ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮೈಸೂರು:-ಅರಮನೆ ನಗರಿ ಮೈಸೂರಿನಲ್ಲಿರುವ ಇತಿಹಾಸ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯಕ್ಕೆ ಆಗಾಗ ವಿದೇಶಗಳಿಂದ, ಪ್ರಾಣಿ, ಪಕ್ಷಿಗಳನ್ನು ವಿನಿಮಯ ಯೋಜನೆಯಡಿ ಕರೆತರಲಾಗುತ್ತಿರುತ್ತದೆ. ಇದೀಗ ಅಪರೂಪವೇನಲ್ಲ. ಆದರೆ, ವನ್ಯಜೀವಿ ಸಪ್ತಾಹದ ಇಂದಿನ ವಿಶೇಷ ದಿನದಂದೇ ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾ ಅತಿಥಿಗಳು ಮೈಸೂರು ಮೃಗಾಲಯಕ್ಕೆ ಬಂದಿಳಿದಿವೆ.
ಜರ್ಮನಿಯಿದ ಎರಡು ಗಂಡು ಗೋರಿಲ್ಲಾಗಳು ಟಬ್ಬೊ (14 ವರ್ಷ), ಡಂಬೋ (8 ವರ್ಷ) ಬಂದಿದ್ದು, ಇವಕ್ಕೆ ವಾಸಿಸಲು ಅನುಕೂಲವಾಗುವಂತಹ ಬಿಡಾರದ ವ್ಯವಸ್ಥೆಯನ್ನು ಇನ್ಫೋಸಿಸ್ ಸಂಸ್ಥೆ ಮಾಡಿಕೊಟ್ಟಿದೆ.
ಮಲೇಶಿಯಾ, ಸಿಂಗಪೂರ್ನಿದ ತಲಾ 2 ಗೋರಿಲ್ಲಾಗಳು ಬಂದಿದ್ದು, ಮಲೇಶಿಯಾದ ಮಾರ್ಲಿನ್ (ಗಂಡು- 16 ವರ್ಷ), ಅಟೀನಾ (ಹೆಣ್ಣು- 12 ವರ್ಷ), ಸಿಂಗಪೂರ್ನ ಆಫಾ (ಗಂಡು- 7 ವರ್ಷ), ಮಿನಿ (ಹೆಣ್ಣು- 5 ವರ್ಷ) ಮೈಸೂರು ಮೃಗಾಲಯಕ್ಕೆ ಆಗಮಿಸಿ ಆಶ್ರಯ ಪಡೆದುಕೊಂಡಿವೆ.
15 ದಿನಗಳ ಹಿಂದೆಯೇ ಈ ವಿದೇಶಿ ಅತಿಥಿಗಳ ಆಗಮನವಾಗಿದೆ. ಕೋವಿಡ್ ಮುಂಜಾಗ್ರತೆ ದೃಷ್ಟಿಯಿಂದ ಅವುಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಶೀಘ್ರವೇ ಇವುಗಳನ್ನು ಸಾರ್ವಜನಿಕರ ವೀಕ್ಷಣೆಗೆ ಬಿಡಲಾಗುತ್ತದೆ. ಮೈಸೂರು ಮೃಗಾಲಯದಲ್ಲಿ ಗೋರಿಲ್ಲಾಗಳು ಇರಲಿಲ್ಲ. ಇದೀಗ ಆ ಕೊರತೆ ನೀಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?