ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಲ್ಲಾಪುರದಲ್ಲಿ ನೂತನ ಏಡಿ ಪತ್ತೆ; ಮಗಳ ಹೆಸರನ್ನಿಟ್ಟ ತಜ್ಞ

Twitter
Facebook
LinkedIn
WhatsApp
ಯಲ್ಲಾಪುರದಲ್ಲಿ ನೂತನ ಏಡಿ ಪತ್ತೆ; ಮಗಳ ಹೆಸರನ್ನಿಟ್ಟ ತಜ್ಞ

ಯಲ್ಲಾಪುರ (ಫೆ.14) :  ಹೊಸ ಜಾತಿಯ ಸಿಹಿ ನೀರಿನ ಏಡಿಯೊಂದು ಮಧ್ಯ ಪಶ್ವಿಮ ಘಟ್ಟದ ಭಾಗವಾದ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಪತ್ತೆಯಾಗಿದೆ. 

ನಿಸರ್ಗ ತಜ್ಞ ಗೋಪಾಲಕೃಷ್ಣ ಹೆಗಡೆ(Gopalkrishna Hegde), ಅರಣ್ಯ ಇಲಾಖೆ(Forest depertment)ಯ ಸಿಬ್ಬಂದಿ ಪರಶುರಾಮ ಭಜಂತ್ರಿ(Parashuram Bhajantri) ಮತ್ತು ಪುಣೆಯ ಪ್ರಾಣಿ ಸರ್ವೇಕ್ಷಣಾಲಯದ ಸಮೀರಕುಮಾರ ಪಾಟಿ ತಂಡ ಈ ವೇಲಾ ಪ್ರಭೇದದ ಹೊಸ ಜಾತಿಯ ಸಿಹಿನೀರಿನ ಏಡಿ(Crab)ಯನ್ನು ಪತ್ತೆ ಹಚ್ಚಿದ್ದು, ಇದಕ್ಕೆ ‘ವೇಲಾ ಬಾಂಧವ್ಯ'(Vela bandhavya) ಎಂದು ಹೆಸರಿಟ್ಟಿದ್ದಾರೆ. 

ಹಳದಿ ಮತ್ತು ಕೇಸರಿ ಮಿಶ್ರಿತ ಮೈಬಣ್ಣದ ಈ ಏಡಿಯು ಮಳೆಗಾಲದಲ್ಲಿ ತೋಟ, ಗದ್ದೆಗಳಲ್ಲಿ ಕಾಣಸಿಗುತ್ತವೆ. ಸಮತಟ್ಟಾದ ಜಾಗದ ಮಣ್ಣಿನಲ್ಲಿ ಸುಮಾರು ಒಂದರಿಂದ ಒಂದೂವರೆ ಅಡಿಯಷ್ಟು ಆಳದಲ್ಲಿ ರಂಧ್ರ‌ ಕೊರೆದು ಇದು ವಾಸ ಮಾಡುತ್ತದೆ. ಸುಮಾರು ನಾಲ್ಕು ಇಂಚು ಅಗಲ, ಮೂರೂವರೆ ಇಂಚು ಉದ್ದವಿರುವ ಈ ಏಡಿಯ ತಲೆಯಿಂದ ಬೆನ್ನಿನ ಮೇಲೆ ಕಪ್ಪು ಬಣ್ಣದ ಪತಂಗದಂಥ ಆಕಾರವಿದೆ. 

ನಿಸರ್ಗ ತಜ್ಞ ಗೋಪಾಲಕೃಷ್ಣ ಹೆಗಡೆಯವರ ಯಲ್ಲಾಪುರ ತಾಲೂಕಿನ ಬಾರೆಯಲ್ಲಿರುವ ತೋಟದಲ್ಲಿ ಈ ಏಡಿ ಪತ್ತೆಯಾಗಿದ್ದು, ವೇಲಾ ಕುಲಕ್ಕೆ ಸೇರಿದ ನಾಲ್ಕನೇ ಪ್ರಭೇದ ಇದಾಗಿದೆ. ವೇಲಾ ಕುಲದ ಕರ್ಲಿ, ಪುಲ್ವಿನಾಟ, ವಿರೂಪ ಎಂಬ ಮೂರೂ ಪ್ರಭೇದಗಳು ಕೇರಳದ ಕರಾವಳಿಯಲ್ಲಿ ಈ ಮೊದಲು ಪತ್ತೆಯಾಗಿದ್ದು, ನಾಲ್ಕನೇ ಪ್ರಭೇದ ಈ ವೇಲಾ ಬಾಂಧವ್ಯ ಆಗಿದೆ. 

ಅಂದಹಾಗೆ, ಬಾರೆಯಲ್ಲಿ ಪತ್ತೆಯಾಗಿರುವ ಈ ಏಡಿಗೆ ಇಟ್ಟಿರುವ ಹೆಸರು ವಿಶೇಷವಾಗಿದ್ದು, ಈ ಏಡಿಯನ್ನು ಗುರುತು ಮಾಡಿರುವ ಗೋಪಾಲಕೃಷ್ಣ ಹೆಗಡೆಯವರ ಮಗಳ ಹೆಸರು ಬಾಂಧವ್ಯ ಹೆಗಡೆ(Bandhavya hegde)ಯವರ ಹೆಸರೇ ಈ ಏಡಿಗಿರಿಸಲಾಗಿದೆ. ಬಾಂಧವ್ಯ ಬಾರೆಯ ಸರ್ಕಾರಿ ಶಾಲೆಯಲ್ಲಿ ಐದನೇ ತರಗತಿ ಓದುತ್ತಿದ್ದು, ಅವರದ್ದೇ ತೋಟದಲ್ಲಿ ಈ ಏಡಿ ಪತ್ತೆಯಾಗಿರುವ ಕಾರಣ ಅವರ ಮಗಳ ಹೆಸರನ್ನೇ ಏಡಿಗೆ ನಾಮಕರಣ ಮಾಡಲಾಗಿದೆ.

ಬಹುತೇಕ ಹೊಸ ಜೀವಿಗಳಿಗೆ ಲ್ಯಾಟಿನ್ ಹೆಸರುಗಳನ್ನು ಇಡುವ ಕಾರಣ ಸಾಮಾನ್ಯ ಜನರು ಕೂಡಾ ನೆನಪಿನಲ್ಲಿಡಲು ಈ ಹೆಸರನ್ನು ಆಯ್ಕೆ ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ