ಮುಖದ ಮೇಲೆ ಭಾರತದ ತ್ರಿವರ್ಣ ಧ್ವಜದ ಬಣ್ಣವನ್ನು ಹಚ್ಚಿಕೊಂಡಿದ್ದ ಯುವತಿಗೆ ಗೋಲ್ಡನ್ ಟೆಂಪಲ್ಗೆ ಪ್ರವೇಶ ನಿರಾಕರಣೆ
ಪಂಜಾಬ್ನ ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್(Golden Temple) ನಲ್ಲಿ ಯುವತಿಯೊಬ್ಬಳು ತನ್ನ ಮುಖದ ಮೇಲೆ ಭಾರತದ ತ್ರಿವರ್ಣ ಧ್ವಜದ ಬಣ್ಣವನ್ನು ಹಚ್ಚಿಕೊಂಡಿದ್ದಾಳೆ ಎನ್ನುವ ಒಂದೇ ಒಂದು ಕಾರಣಕ್ಕೆ ಪ್ರವೇಶವನ್ನು ನಿರಾಕರಿಸಿರುವ ಘಟನೆ ನಡೆದಿದೆ. ಇದಾದ ನಂತರ ಧಾರ್ಮಿಕ ಮತ್ತು ಆಧ್ಯಾತ್ಮಿಕ ವ್ಯಕ್ತಿಗಳ ಜೊತೆಗೆ ಸಿನಿಮಾ ನಟರು ಕೂಡ ಈ ಬಗ್ಗೆ ಟ್ವಿಟ್ಟರ್ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಸ್ಕಾನ್ನ ಉಪಾಧ್ಯಕ್ಷ ಮತ್ತು ವಕ್ತಾರ ರಾಧಾರಾಮನ್ ದಾಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಘಟನೆಗೆ ಕಾರಣರಾದವರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇಂತಹ ಚಟುವಟಿಕೆಗಳನ್ನು ಸಮಯಕ್ಕೆ ಸರಿಯಾಗಿ ನಿಲ್ಲಿಸದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂದು ರಾಧಾರಾಮನ್ ದಾಸ್ ಹೇಳಿದರು.
Woman denied entry to Golden Temple because she had a India ?? flag painted on her face!
— HARSH KESHRI (@HarshKeshri2209) April 17, 2023
The man who denied her entry into Golden Temple said this is Punjab, not India@AmitShah @PMOIndia @narendramodi @GoldenTempleInd @ArvindKejriwal
Is bande ko Pakistan ke Punjab bhejo pic.twitter.com/nSgbOxVkoN
ರಾಧಾರಾಮನ್ ದಾಸ್ ಟ್ವೀಟ್ ನಲ್ಲಿ ಇದು ಆಘಾತಕಾರಿ ಮುಖದ ಮೇಲೆ ಭಾರತದ ಧ್ವಜದ ಹಚ್ಚೆ ಹಾಕಿಸಿಕೊಂಡಿದ್ದ ಕಾರಣಕ್ಕೆ ಯುವತಿಯನ್ನು ಗೋಲ್ಡನ್ ಟೆಂಪಲ್ ಪ್ರವೇಶಿಸದಂತೆ ತಡೆಹಿಡಿಯಲಾಗಿತ್ತು. ಈ ಖಲಿಸ್ತಾನಿಯನ್ನು ಕೂಡಲೇ ಬಂಧಿಸಬೇಕು. ದಿನದಿಂದ ದಿನಕ್ಕೆ ಅವರ ದುರಹಂಕಾರ ಹೆಚ್ಚಾಗುತ್ತಿರುವುದರಿಂದ ಅವರನ್ನು ನಿರ್ಲಕ್ಷಿಸುವುದು ಪರಿಹಾರವಲ್ಲ. ಅದೇ ಸಮಯದಲ್ಲಿ, ಚಲನಚಿತ್ರ ನಟ ದೇವೋಲೀನಾ ಭಟ್ಟಾಚಾರ್ಯ ಅವರು ಒಂದು ಕ್ಷಣ ನನಗೆ ಇದನ್ನು ನಂಬಲಾಗಲಿಲ್ಲ ಎಂದಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದು ಸಿಖ್ ದೇಗುಲ ಪ್ರತಿಯೊಂದು ಧಾರ್ಮಿಕ ಸ್ಥಳಕ್ಕೂ ಅದರದ್ದೇ ಆದ ವಿಶೇಷತೆ ಇದೆ. ಎಲ್ಲರಿಗೂ ಸ್ವಾಗತವಿದೆ.
ಅಧಿಕಾರಿಗಳು ಅನುಚಿತವಾಗಿ ವರ್ತಿಸಿದ್ದರೆ ಕ್ಷಮೆಯಾಚಿಸುತ್ತೇವೆ. ಮಹಿಳೆಯ ಮುಖದಲ್ಲಿರುವ ಧ್ವಜ ನಮ್ಮ ರಾಷ್ಟ್ರಧ್ವಜವಾಗಿರಲಿಲ್ಲ, ಅದರಲ್ಲಿ ಅಶೋಕ ಚಕ್ರ ಇರಲಿಲ್ಲ, ಇದು ರಾಜಕೀಯ ಧ್ವಜವಾಗಿರಬಹುದು ಎಂದು ಎಸ್ಜಿಪಿಸಿ ಪ್ರಧಾನ ಕಾರ್ಯದರ್ಶಿ ಗುರು ಚರಣ್ ಸಿಂಗ್ ಗ್ರೆವಾಲ್ ವಿಡಿಯೋದಲ್ಲಿ ಹೇಳಿದ್ದಾರೆ.