ಯಾವುದೇ ವಿಚಾರಣೆ ನಡೆಸದೆ ಉದ್ಯೋಗಿಯನ್ನು ಕೆಲಸದಿಂದ ತೆಗೆದು ಹಾಕಿದ್ದ ಹಿನ್ನೆಲೆಯಲ್ಲಿ ಆತನಿಗೆ 10 ಲಕ್ಷ ರೂ. ಪರಿಹಾರ ಪಾವತಿಸುವಂತೆ ಕಂಪನಿಗೆ ಹೈಕೋರ್ಟ್ ನಿರ್ದೇಶಿಸಿದೆ. ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಆಡಳಿತ ಮಂಡಳಿಗೆ ಇ-ಮೇಲ್ ಮೂಲಕ ವಿಧ್ವಂಸಕ ಕೃತ್ಯದ ಬೆದರಿಕೆಯೊಡ್ಡಿದ್ದ ಸಾಫ್ಟ್ವೇರ್ ಇಂಜಿನಿಯರ್ನನ್ನು ಕೆಲಸದಿಂದ ಬಿಡುಗಡೆಗೊಳಿಸಿ, 10 ಲಕ್ಷ ರೂ. ಪರಿಹಾರ ನೀಡಬೇಕೆಂದು ಕಂಪನಿಗೆ ಹೈಕೋರ್ಟ್ ಹೇಳಿದೆ.
ವಿಎಂವೇರ್ ಸಾಫ್ಟ್ ವೇರ್ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಮೂರ್ತಿ ಕೆ.ಎಸ್.ಮುದಗಲ್ ಅವರಿದ್ದ ಪೀಠ, ಆಶಿಶ್ ಕುಮಾರ್ನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಸೂಚಿಸಿ 2021ರ ಫೆ. 26ರಂದು ಕಾರ್ಮಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ರದ್ದುಪಡಿಸಿದೆ. ಆದರೆ, ಯಾವುದೇ ವಿಚಾರಣೆ ನಡೆಸದೆ ಉದ್ಯೋಗಿಯನ್ನು ಕೆಲಸದಿಂದ ತೆಗೆದು ಹಾಕಿದ್ದ ಹಿನ್ನೆಲೆಯಲ್ಲಿ ಆತನಿಗೆ 10 ಲಕ್ಷ ರೂ. ಪರಿಹಾರ ಪಾವತಿಸುವಂತೆ ಕಂಪನಿಗೆ ನಿರ್ದೇಶಿಸಿದೆ. ‘ನನ್ನ ಬಳಿ ಒಂದು ಗನ್, 8 ಬಾಂಬ್ ಹಾಗೂ 2 ಕತ್ತಿಗಳಿವೆ. ನನ್ನ ತಂದೆ ವಕೀಲರಾಗಿದ್ದು, ಚಿಕ್ಕಪ್ಪ ಶಾಸಕರಾಗಿದ್ದಾರೆ. ನಿಮ್ಮ ವಿರುದ್ಧ ಯಾವುದೇ ರೀತಿಯ ವಿಧ್ವಂಸಕ ಕೃತ್ಯವೆಸಗಲು ನಾನು ಸಮರ್ಥನಿದ್ದೇನೆ’ ಎಂದು ಆಶೀಶ್ ಕುಮಾರ್ ಕಂಪನಿಗೆ ಇ-ಮೇಲ್ ಮೂಲಕ ಬೆದರಿಕೆಯೊಡ್ಡಿದ್ದನು.
ಕೆಲಸದಿಂದ ವಜಾಗೊಳಿಸಿ ಸಂಸ್ಥೆ ಹೊರಡಿಸಿದ್ದ ಆದೇಶ ರದ್ದುಪಡಿಸಿದ ಕಾರ್ಮಿಕ ನ್ಯಾಯಾಲಯವು, ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಂಡು, ವಜಾಗೊಳಿಸಿದ ದಿನದಿಂದ ಅನ್ವಯವಾಗುವಂತೆ ಎಲ್ಲ ಹಿಂಬಾಕಿ ಪಾವತಿಸಬೇಕು ಎಂದು ಸಂಸ್ಥೆಗೆ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ಕಂಪನಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ
ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?