ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಡಿಯೂರಪ್ಪ, ಕುಮಾರಸ್ವಾಮಿ, ರಮನಾಥ ರೈ ಆಗ್ರಹಕ್ಕೆ ಮಣಿದು ಹೆಸರು ಬದಲಾವಣೆಯ ಕ್ರಮವನ್ನು ಕೈ ಬಿಟ್ಟ ಕೇರಳ ಸರಕಾರ.

Twitter
Facebook
LinkedIn
WhatsApp
ಯಡಿಯೂರಪ್ಪ, ಕುಮಾರಸ್ವಾಮಿ, ರಮನಾಥ ರೈ ಆಗ್ರಹಕ್ಕೆ ಮಣಿದು ಹೆಸರು ಬದಲಾವಣೆಯ ಕ್ರಮವನ್ನು ಕೈ ಬಿಟ್ಟ ಕೇರಳ ಸರಕಾರ.

ಮಂಗಳೂರು: ಗಡಿನಾಡ ಕರ್ನಾಟಕ ಪ್ರದೇಶವಾದ ಕಾಸರಗೋಡು ಜಿಲ್ಲೆಯ ಗ್ರಾಮಗಳ ಕನ್ನಡ ಹೆಸರನ್ನು ಮಲಯಾಳೀಕರಣ ಮಾಡುವಂತೆ ಕೇರಳ ಸರ್ಕಾರ ಆದೇಶಿಸಿಲ್ಲ ಎಂದು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಸ್ಪಷ್ಟನೆ ನೀಡಿದ್ದಾರೆ. ಕನ್ನಡ ಗ್ರಾಮಗಳ ಹೆಸರು ಬದಲಾಯಿಸಲಾಗುತ್ತಿದೆ ಎಂಬ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಈ ಕುರಿತು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಾಸಕರು ಸ್ಪಷ್ಟನೆ ನೀಡಿದ್ದಾರೆ.

ಇನ್ನೊಂದೆಡೆ ಕನ್ನಡ ಹೆಸರುಗಳನ್ನು ಬದಲಾವಣೆ ಮಾಡಬಾರದು ಎಂದು ಸಿಎಂ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂತಾದವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ. ಅಲ್ಲದೆ ಮಾಜಿ ಸಚಿವ ರಮನಾಥ ರೈ ಟ್ವೀಟ್ ಮೂಲಕ ಭಾಷಾ ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಕೇರಳ ಸರಕಾರ ವನ್ನು ಆಗ್ರಹಿಸಿದ್ದರು. ಈ ನಡುವೆ ಕೇರಳದ ಊರುಗಳು ಕನ್ನಡ ಹೆಸರುಗಳನ್ನು ಬದಲಾಯಿಸುವ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಸ್ಪಷ್ಟಪಡಿಸಿದೆ. ಜಿಲ್ಲಾಧಿಕಾರಿ ಸಜಿತ್ ಬಾಬು ಕಚೇರಿಯಿಂದ ಪ್ರಕಟನೆ ಹೊರಬಿದ್ದಿದೆ.
ಇನ್ನು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ‘ಕೇರಳ ಮುಖ್ಯ ಮಂತ್ರಿ ಕಚೇರಿ, ಮುಖ್ಯಮಂತ್ರಿಗಳ ಆಪ್ತ ಸಹಾಯಕ ಮತ್ತು ಕಾಸರಗೋಡು ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲಾಗಿದೆ. ಹೆಸರು ಬದಲಾವಣೆಗೆ ಸಂಬಂಧಿಸಿದ ಯಾವುದೇ ಸುತ್ತೋಲೆ ಕೇರಳ ಸರ್ಕಾರ ಹೊರಡಿಸಿಲ್ಲ. ಅಂತಹ ಯೋಚನೆಯು ಸರ್ಕಾರದ ಮುಂದಿಲ್ಲ. ಆದರೆ ಪಡಿತರ ಕಾರ್ಡ್‌ಗಳಲ್ಲಿ ಸಾಫ್ಟ್‌ವೇರ್ ಕಾರಣದಿಂದ ಕೆಲವು ಹೆಸರುಗಳಲ್ಲಿ ಬದಲಾವಣೆ ಆಗಿರುವುದು ಸತ್ಯ. ಆದರೆ ಇದು ತಾಂತ್ರಿಕ ಕಾರಣದಿಂದ ಉಂಟಾದ ಲೋಪ. ಇದನ್ನು ಸರಿಪಡಿಸಲು ತುರ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ’ ಎಂದು ಅಶ್ರಫ್‌ ಫೇಸ್‌ಬುಕ್‌ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

‘ಕೇರಳ ವಿಧಾನ ಸಭೆಯಲ್ಲಿ ಮಂಜೇಶ್ವರದ ಶಾಸಕನೆಂಬ ನೆಲೆಯಲ್ಲಿ ಕೆಲವು ವಿಚಾರಗಳನ್ನು ನಿಮ್ಮ ಮುಂದಿಡುತ್ತೇನೆ. ಕಳೆದ ಕೆಲವು ದಿನಗಳಿಂದ ಕಾಸರಗೋಡು ಜಿಲ್ಲೆಯ ವಿವಿಧ ಪ್ರದೇಶಗಳ ಹೆಸರುಗಳನ್ನು ಬದಲಾಯಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರು ಈ ವಿಚಾರದಲ್ಲಿ ಟ್ಟೀಟ್ ಮಾಡುವ ಮೂಲಕ ಚರ್ಚೆ ಮಹತ್ವ ಪಡೆದುಕೊಂಡಿದೆ.

ಕರ್ನಾಟಕದ ಗಡಿ ಅಭಿವೃದ್ಧಿ ಪ್ರಾಧಿಕಾರವು ಈ ವಿಚಾರದಲ್ಲಿ ಮನವಿಯನ್ನು ನೀಡಿರುವುದು ಈ ಎಲ್ಲಾ ಚರ್ಚೆಗೆ ಕಾರಣವಾಯಿತು’ ಎಂದು ಅವರು ಹೇಳಿದ್ದಾರೆ.

ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಪರವಾಗಿ ಕೆಲವು ಪೂರಕ ಕ್ರಮಗಳನ್ನು ಕೇರಳದಲ್ಲಿ ಎಲ್ಲಾ ಸರ್ಕಾರಗಳು ಕೈಗೊಂಡಿವೆ. ಭಾಷಾ ಅಲ್ಪಸಂಖ್ಯಾತರಿಗೆ ಸಮಸ್ಯೆ ಆಗುವ ವಿಚಾರಗಳನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಸರ್ಕಾರ ಧನಾತ್ಮಕವಾಗಿ ಸ್ಪಂದಿಸುವ ವಾತಾವರಣ ಕೇರಳದಲ್ಲಿದೆ. ಪರಿಹಾರವಾಗಬೇಕಾದ ಸಮಸ್ಯೆಗಳು ಇನ್ನೂ ಇರುವುದು ವಾಸ್ತವ. ಇದನ್ನು ಸಂಘಟಿತ ಪ್ರಯತ್ನದಿಂದ ಪರಿಹರಿಸಲು ಸಾಧ್ಯವಾಗುವ ವಾತಾವರಣ ನಿರ್ಮಾಣವಾಗಬೇಕು. ನಾಡಿನ ಭಾಷಾ ಸಾಮರಸ್ಯವನ್ನು, ಸಾಂಸ್ಕೃತಿಕ ವೈವಿಧ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗಬಾರದು’ ಎಂದು ಅವರು ಬರೆದಿದ್ದಾರೆ.
‘ಮಂಜೇಶ್ವರದ ಶಾಸಕ ಹಾಗೂ ಒಬ್ಬ ಅಪ್ಪಟ ಕನ್ನಡಿಗನೆಂಬ ನೆಲೆಯಲ್ಲಿ ಕಾಸರಗೋಡಿನ ಯಾವುದೇ ಪ್ರದೇಶದ ಸ್ಥಳನಾಮವನ್ನು ಬದಲಾಯಿಸುವ ಷಡ್ಯಂತ್ರವೋ, ಸರ್ಕಾರದ ಅದೇಶವೆನಾದರೂ ಬಂದರೆ ಆದರ ವಿರುದ್ದದ ಹೋರಾಟಕ್ಕೆ ನೇತೃತ್ವ ನೀಡಲು ನಾನು ಸಿದ್ಧ. ಕನ್ನಡ ಅಲ್ಪಸಂಖ್ಯಾತರ ಸಂವಿಧಾನ ಬದ್ಧ ಹಕ್ಕುಗಳ ಸಂರಕ್ಷಣೆಯಲ್ಲಿ ಸದಾ ಜಾಗೃತನಾಗಿರುತ್ತೇನೆ’ ಎಂದೂ ಅಶ್ರಫ್ ಅವರು ಭರವಸೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು