ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಕೋರ್ಟ್‌ ತಡೆಯಾಜ್ಞೆ : ಪುತ್ರರ ವಿರುದ್ದ ಹೈಕೋರ್ಟ್‌ ಮೆಟ್ಟಿಲೇರಿದ ಎರಡನೇ ಪತ್ನಿ

Twitter
Facebook
LinkedIn
WhatsApp
ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಕೋರ್ಟ್‌ ತಡೆಯಾಜ್ಞೆ : ಪುತ್ರರ ವಿರುದ್ದ ಹೈಕೋರ್ಟ್‌ ಮೆಟ್ಟಿಲೇರಿದ ಎರಡನೇ ಪತ್ನಿ

ಬೆಂಗಳೂರು : ಒಂದು ಕಾಲದಲ್ಲಿ ಭೂಗತ ಲೋಕವನ್ನೇ ಅಲುಗಾಡಿಸಿದ್ದ ಡಾನ್ ಮುತ್ತಪ್ಪ ರೈ ಸಾವಿನ ಬಳಿಕ ಅವರ ಕುಟುಂಬದ ಆಸ್ತಿ ಜಗಳ ಮತ್ತೆ ಕೋರ್ಟ್ ಮೆಟ್ಟಿಲೇರಿದೆ. ಆಸ್ತಿಯ ಉಯಿಲು ಬರೆದಿದ್ದರೂ ಕೂಡ ಮುತ್ತಪ್ಪ ರೈ ಎರಡನೇ ಪತ್ನಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ಈಗ ಮತ್ತೊಮ್ಮೆ ಮುತ್ತಪ್ಪ ರೈಗೆ (Muthappa Rai Property) ಸಂಬಂಧಿಸಿದ ಆಸ್ತಿ ಮಾರಾಟಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಭೂಗತಲೋಕ ಮಾಜಿ ದೊರೆ ಹಾಗೂ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮತ್ತಪ್ಪ ರೈಗೆ ಸಂಬಂಧಿಸಿದ ಕೆಲ ಆಸ್ತಿಗಳ ಮಾರಾಟಕ್ಕೆ ನ್ಯಾಯಾಲಯ ತಡೆಯಾಜ್ಞೆ(Karnataka High Court Injuction Order) ನೀಡಿದೆ.

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ.ಎಸ್.ಮುದಗಲ್ ನೇತೃತ್ವದ ಪೀಠ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಉಲ್ಲೇಖಿಸಿದ ಕೆಲ ನಿರ್ದಿಷ್ಟ ಆಸ್ತಿಗಳನ್ನು ನ್ಯಾಯಾಲಯದ ಮುಂದಿನ ಅದೇಶದವರೆಗೂ ಹಸ್ತಾಂತರ ಮಾಡದಂತೆ ಆದೇಶಿಸಿದೆ.

ಮುತ್ತಪ್ಪ ರೈಯವರ ಎರಡನೇ ಪತ್ನಿ ಅನುರಾಧ ಅವರು ಮುತ್ತಪ್ಪ ರೈ ಒಟ್ಟು ಆಸ್ತಿಯಲ್ಲಿ ಮೂರನೇ ಒಂದು ಭಾಗಕ್ಕಾಗಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ಮಧ್ಯೆ ಡಾನ್ ಮುತ್ತಪ್ಪ್ ರೈ ಪುತ್ರರಾದ ರಿಕ್ಕಿ ರೈ ಹಾಗೂ ರಾಕಿ ರೈ ಕೆಲ ಆಸ್ತಿಗಳನ್ನು ಮಾರಾಟ ಮಾಡಿದ್ದರು. ಇದಕ್ಕೂ ಮುನ್ನ ಆಸ್ತಿ ಮಾರಾಟ ಮಾಡದಂತೆ ಅನುರಾಧ್ ತಂದಿದ್ದ ತಡೆಯಾಜ್ಞೆಗೆ ಸಿವಿಲ್ ಕೋರ್ಟ್ ಇತ್ತೀಚಿಗೆ ತೆರವು ಅದೇಶ ನೀಡಿತ್ತು.
ಇದನ್ನು ಪ್ರಶ್ನಿಸಿ ಮತ್ತೆ ಅನುರಾಧ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈಗ ಮತ್ತೆ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ್ ಗೆ ಮೇಲುಗೈ ಆದಂತಾಗಿದೆ. 2020 ರ ಮೇ ತಿಂಗಳಿನಲ್ಲಿ ಮುತ್ತಪ್ಪ ರೈ ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ದರು. ಇದಕ್ಕೂ ಮುನ್ನ ಮುತ್ತಪ್ಪ್ ರೈ ತಮ್ಮ ಆಸ್ತಿಯನ್ನು ವಿಲ್ ಮಾಡಿ ಇಟ್ಟಿದ್ದರು. ಮುತ್ತಪ್ ರೈ ಆಸ್ತಿಯನ್ನು ಪುತ್ರರು, ಎರಡನೇ ಪತ್ನಿ ಮಾತ್ರವಲ್ಲದೇ ತಮ್ಮ ಭದ್ರತಾ ಸಿಬ್ಬಂದಿಗೂ ನೀಡುವ ಮೂಲಕ ಸುದ್ದಿಯಾಗಿದ್ದರು.
41 ಪುಟಗಳ ಸುಧೀರ್ಘ ವಿಲ್ ನಲ್ಲಿ ತಮ್ಮ 1500 ರಿಂದ 2000 ಕೋಟಿ ಆಸ್ತಿಯನ್ನು ಹಂಚಿಕೆ‌ಮಾಡಿದ್ದಾರೆ. 15 ವರ್ಷದಿಂದ ಮನೆಗೆಲಸ ಮಾಡಿಕೊಂಡಿರುವ 25 ಕ್ಕೂ ಹೆಚ್ಚು ಕೆಲಸಗಾರರಿಗೂ ಮುತ್ತಪ್ಪ ರೈ ಆಸ್ತಿ ನೀಡಿದ್ದರು. ಅದರೆ ಅವರ ನಿಧನದ ಬಳಿಕ ಮತ್ತೆ ಆಸ್ತಿ ವಿವಾದ ಸೃಷ್ಟಿಯಾಗಿದ್ದು , ಎರಡನೇ ಪತ್ನಿ ತಮ್ಮ ಪಾಲಿಗೆ ಇನ್ನಷ್ಟು ಆಸ್ತಿ ಬರಬೇಕೆಂದು ದಾವೆ ಹೂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು