ಬೆಂಗಳೂರು: ಮುಂಬರುವ ವಿಧಾನ ಪರಿಷತ್ ಚುನಾವಣೆಗಾಗಿ ಹೈಕಮಾಂಡ್ ಗೆ ಶಿಫಾರಸು ಮಾಡಬೇಕಾದ ಅಭ್ಯರ್ಥಿ ವಿಚಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮೇಲ್ಮನೆಯ ಏಳು ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 24 ಕೊನೆಯ ದಿನವಾಗಿದ್ದು, ಅಭ್ಯರ್ಥಿ ಹೆಸರನ್ನು ಶೀಘ್ರದಲ್ಲಿಯೇ ಅಂತಿಮಗೊಳಿಸಿ, ಹೈಕಮಾಂಡ್ ಗೆ ಶಿಫಾರಸು ಮಾಡಲಾಗುವುದು ಎಂದರು.
ಹೈಕಮಾಂಡ್ ಗೆ ನಮ್ಮ ಅಭಿಪ್ರಾಯ ಹಂಚಿಕೊಳ್ಳುವ ಸಂಪ್ರದಾಯ ಕಾಂಗ್ರೆಸ್ ಪಕ್ಷದಲ್ಲಿದೆ. ಸುಮಾರು 100 ಆಕಾಂಕ್ಷಿಗಳಿದ್ದಾರೆ. ಕೆಲವರು ಮನವಿ ಸಲ್ಲಿಸಿಲ್ಲ ಆದರೆ, ಬೇಕಾದ ಅರ್ಹತೆ ಹೊಂದಿದ್ದಾರೆ. ಎಲ್ಲರನ್ನೂ ಪರಿಗಣಿಸಿ ಶಿಫಾರಸ್ಸು ಮಾಡಲಾಗುವುದು, ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು. ರಾಜ್ಯ ಘಟಕ ಹೆಸರನ್ನು ಮಾತ್ರ ಶಿಫಾರಸು ಮಾಡಲಿದೆ ಆದರೆ, ಯಾರಿಗೆ ಟಿಕೆಟ್ ನೀಡಬೇಕು ಎಂಬ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದರು.
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?