ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುವತಿಯ ಸಾವಿಗೆ ಮನನೊಂದು ಆಕೆಯ ಚಿತೆಗೆ ಹಾರಿದ ಯುವಕ..!

Twitter
Facebook
LinkedIn
WhatsApp
ಯುವತಿಯ ಸಾವಿಗೆ ಮನನೊಂದು ಆಕೆಯ ಚಿತೆಗೆ ಹಾರಿದ ಯುವಕ..!

ಸಾಗರ್ (ಮಧ್ಯ ಪ್ರದೇಶ): ಮಧ್ಯ ಪ್ರದೇಶ ರಾಜ್ಯದ ಸಾಗರ್ ಜಿಲ್ಲೆಯಲ್ಲಿ ಒಂದು ಶಾಕಿಂಗ್ ಘಟನೆ ನಡೆದಿದೆ. ಸಂಬಂಧಿ ಯುವತಿಯೊಬ್ಬಳ ಸಾವಿನಿಂದ ಮನನೊಂದ ಯುವಕ, ಆಕೆಯ ಚಿತೆಯ ಮೇಲೆ ಹಾರಿ ಪ್ರಾಣ ಬಿಟ್ಟಿದ್ಧಾನೆ..!

ಯುವಕನ ಹತ್ತಿರದ ಸಂಬಂಧಿಯಾಗಿದ್ದ ಯುವತಿಯ ಸಾವಿನಿಂದ ಯುವಕ ತುಂಬಾನೇ ಬೇಸರಗೊಂಡಿದ್ದ ಎಂದು ತಿಳಿದು ಬಂದಿದೆ. ಆತ ಚಿತೆಗೆ ಹಾರುವ ಮುನ್ನ ಅದಕ್ಕೆ ನಮಸ್ಕರಿಸುತ್ತಿದ್ದ ಎಂದು ಕೆಲವು ಪ್ರತ್ಯಕ್ಷದರ್ಶಿಗಳು ಹೇಳಿದ್ಧಾರೆ.

ಮಧ್ಯ ಪ್ರದೇಶ ರಾಜ್ಯದ ಸಾಗರ್ ಜಿಲ್ಲೆಯ ಮಜಗಾವ್ ಎಂಬ ಗ್ರಾಮದ ಯುವತಿ ಜ್ಯೋತಿ ದಾಗಾ ಅವರು ಬಾವಿಯೊಂದರ ಪಕ್ಕ ನಡೆದುಕೊಂಡು ಹೋಗುವಾಗ ಅಚಾನಕ್ಕಾಗಿ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದರು. ಇದರಿಂದ ಯುವಕ ತೀವ್ರ ಆಘಾತಕ್ಕೆ ಒಳಗಾಗಿದ್ದ. ಯುವತಿಯ ಸಂಬಂಧಿಕರು ಆಕೆಯ ಅಂತ್ಯಕ್ರಿಯೆ ನೆರವೇರಿಸಿ ಚಿತೆಗೆ ಬೆಂಕಿ ಇಟ್ಟ ಬಳಿಕ ತಮ್ಮ ಮನೆಗಳಿಗೆ ವಾಪಸ್ ಹೋಗುತ್ತಿದ್ದರು. ಆದರೆ, ಯುವತಿಯ ಸಂಬಂಧಿ ಯುವಕ ಕರಣ್ ಮಾತ್ರ ಸ್ಮಶಾನದಲ್ಲೇ ಇದ್ದ. ಹೊತ್ತಿ ಉರಿಯುತ್ತಿದ್ದ ಚಿತೆಯ ಬಳಿಯಲ್ಲೇ ನಿಂತಿದ್ದ.


ಗ್ರಾಮಸ್ಥರೂ ಕೂಡಾ ಆತ ಚಿತೆಯ ಬಳಿ ನಿಂತಿದ್ದನ್ನು ಗಮನಿಸಿದರು. ನೋವಿನಲ್ಲಿ ಇರಬಹುದು ಎಂದು ಭಾವಿಸಿದ್ದರು. ಆದರೆ, 21 ವರ್ಷ ವಯಸ್ಸಿನ ಯುವಕ ನೋಡ ನೋಡುತ್ತಲೇ ಚಿತೆಗೆ ಹಾರಿಬಿಟ್ಟ. ಈ ವಿಚಾರ ತಿಳಿದ ಕುಟುಂಬಸ್ಥರು ಸ್ಥಳಕ್ಕ ಧಾವಿಸುವಷ್ಟರಲ್ಲಿ ತುಂಬಾನೇ ತಡವಾಗಿತ್ತು. ಸಾಕಷ್ಟು ಸುಟ್ಟ ಗಾಯಗಳಿಂದ ನರಳುತ್ತಿದ್ದ ಯುವಕ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮಜಗಾವ್ ಗ್ರಾಮದ ಸರಪಂಚ್ ಭರತ್ ಸಿಂಗ್ ಘೋಸಿ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಸದ್ಯ ಈ ಪ್ರಕರಣದ ಕುರಿತ ವಿಚಾರಣೆ ನಡೆಯುತ್ತಿದೆ. ತನಿಖೆ ಸಂಪೂರ್ಣ ಆದ ಬಳಿಕ ಸಮಗ್ರ ಮಾಹಿತಿ ನೀಡೋದಾಗಿ ಇಲ್ಲಿನ ಸ್ಥಳೀಯ ಬಹೇರಿಯಾ ಪೊಲೀಸ್ ಠಾಣೆಯ ಮುಖ್ಯಸ್ಥ ದಿವ್ಯ ಪ್ರಕಾಶ್ ತ್ರಿಪಾಠಿ ತಿಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ