ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಂಗ್ ರೆಬಲ್ ಸ್ಟಾರ್ ನಟನೆಯ ಕಾಳಿ ಚಿತ್ರಕ್ಕೆ ಮುಹೂರ್ತ: ಜನವರಿಯಿಂದ ಶೂಟಿಂಗ್

Twitter
Facebook
LinkedIn
WhatsApp
ಯಂಗ್ ರೆಬಲ್ ಸ್ಟಾರ್ ನಟನೆಯ ಕಾಳಿ ಚಿತ್ರಕ್ಕೆ ಮುಹೂರ್ತ: ಜನವರಿಯಿಂದ ಶೂಟಿಂಗ್

ಭಿಷೇಕ್​ ಅಂಬರೀಶ್​ ಮತ್ತು ಸಪ್ತಮಿ ಗೌಡ ಅಭಿನಯದಲ್ಲಿ ಎಸ್​. ಕೃಷ್ಣ ನಿರ್ದೇಶಿಸುತ್ತಿರುವ ‘ಕಾಳಿ’ ಚಿತ್ರದ ಮುಹೂರ್ತ, ಸೋಮವಾರ ಬೆಳಿಗ್ಗೆ ನಗರದ ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ಯಶಸ್ವಿಯಾಗಿ ನೆರವೇರಿದೆ. 1990ರ ದಶಕದ ಕಾವೇರಿ ಗಲಭೆಯ ಹಿನ್ನೆಲೆಯಲ್ಲಿ ನಡೆಯುವ ‘ಕಾಳಿ’ ಚಿತ್ರವನ್ನು ಕೃಷ್ಣ ಅವರ ಪತ್ನಿ ಸ್ವಪ್ನಾ ಕೃಷ್ಣ ತಮ್ಮ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆಯ ಮೂರನೆಯ ಚಿತ್ರವಾಗಿದೆ. ಸುದೀಪ್​ ಅಭಿನಯದ ‘ಪೈಲ್ವಾನ್​’ ಚಿತ್ರವನ್ನು ನಿರ್ಮಿಸುವ ಮೂಲಕ ಪ್ರಾರಂಭವಾದ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯು, ಆ ನಂತರ ಪುನೀತ್​ ರಾಜ್​ಕುಮಾರ್​ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಘೋಷಿಸಿತ್ತು. ಆದರೆ, ಪುನೀತ್​ ಅವರ ಅಕಾಲಿಕ ನಿಧನದಿಂದಾಗಿ, ಸಂಸ್ಥೆಯ ಎರಡನೇ ನಿರ್ಮಾಣವನ್ನು ಅವರಿಗೇ ಅರ್ಪಿಸಲಾಗುವುದು.

‘ಕಾಳಿ’ ಚಿತ್ರವು RRR ಮೋಷನ್ ಪಿಕ್ಚರ್ಸ್​ನ ಮೂರನೆಯ ಚಿತ್ರವಾಗಲಿದೆ. ಇದಲ್ಲದೆ ಕಳೆದ 8 ವರ್ಷಗಳಿಂದ ಕನ್ನಡ ಕಿರುತೆರೆಯಲ್ಲಿ ಪ್ರಮುಖ ನಿರ್ಮಾಪರಾಗಿ ಗುರುತಿಸಿಕೊಂಡಿರುವ ಸ್ವಪ್ನ ಕೃಷ್ಣ, ಕನ್ನಡದ ನಂ.1 ಚಾನೆಲ್ ಆಗಿರುವ ‘ಜೀ ಕನ್ನಡ’ಕ್ಕಾಗಿ ಅನೇಕ ಯಶಸ್ವಿ ಧಾರಾವಾಹಿಗಳನ್ನು ನಿರ್ಮಿಸಿದ್ದಾರೆ. ಈಗ ಪ್ರಸಾರವಾಗುತ್ತಿರುವ ‘ಸತ್ಯ’ ಮತ್ತು ‘ಸೀತಾರಾಮ’ ಧಾರಾವಾಹಿಗಳು ಸಹ ಅವರ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಧಾರಾವಾಹಿಗಳೇ. 

ನಿರ್ದೇಶಕ ಕೃಷ್ಣ ಇದಕ್ಕೂ ಮುನ್ನ 25ಕ್ಕೂ ಹೆಚ್ಚು ಚಿತ್ರಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ‘ಮುಂಗಾರು ಮಳೆ’ ಚಿತ್ರಕ್ಕಾಗಿ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡ ಅವರು, 2014ರಲ್ಲಿ ಯಶ್ ಅಭಿನಯದ ಯಶಸ್ವಿ ಚಿತ್ರ ‘ಗಜಕೇಸರಿ’ ಮೂಲಕ ನಿರ್ದೇಶಕರಾದರು. ಆ ನಂತರ ಸುದೀಪ್​ ಅಭಿನಯದಲ್ಲಿ ‘ಹೆಬ್ಬುಲಿ’ ಮತ್ತು ‘ಪೈಲ್ವಾನ್​’ ಚಿತ್ರಗಳನ್ನು ನಿರ್ದೇಶಿಸಿರುವ ಕೃಷ್ಣ ಅವರ ನಾಲ್ಕನೇ ನಿರ್ದೇಶನದ ಚಿತ್ರ ಈ ‘ಕಾಳಿ’.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ