳೆಯ ಪರ್ಫಾರ್ಮೆನ್ಸ್ ನೀಡಿದರು. 9ನೇ ಸೀಸನ್​ನಲ್ಲಿ ದಿವ್ಯಾ ಉರುಡುಗ ಅವರು ನಾಲ್ಕನೇ ರನ್ನರ್ ಅಪ್ ಆದರು.

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಈ ಚಿತ್ರಕ್ಕೆ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ