ಮೈಸೂರು: ಮೇ 16ರಂದು ಜೆಡಿಎಸ್ನ ಜನತಾ ಜಲಧಾರೆ ಕಾರ್ಯಕ್ರಮ ಹಿನ್ನೆಲೆ ಇಂದು (ಏಪ್ರಿಲ್ 12) ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಚಾಮುಂಡಿ ಬಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಅವರು, ಜೆಡಿಎಸ್ಗೆ (JDS) ಬಹುಮತ ಕೊಡಿ. 5 ವರ್ಷದಲ್ಲಿ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ ಮಾಡುತ್ತೇನೆ. ಸಾಧ್ಯವಾಗದಿದ್ದರೆ ಜೆಡಿಎಸ್ ವಿಸರ್ಜಿಸುತ್ತೇನೆ ಅಂತ ಚಾಮುಂಡೇಶ್ವರದಲ್ಲಿ ಪ್ರಮಾಣ ಮಾಡಿದ್ದಾರೆ. ಈ ಬಾರಿ ಕನ್ನಡಿಗರ ಬಹುಮತದ ಸರ್ಕಾರ ಬೇಕು. ಯಾವ ಪಕ್ಷದ ಜೊತೆಯೂ ಹೊಂದಾಣಿಕೆ ಇಲ್ಲ. 30 ಅಥವಾ 40 ಸ್ಥಾನಕ್ಕಾಗಿ ಹೋರಾಟ ಅಲ್ಲ. ಪೂರ್ಣ ಪ್ರಮಾಣದ ಸರ್ಕಾರಕ್ಕೆ ಹೋರಾಟ. ನಮ್ಮದು ವಿಚಾರಾಧಾರಿತವಾದ ಹೋರಾಟ. ಧರ್ಮ ಧರ್ಮಗಳ ನಡುವೆ ಬೆಂಕಿ ಇಟ್ಟು ಮತ ಕೇಳುತ್ತಿಲ್ಲ. ರಾಜ್ಯದ ಅಭಿವೃದ್ದಿಗಾಗಿ ನಮ್ಮ ಹೋರಾಟ ಎಂದರು.ಅಧಿಕೃತ ಚುನಾವಣಾ ಪ್ರಚಾರ:
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಪರ್ಯಾಯವಲ್ಲ. ಅದು ಶೋಗಾಗಿ ನಡೆಸಿದ ಯಾತ್ರೆ. ಅವರು ನೇರವಾಗಿ ರಾಜಕೀಯ ಯಾತ್ರೆ ಅಂತಾ ಹೇಳಲಿಲ್ಲ. ನಮ್ಮದು ಜನರ ಮುಂದೆ ಸಮಸ್ಯೆ ಬಿಚ್ಚಿಡಲು ಯಾತ್ರೆ. ಈ ಮೂಲಕ ಮುಂದಿನ ಚುನಾವಣೆಗಾಗಿ ಯಾತ್ರೆ ಮಾಡಲಾಗುತ್ತದೆ. ಯಾತ್ರೆ ಮೂಲಕ ಅಧಿಕೃತ ಚುನಾವಣಾ ಪ್ರಚಾರ ಆರಂಭಿಸಿದ್ದೇನೆ. ಇದನ್ನು ನಾನು ನೇರವಾಗಿ ಹೇಳುತ್ತಿದ್ದಾನೆ ಅಂತ ಮೈಸೂರಿನಲ್ಲಿ ಹೆಚ್ಡಿಕೆ ತಿಳಿಸಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?