ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ಮೂಡುಬಿದ್ರೆ,ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಆಶ್ರಯದಲ್ಲಿ ಮಾರ್ಚ್ 1 ರಂದು ಸಂಜೆ 6.45 ಕ್ಕೆ, ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ರಂಗಾಯಣ ಶಿವಮೊಗ್ಗ ಅಭಿನಯಿಸುವ “ವಿ ದ ಪೀಪಲ್ ಆಫ್ ಇಂಡಿಯಾ” ನಾಟಕದ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕ ಸರಕಾರದ “ಸರ್ವರಿಗೂ ಸಂವಿಧಾನ” ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಈ ನಾಟಕ ಸಂವಿಧಾನದ ಪ್ರಮುಖ ಆಶಯಗಳನ್ನು ಮತ್ತು ಸಂವಿಧಾನದ ಸ್ಪೂರ್ತಿಯನ್ನು ಆಧರಿಸಿದ ಒಂದು ದೃಶ್ಯಕಾವ್ಯವಾಗಿರುತ್ತದೆ.
ಜನಪದ ಸೊಗಡಿನೊಂದಿಗೆ ಅತ್ಯಂತ ಕಲಾತ್ಮಕವಾಗಿ ಕಟ್ಟಲಾದ ಈ ನಾಟಕದ ಮೂಲಕ ಸಂವಿಧಾನದ ಆಶಯಗಳನ್ನು ಜನರತ್ತ ಒಯ್ಯುವ ಪ್ರಯತ್ನ ಮಾಡಲಾಗಿದೆ.
ಹೆಸರಾಂತ ಸಾಹಿತಿ ರಾಜಪ್ಪ ದಳವಾಯಿ ರಚಿಸಿದ ‘ವಿ ದ ಪೀಪಲ್ ಆಫ್ ಇಂಡಿಯಾ’ ನಾಟಕವನ್ನು ಯುವ ರಂಗಕರ್ಮಿ
ಲಕ್ಣ್ಮಣ ಕೆ.ಸಿ.ನಿರ್ದೇಶಿಸಿದ್ದಾರೆ.
ಸಮಯಕ್ಕೆ ಸರಿಯಾಗಿ ಆರಂಭವಾಗುವ ಈ ನಾಟಕಕ್ಕೆ ಪ್ರವೇಶ ಉಚಿತವಾಗಿದ್ದು, ಸಂವಿಧಾನದ ಬಗ್ಗೆ ಗೌರವವಿರುವವರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಈ ನಾಟಕವನ್ನು ವೀಕ್ಷಿಸಬೇಕೆಂದು ಸಂಸ್ಥೆಯ ಅಧ್ಯಕ್ಷರಾದ ಡಾ| ಎಂ.ಮೋಹನ ಆಳ್ವರು ತಿಳಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?