ಶುಕ್ರವಾರ, ಮಾರ್ಚ್ 29, 2024
ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುವತಿಗೆ ಬಣ್ಣ ಹಚ್ಚಿದ್ದಕ್ಕೆ ಕಾನೂನು ವಿದ್ಯಾರ್ಥಿ ಕಿಡ್ನಾಪ್‌ಗೈದು ಥಳಿತ – ಆರೋಪಿಗಳ ಬಂಧನ

Twitter
Facebook
LinkedIn
WhatsApp
suicide16709127311678050822 2

ಕೋಲಾರ: ಯುವತಿಗೆ ಬಣ್ಣ ಹಚ್ಚಿದ ಹಿನ್ನೆಲೆ, ಕಾನೂನು ವಿದ್ಯಾರ್ಥಿಯನ್ನು ಕಿಡ್ನಾಪ್ (Kidnap) ಮಾಡಿ ಹಲ್ಲೆ (Attack) ಮಾಡಿರುವ ಘಟನೆ ಕೋಲಾರದ (Kolar) ಬೆಳಮಾರನಹಳ್ಳಿಯಲ್ಲಿ ನಡೆದಿದೆ.

ಅಂತಿಮ ಕಾನೂನು (Law) ವಿದ್ಯಾರ್ಥಿ ಬಿ.ಸಿ.ಮಧು ಹಲ್ಲೆಗೊಳಗಾದ ಯುವಕ. ಹೋಳಿ ಹಬ್ಬದ ದಿನದಂದು ತನ್ನದೇ ಗ್ರಾಮದ ಎಂಜಿನಿಯರ್ (Engineer) ವಿದ್ಯಾರ್ಥಿನಿ ಅನುಪ್ರಿಯಾಗೆ ಮಧು ಬಣ್ಣ ಹಚ್ಚಿದ್ದ. ಇದರಿಂದ ಕೋಪಗೊಂಡ ಅನುಪ್ರಿಯಾ ಆತನ ಮೇಲೆ ಹಲ್ಲೆ ನಡೆಸಲು ಸುಪಾರಿ ನೀಡಿದ್ದಾಳೆ. ಇದನ್ನೂ ಓದಿ: 4 ದಿನದ ನವಜಾತ ಶಿಶುವನ್ನು ತುಳಿದು ಸಾಯಿಸಿದ ಪೊಲೀಸ್

ಅನುಪ್ರಿಯಾ ಅದೇ ಗ್ರಾಮದವಳಾಗಿದ್ದು ಮಧುವಿನ ಪಕ್ಕದ ಮನೆಯಲ್ಲಿ ವಾಸವಿದ್ದಳು. ಈ ಸಲುಗೆಯಿಂದ ಮಧು ಹೋಳಿ ಹಬ್ಬದ ದಿನದಂದು ಕಾಲೇಜಿಗೆ ಬಸ್‌ನಲ್ಲಿ ಹೋಗುವ ಸಂದರ್ಭ ಆಕೆಗೆ ಬಣ್ಣ ಹಾಕಿದ್ದಾನೆ. ಇದರಿಂದ ಕೋಪಗೊಂಡ ಅನುಪ್ರಿಯಾ ಪಕ್ಕದ ದಾನಹಳ್ಳಿ ಗ್ರಾಮದ ಡಿಎನ್‌ಡಿ ಮಧು ಮತ್ತು ಆತನ ಸಹಚರರಿಗೆ ಸುಪಾರಿ ಕೊಟ್ಟು ಮಧುವಿಗೆ ಹೊಡೆಯುವಂತೆ ತಿಳಿಸಿದ್ದಾಳೆ. ಸುಪಾರಿ ಪಡೆದ ಡಿಎನ್‌ಡಿ ಮಧು ಅದೇ ಗ್ರಾಮದ ಪ್ರಮೋದ್, ಶಿವರಾಜ್, ಸುದರ್ಶನ್ ಅವರ ಸಹಾಯದಿಂದ ಮಧುಗೆ ದೂರವಾಣಿ ಮುಖಾಂತರ ಕರೆ ಮಾಡಿದ್ದಾರೆ.

suicide16709127311678050822 3

ಮಾ.17 ರಂದು ಮನೆಯಲ್ಲಿದ್ದ ಬಿ.ಸಿ.ಮಧು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬಳಿಕ ಬೇಕರಿ ಬಳಿ ಕರೆಸಿಕೊಂಡ ಡಿಎನ್‌ಡಿ ಮಧು, ತನ್ನ ಸಹಚರರೊಂದಿಗೆ ಮಧುವನ್ನು ಕಾರಿನಲ್ಲಿ ಕೂರಿಸಿಕೊಂಡು ಗ್ರಾಮದ ಹೊರವಲಯಕ್ಕೆ ಬಂದಿದ್ದಾರೆ. ನಂತರ ದಾನಹಳ್ಳಿ ಮತ್ತು ವಿಶ್ವನಾಥಪುರ ಗ್ರಾಮದ ಮಧ್ಯೆ ಇರುವ ನೀಲಗಿರಿ ತೋಪಿನಲ್ಲಿ ಇಳಿಸಿ ಅಲ್ಲಿಯೇ ಇದ್ದ ನೀಲಗಿರಿ ರೆಂಬೆಗಳಿಂದ ಚೆನ್ನಾಗಿ ಥಳಿಸಿ, ಕಾರಿನ ಹಿಂಭಾಗದ ಡಿಕ್ಕಿಯಲ್ಲಿ ಹಾಕಿಕೊಂಡು ಬಂದಿದ್ದಾರೆ. ಬಳಿಕ ಶೆಡ್‌ವೊಂದರಲ್ಲಿ ಮಧುವನ್ನು ಕೂಡಿ ಹಾಕಿ ಅರೆಬೆತ್ತಲೆಗೊಳಿಸಿ ಮರದ ತುಂಡುಗಳಿಂದ ಮತ್ತು ಟ್ಯೂಬ್‌ಗಳಿಂದ ಹೊಡೆದು ಅಮಾನವೀಯ ಕೃತ್ಯವೆಸಗಿದ್ದಾರೆ. ಸುಮಾರು ಎರಡು ದಿನಗಳವರೆಗೆ ಮಧು ಅವರನ್ನು ಚೆನ್ನಾಗಿ ಥಳಿಸಿದ್ದಾರೆ. ಅಲ್ಲದೇ ಮಧು ಕೈಯಾರೆ ಅವರ ಮನೆಗೆ ಪೋನ್ ಮಾಡಿಸಿ ನಾನು ಧರ್ಮಸ್ಥಳ (Dharmasthala) ಹೋಗುತ್ತಿದ್ದು, ಎರಡು ದಿನಗಳ ಕಾಲ ಮನೆಗೆ ಬರುವುದಿಲ್ಲವೆಂದು ಹೇಳಿಸಿದ್ದಾರೆ.

suicide16709127311678050822 4

ಹಲ್ಲೆಯಿಂದಾಗಿ ಮಾರಣಾಂತಿಕವಾಗಿ ಗಾಯಗೊಂಡ ಮಧುವನ್ನು ಇದೇ ಕಿರಾತಕರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಇದು ಪೊಲೀಸ್ ಕೇಸ್ ಮಾಡಬೇಕು ಎಂದು ವೈದ್ಯರು ಹೇಳಿದಾಗ ಆತನಿಗೆ ಚಿಕಿತ್ಸೆ ಕೊಡಿಸಿ ಮಾ.19 ರಂದು ಗ್ರಾಮದ ಹೊರವಲಯದಲ್ಲಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಯಾರಿಗಾದರೂ ಹೇಳಿದರೆ ನಿನ್ನನ್ನು ಮತ್ತು ಕುಟುಂಬದವರನ್ನ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ತೀವ್ರ ಗಾಯಗೊಂಡ ಮಧು ಮನೆಗೆ ಬಂದಾಗ ಅವರ ಪೋಷಕರು ಕೂಡಲೇ ಆತನನು ಆಸ್ಪತ್ರೆಗೆ ದಾಖಲಿಸಿ ವಿಚಾರಿಸಿದಾಗ ಸತ್ಯ ಬಯಲಿಗೆ ಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಮಧು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ (District Hospital) ಚಿಕಿತ್ಸೆ ಪಡೆಯುತ್ತಿದ್ದಾನೆ. 

ವೇಮಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಸಿದ್ದಾರೆ. ಈ ಕೃತ್ಯಕ್ಕೆ ಕಾರಣರಾದ ಅನುಪ್ರಿಯಾ ಮತ್ತು ಮತ್ತಿಬ್ಬರನ್ನು ಪೊಲೀಸರು ಬಂದಿಸಿದ್ದು, ಪ್ರಮುಖ ಆರೋಪಿ ಡಿಎನ್‌ಡಿ ಮಧು ಪರಾರಿಯಾಗಿದ್ದಾನೆ. ಒಟ್ಟು 15ಕ್ಕೂ ಹೆಚ್ಚು ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ