ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಗಾರು ಪ್ರವೇಶ : ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಮಳೆಯ ಅಬ್ಬರ

Twitter
Facebook
LinkedIn
WhatsApp
ಮುಂಗಾರು ಪ್ರವೇಶ : ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಮಳೆಯ ಅಬ್ಬರ

ಬೆಂಗಳೂರು: ಮುಂಗಾರು ಪ್ರವೇಶ ( Monsoon Access ) ಕ್ಕೆ ಮುನ್ನವೇ ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಬ್ಬರ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೈಸೂರು, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.

ಉಡುಪಿಯಲ್ಲಿ ಶುಕ್ರವಾರ ರಜೆ ಘೋಷಿಸಲಾಗಿದೆ. ಸಿಡಿಲು ಬಡಿದು ಇಬ್ಬರು ಸೇರಿದಂತೆ ಒಟ್ಟು ಮೂರು ಮಂದಿ ಮಳೆ ಸಂಬಂಧಿ ಘಟನೆಗಳಲ್ಲಿ ಮೃತ​ಪ​ಟ್ಟಿ​ದ್ದಾ​ರೆ.

ಚಿತ್ರದುರ್ಗ, ಕೊಡಗು, ಶಿವಮೊಗ್ಗ, ದಾವಣಗೆರೆ, ಮಂಡ್ಯ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ರಾತ್ರಿಯಿಂದೀಚೆಗೆ ಭರ್ಜರಿ ಮಳೆಯಾಗಿದ್ದು, ಈ ಜಿಲ್ಲೆಗಳಲ್ಲಿ 60ಕ್ಕೂ ಹೆಚ್ಚು ಮನೆಗಳಿಗೆ ಕೆರೆ ಹಾಗೂ ಚರಂಡಿ ನೀರು ನುಗ್ಗಿದೆ. ಕೊಪ್ಪಳದಲ್ಲಿ ಸಂಗನಾಳ-ಕರಮುಡಿ ಗ್ರಾಮದ ನಡುವಿನ ಸೇತುವೆ ಕೊಚ್ಚಿಹೋಗಿ 4 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಬಳ್ಳಾರಿಯ 37 ಮನೆಗಳು ಸೇರಿ ರಾಜ್ಯದಲ್ಲಿ 80ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಚಿಕ್ಕಮಗಳೂರು, ಮೈಸೂರು, ಹಾಸನ, ರಾಮನಗರ, ಬಳ್ಳಾರಿ, ಧಾರವಾಡ, ಹಾವೇರಿ, ಬಳ್ಳಾರಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ಬೆಂಗಳೂರು, ರಾಯಚೂರು ಮತ್ತು ಕಲಬುರಗಿಯಲ್ಲಿ ಮಳೆಯಬ್ಬರ ಕಡಿಮೆ ಇದ್ದರೂ ಇಡೀ ದಿನ ಜಡಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಮಂಡ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಸುರಿ​ಯು​ತ್ತಿ​ರುವ ಬೇಸಿಗೆ ಮಳೆ ಭಾರಿ ಅನಾ​ಹು​ತ​ವನ್ನೇ ಸೃಷ್ಟಿ​ಸಿ​ದೆ. ಹಲವು ಕೆರೆ​ಕ​ಟ್ಟೆ​ಗಳು ತುಂಬಿ​ ಹರಿ​ಯು​ತ್ತಿ​ರುವ ಹಿನ್ನೆ​ಲೆ​ಯಲ್ಲಿ ನಗ​ರದ ಹಲವು ಬಡಾ​ವ​ಣೆ​ಗ​ಳಿಗೆ ನೀರು ನುಗ್ಗಿ ಅವಾಂತರವಾಗಿದೆ. ಹಾಲ​ಹಳ್ಳಿ, ಶಂಕ​ರ​ಪು​ರದ ಹಲವು ಮನೆ​ಗ​ಳಿಗೆ ನೀರು ನುಗ್ಗಿ ಜನ ರಾತ್ರಿ​ಯಿಡೀ ಜಾಗ​ರಣೆ ಮಾಡಿದ್ದಾರೆ. ಮೇಲುಕೋಟೆ ರಸ್ತೆಯಲ್ಲಿರುವ ಎನ್‌.ಎಫ್‌. ಇಂಡಸ್ಟ್ರೀಸ್‌ಗೆ ನೀರು ನುಗ್ಗಿ ಅಪಾ​ರ ಪ್ರಮಾ​ಣದ ಖಾರದ ಪುಡಿ ನೀರು​ಪಾ​ಲಾ​ಗಿ​ದೆ.

ಮಂಡ್ಯದ ಇಂಡುವಾಳು ಬಳಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ನಿರ್ಮಿಸಿದ ಸೇತುವೆಯೊಂದು ಕೊಚ್ಚಿಹೋಗಿದ್ದು, ಕೆಲ​ಕಾಲ ಸಂಚಾರ ಅಸ್ತ​ವ್ಯ​ಸ್ತ​ಗೊಂಡಿ​ತ್ತು. ಹಳ್ಳ​ದಲ್ಲಿ ನೀರಿನ ರಭಸ ಹೆಚ್ಚಾದ ಕಾರಣ ಈ ಘಟನೆ ನಡೆ​ದಿ​ದೆ.

ಕರಾ​ವಳಿ ಜಿಲ್ಲೆ​ಗ​ಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನ​ಡ​ದಲ್ಲಿ ಭರ್ಜರಿ ಮಳೆ​ಯಾ​ಗಿ​ದೆ. ಗುರು​ವಾರ ಮಳೆಯ ತೀವ್ರತೆ ಕಡಿಮೆ ಇತ್ತಾ​ದರೂ ಬುಧ​ವಾರ ರಾತ್ರಿ​ಯಿಂದ ಬಿರು​ಸಿನ ಮಳೆ ಸುರಿ​ದ ಕಾರಣ ಪ್ರವಾ​ಹದ ಆತಂಕ ಸೃಷ್ಟಿ​ಸಿದೆ. ಕೊಡಗಿನ​ಲ್ಲೂ ಉತ್ತಮ ಮಳೆ​ಯಾ​ಗು​ತ್ತಿ​ದ್ದು, ಚಿಕ್ಲಿಹೊಳೆ ಜಲಾಶಯ ತುಂಬಿ ಹರಿಯಲಾರಂಭಿಸಿದೆ. ಮಳೆಯಿಂದಾಗಿ ಮಡಿಕೇರಿ-ಚೆಟ್ಟಳ್ಳಿ ರಸ್ತೆಯಲ್ಲಿ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿಯಲಾರಂಭಿಸಿದ್ದು, ರಸ್ತೆ ಸಂಪರ್ಕ ಕಡಿತಗೊಳ್ಳುವ ಆತಂಕ ಎದುರಾಗಿದೆ.

ದಾವ​ಣ​ಗೆ​ರೆ​ಯಲ್ಲಿ 2 ಸಾವಿರ ಎಕ​ರೆಗೂ ಹೆಚ್ಚು ಬೆಳೆ ಹಾನಿ​ಯಾ​ಗಿದೆ. ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದ ಯುವ ರೈತ ನಾಗರಾಜ (28 ವರ್ಷ) ನೀರಿ​ನಲ್ಲಿ ಮುಳು​ಗಿದ್ದ ಪಂಪ್‌ಸೆಟ್‌ ತೆರವು ಮಾಡಲು ಹೋಗಿದ್ದಾಗ ವಿದ್ಯುತ್‌ ತಗುಲಿ ಮೃತಪಟ್ಟಿದ್ದಾರೆ.

ಬೀದರ್‌, ಯಾದ​ಗಿ​ರಿಯಲ್ಲಿ ಮಳೆ​ಯ​ಬ್ಬರ ಕಡಿಮೆ ಇದ್ದರೂ ಸಿಡಿಲು-ಗಾಳಿಯಬ್ಬ​ರಕ್ಕೆ ಹಲವು ಮನೆ​ಗಳ ಚಾವಣಿಗೆ ಹಾನಿ​ಯಾ​ಗಿದೆ. ಸಿಡಿಲು ಬಡಿದು ಯಾದ​ಗಿ​ರಿ​ಯ ಹುಣ​ಸಗಿ ತಾಲೂ​ಕಿನ ವರ​ಹಟ್ಟಿಗ್ರಾಮ​ದಲ್ಲಿ ಭೀಮಪ್ಪ, ಬೀದ​ರ್‌​ನಲ್ಲಿ ಚಿಮಕೋಡ ಗ್ರಾಮದ ವಿದ್ಯಾವತಿ ಟೊಳ್ಳೆ (52) ಮೃತ​ಪ​ಟ್ಟಿ​ದ್ದಾ​ರೆ.

ಕೊಪ್ಪ​ಳ​ದ ಹಿರೇಸಿಂದೋಗಿ ಗ್ರಾಮದ ಚನ್ನಳ್ಳ ತುಂಬಿ ಕಾಟ್ರಳ್ಳಿ ಶಾಲೆಗೆ ನೀರು ನುಗ್ಗಿದ್ದರಿಂದ ಮುನ್ನೆ​ಚ್ಚ​ರಿಕಾ ಕ್ರಮ​ವಾಗಿ ಮಕ್ಕ​ಳನ್ನು ಮನೆಗೆ ಕಳು​ಹಿ​ಸ​ಲಾ​ಗಿದೆ. ಅದೇ ರೀತಿ ಚಿತ್ರದುರ್ಗ ಹೊರವಲಯದ ಮಲ್ಲಾಪುರ ಕೆರೆ ಭರ್ತಿಯಾಗಿ ಕೋಡಿ ಬಿದ್ದ ಕಾರಣ ಸಮೀ​ಪದ ಸರ್ಕಾರಿ ಶಾಲೆಗೆ ನೀರು ನುಗ್ಗಿ ಸಮಸ್ಯೆ ಸೃಷ್ಟಿ​ಸಿ​ದ್ದು, 2 ದಿನ ಶಾಲೆಗೆ ರಜೆ ಘೋಷಿ​ಸ​ಲಾ​ಗಿ​ದೆ.

ಮಳೆ​ಯಿಂದಾಗಿ ಮುನ್ನೆ​ಚ್ಚ​ರಿಕಾ ಕ್ರಮ​ವಾಗಿ ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ಶಿವ​ಮೊ​ಗ್ಗ​ದಲ್ಲಿ ಶಾಲೆ​ಗ​ಳಿಗೆ ಗುರುವಾರ ರಜೆ ಘೋಷಿ​ಸ​ಲಾ​ಗಿತ್ತು. ಉಡು​ಪಿ​ಯಲ್ಲಿ ಭಾರೀ ಮಳೆಯ ಮುನ್ಸೂ​ಚನೆ ಹಿನ್ನೆ​ಲೆ​ಯಲ್ಲಿ ಶುಕ್ರ​ವಾರ ಶಾಲೆ​ಗ​ಳಿಗೆ ರಜೆ ಘೋಷಿ​ಸ​ಲಾ​ಗಿ​ದೆ.

ಕೊಡ​ಗಿ​ನಲ್ಲಿ ಭಾರೀ ಮಳೆ​ಯಾ​ಗು​ತ್ತಿ​ರುವ ಹಿನ್ನೆ​ಲೆ​ಯಲ್ಲಿ ಕಂಟೈ​ನರ್‌ ಲಾರಿ​ಯೊಂದು ಚಾಲ​ಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡ​ಲಾಗಿ ಉರು​ಳಿದ ಪರಿ​ಣಾ​ಮ ಮಡಿಕೇರಿ-ಕುಶಾಲನಗರ ಹೆದ್ದಾರಿಯ ಸಿಂಕೋನ ಬಳಿ ಕೆಲ​ಕಾಲ ವಾಹನ ಸಂಚಾರ ಅಸ್ತ​ವ್ಯ​ಸ್ತ​ಗೊಂಡಿ​ತ್ತು. ಒಂದು ಗಂಟೆಗಳ ಕಾಲ ರಸ್ತೆ ಬಂದ್‌ ಆಗಿದ್ದರಿಂದ ಕಿಲೋ​ಮೀ​ಟ​ರ್‌​ಗ​ಟ್ಟಲೆ ವಾಹ​ನ​ಗಳು ಸಾಲು ನಿಂತಿ​ದ್ದ​ವು.

ಪೂರ್ವ ಮುಂಗಾರು ಮಳೆಯಿಂದ ರಾಜ್ಯದಲ್ಲಿ 23 ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಈವರೆಗೆ ರಾಜ್ಯದಲ್ಲಿ 204 ಹೆಕ್ಟೇರ್‌ ಕೃಷಿ ಹಾಗೂ 431 ಹೆಕ್ಟೇರ್‌ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಬೆಳೆ ಹಾನಿಗೆ ಶೀಘ್ರ ಪರಿಹಾರ ವಿತರಿಸಲು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಮಾಹಿತಿ ನೀಡಿದ್ದಾರೆ. ಅವರು ಮಳೆ ಅನಾಹುತದ ಬಗ್ಗೆ ಗುರುವಾರ ಅಧಿಕಾರಿಗಳ ಸಭೆ ನಡೆಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ