ಬೆಂಗಳೂರು: ಕರ್ನಾಟಕದಲ್ಲಿ ಮುಜರಾಯಿ ಇಲಾಖೆಯು ಕಠಿಣ ಕಾನೂನು ಪಾಲನೆ ಮಾಡಲು ಮುಂದಾಗಿದೆ. ಮುಜರಾಯಿ ದೇಗುಲದ ಅಂಗಡಿಗಳಲ್ಲಿ ಇನ್ನು ಮುಂದೆ ಮುಸ್ಲಿಮರಿಗೆ ಅವಕಾಶ ಇರುವುದಿಲ್ಲ. ವ್ಯಾಪಾರ ಮಳಿಗೆ ಹರಾಜಿನಲ್ಲಿಯೂ ಅನ್ಯಧರ್ಮೀಯರು ಪಾಲ್ಗೊಳ್ಳುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೊದಲೇ ನಮೂದಾಗಿರುವ ಕಾನೂನಿನಲ್ಲಿರುವ ಅಂಶಗಳನ್ನಿಟ್ಟುಕೊಂಡು ಈ ಬಾರಿ ಹರಾಜು ನಿರ್ವಹಿಸಲು ಮುಂದಾಗಿರುವ ಇಲಾಖೆಯು, ಹರಾಜಿನಲ್ಲಿ ಅಂಗಡಿ ತೆಗೆದುಕೊಂಡವರೇ ವ್ಯಾಪಾರ ಮಾಡಬೇಕು. ಇತರ ಅನ್ಯಧರ್ಮೀಯರಿಗೆ ಉಪ-ಗುತ್ತಿಗೆ ಕೊಡುವಂತಿಲ್ಲ. ಒಂದು ವೇಳೆ ಹರಾಜಿನಲ್ಲಿ ಪಡೆದ ಅಂಗಡಿಯನ್ನು ಉಪ-ಗುತ್ತಿಗೆ ನೀಡಿದರೆ ಮಂಜೂರು ಆದೇಶವನ್ನೇ ಅಮಾನತು ಮಾಡಲಾಗುವುದು. ಮಳಿಗೆಯನ್ನು ಅನ್ಯಧರ್ಮೀಯರಿಗೆ ನೀಡುವ ದೇಗುಲಗಳ ಕಾರ್ಯನಿರ್ವಹಣಾಧಿಕಾರಿಯನ್ನು ಅಮಾನತುಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದೆ. ಬೆಂಗಳೂರಲ್ಲಿ ಹರಾಜಿಗೆ ಸಿದ್ಧವಿರುವ 48 ಅಂಗಡಿಗಳಿಗೆ ಈಗಾಗಲೇ ನೊಟೀಸ್ ನೀಡಲಾಗಿದೆ ಎಂದು ಮುಜರಾಯಿ ಇಲಾಖೆಯು ತಿಳಿಸಿದೆ. ಬಳೆಪೇಟೆಯ ಬಂಡಿ ಶೇಷಮ್ಮ, ಶ್ರೀನಿವಾಸ ದೇವಸ್ಥಾನ, ಸುಗ್ರೀವ ವೆಂಕಟರಮಣ ದೇವಸ್ಥಾನ, ಕಾಶಿ ವಿಶ್ವನಾಥ ದೇವಸ್ಥಾನ, ಸೋಮೇಶ್ವರ ದೇವಸ್ಥಾನ, ಮಲ್ಲೇಶ್ವರದ ಕಾಡು ಮಲ್ಲೇಶ್ವರ ದೇವಸ್ಥಾನ ಸೇರಿದಂತೆ ಹಲವೆಡೆ ದೇವಾಲಯದ ಅಂಗಡಿಗಳಿಗೆ ನೊಟೀಸ್ ನೀಡಲಾಗಿದೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?