ಶುಕ್ರವಾರ, ಮಾರ್ಚ್ 29, 2024
ಸುಮಲತಾರನ್ನು ಭೇಟಿಯಾದ ಬಿವೈ ವಿಜಯೇಂದ್ರ ; ಸುಮಲತಾ ನಿಲುವು ಬಗ್ಗೆ ಹೇಳಿದ್ದೇನು.?-ಬೆಳ್ತಂಗಡಿ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು - ಇಬ್ಬರು ಗಂಭೀರ.!-ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ-ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯೂತ್ ಆಫ್ ಜಿಎಸ್ ಬಿಯಿಂದ ವ್ಯಾಕ್ಸಿನೇಶನ್ ಅಭಿಯಾನಕ್ಕೆ ಚಾಲನೆ

Twitter
Facebook
LinkedIn
WhatsApp
ಯೂತ್ ಆಫ್ ಜಿಎಸ್ ಬಿಯಿಂದ ವ್ಯಾಕ್ಸಿನೇಶನ್ ಅಭಿಯಾನಕ್ಕೆ ಚಾಲನೆ

ಕಲೆ, ಸಂಸ್ಕೃತಿ, ಸಾಮಾಜಿಕ ಸಂಘಟನೆ ಯೂತ್ ಆಫ್ ಜಿಎಸ್ ಬಿ ವತಿಯಿಂದ ಕೊಂಚಾಡಿಯಲ್ಲಿರುವ ವನಿತಾ ಅಚ್ಯುತ್ ಪೈ ಸಭಾಂಗಣದಲ್ಲಿ ವ್ಯಾಕ್ಸಿನೇಶನ್ ಅಭಿಯಾನ ಸೋಮವಾರ ನಡೆಯಿತು. ಬೆಳಿಗ್ಗೆ ದೀಪ ಬೆಳಗಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಹನುಮಂತ ಕಾಮತ್, ಪೈಸೇಲ್ಸ್ ನ ಗಣಪತಿ ಪೈ, ಕೊಂಚಾಡಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಪ್ರಶಾಂತ್ ಪೈ, ಉದ್ಯಮಿ ವಾಸುದೇವ್ ಕಾಮತ್, ಯೂತ್ ಆಫ್ ಜಿಎಸ್ ಬಿ ಸಂಚಾಲಕರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್ ಉಪಸ್ಥಿತರಿದ್ದರು.
ಸುಮಾರು 700 ಕ್ಕಿಂತಲೂ ಹೆಚ್ಚು ನಾಗರಿಕರು ಆನ್ ಲೈನ್ ಮೂಲಕ ಹೆಸರು ನೊಂದಾಯಿಸಿಕೊಂಡು ಈ ಅಭಿಯಾನದಲ್ಲಿ ಭಾಗವಹಿಸಿದರು. ಬಿಪಿಎಲ್ ಕಾರ್ಡ್ ಹೊಂದಿದವರಿಗೆ ತೆಲಂಗಾಣದ Puzzolana ಸಂಸ್ಥೆ ಪ್ರಾಯೋಜಕತ್ವದ ಮೂಲಕ ಉಚಿತ ಲಸಿಕೆ ನೀಡಲಾಯಿತು.

ಆಗಮಿಸಿದ ಪ್ರತಿಯೊಬ್ಬರಿಗೂ ಬೆಳಿಗ್ಗೆ ಉಪಹಾರ ಮತ್ತು ಮಧ್ಯಾಹ್ನ ಭೋಜನದ ವ್ಯವಸ್ಥೆಯನ್ನು ಯೂತ್ ಆಫ್ ಜಿಎಸ್ ಬಿ ವತಿಯಿಂದ ಏರ್ಪಡಿಸಲಾಗಿತ್ತು. ಒಂದು ಮೆಡಿಕಲ್ ಏಮರ್ಜೆನ್ಸಿ ಕೊಠಡಿ ಮತ್ತು ಎರಡು ವ್ಯಾಕ್ಸಿನೇಶನ್ ಬೂತ್ ನಲ್ಲಿ ಕೆಎಂಸಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಲಸಿಕೆ ವಿತರಣೆಯಲ್ಲಿ ಸಹಕರಿಸಿದರು.

ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಹಾಂಗ್ಯೋ ಸಂಸ್ಥೆಯ ಮಾಲೀಕರಾದ ಪ್ರದೀಪ್ ಪೈ, ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಹಾಗೂ ಗಣ್ಯರು ಆಗಮಿಸಿ ಯೂತ್ ಆಫ್ ಜಿಎಸ್ ಬಿ ಅಭಿಯಾನಕ್ಕೆ ಶುಭ ಕೋರಿದರು. ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಲಸಿಕಾ ವಿತರಣೆ ನಡೆದಿದೆ.ಪಾಲಿಕೆ ವ್ಯಾಪ್ತಿಯ ಬಿಪಿಎಲ್ ಕಾರ್ಡಿನ ನಾಗರಿಕರಿಗೆ ವಾಹನದ ವ್ಯವಸ್ಥೆಯನ್ನು ಮಾಡಲಾಗಿತ್ತು

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು