ಬಂಟ್ವಾಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ರಮನಾಥ ರೈ ಮಾರ್ಗದರ್ಶನದಲ್ಲಿ, ಚಂದ್ರಪ್ರಕಾಶ್ ಶೆಟ್ಟಿ ಸಾರಥ್ಯದಲ್ಲಿ ಕಾಂಗ್ರೆಸ್ ಅಭೂತಪೂರ್ವ ಸಾಧನೆ.
ಮಂಗಳೂರು: ಗ್ರಾಮ ಪಂಚಾಯಿತಿ ಹಾಗೂ ಪುರಸಭೆಗೆ ನಡೆದ ಉಪಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭೂತಪೂರ್ವ ವಿಜಯ ಸಾಧಿಸಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ರಮನಾಥ ರೈ ಮಾರ್ಗದರ್ಶನದಲ್ಲಿ, ಚಂದ್ರಪ್ರಕಾಶ್ ಶೆಟ್ಟಿ ಸಾರಥ್ಯದಲ್ಲಿ ಕಾಂಗ್ರೆಸ್ ಅಭೂತಪೂರ್ವ ಸಾಧನೆ.
ಪಂಜಿ ಕಲ್ಲು ಸೇರಿದಂತೆ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ವಿಜಯ ಸಾಧಿಸಿದೆ. ಬಂಟ್ವಾಳ ಪುರಸಭೆ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿಜಯ ಸಾಧಿಸಿದೆ.
ಪಂಜಿ ಕಲ್ಲು ಸೇರಿದಂತೆ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ವಿಜಯ ಸಾಧಿಸಿದೆ. ಬಂಟ್ವಾಳ ಪುರಸಭೆ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿಜಯ ಸಾಧಿಸಿದೆ. ಬಂಟ್ವಾಳದ ಅಮ್ಟಾಡಿ, ಸಜೀಪ, ಬಡಗ ಬೆಳ್ಳೂರು, ಪಂಜಿಕಲ್ಲು ಈ ಪ್ರಮುಖ ಗ್ರಾಮ ಪಂಚಾಯಿತಿಗಳ ತೆರವಾದ ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು. ಬಂಟ್ವಾಳ ವಿಧಾನಸಭಾ ಚುನಾವಣೆ ಹಾಗೂ ಮಂಗಳೂರು ಲೋಕಸಭಾ ಚುನಾವಣೆಯ ನಂತರ ಪ್ರಥಮ ಬಾರಿಗೆ ನಡೆದ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿ ನ ಉಪಚುನಾವಣೆಯಲ್ಲಿ ಈಗ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.
ಮಾಜಿ ಸಚಿವ ರಮಾನಾಥ ರೈ ಮಾರ್ಗದರ್ಶನದಲ್ಲಿ ಹಾಗೂ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಸಾರಥ್ಯದಲ್ಲಿ ಈ ಚುನಾವಣೆ ನಡೆದಿದ್ದು ಎಲ್ಲ ಬ್ಲಾಕ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರುಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿಕೊಂಡಿವೆ.
ಪ್ರತಿಷ್ಠೆಯ ಕಣವಾದ ಪಂಜಿಕಲ್ಲು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಕಾಂಗ್ರೇಸ್ ಬೆಂಬಲಿತ ರಾಜೇಶ್ ಗೌಡ ತಿಮರೋಡಿ ಗೆಲುವು ಸಾಧಿಸಿದ್ದಾರೆ.
ಸಜಿಪ ಮುನ್ನುರು ನಂದವಾರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಇಸ್ಮಾಯಿಲ್ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.
ಬಂಟ್ವಾಳ ಪುರಸಭೆಯ ಎರಡನೇ ವಾರ್ಡಿನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುರುಷೋತ್ತಮ ಪೂಜಾರಿ ಅವರು ಗೆಲುವು ಸಾಧಿಸಿದ್ದಾರೆ.
ಆ ಮೂಲಕ ಕಾಂಗ್ರೆಸ್ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಬಿಜೆಪಿಯ ಅಭ್ಯರ್ಥಿ ಇಂದ್ರೇಶ್ ಪೂಜಾರಿ ಅವರಿಗೆ ಸೋಲಾಗಿದೆ ಇಬ್ಬರು ಹೊಸ ಮುಖಗಳಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ವಿಜಯಿಯಾಗಿದ್ದಾರೆ.
ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ ಪೂಜಾರಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು ಇವರ ತೆರವಾದ ಸ್ಥಾನಕ್ಕೆ ನವೆಂಬರ್ 23ರಂದು ಶನಿವಾರ ಉಪಚುನಾವಣೆ ನಡೆದಿತ್ತು.
ಬಂಟ್ವಾಳ ಪುರಸಭೆಯಲ್ಲಿ ಅಧಿಕಾರವನ್ನು ಪಡೆಯಲು ಕೆಲವು ವಾರ್ಡ್ ಗಳನ್ನು ತನ್ನ ಹಿಡಿತಕ್ಕೆ ತರಲು ತಂತ್ರಗಾರಿಕೆಯನ್ನು ಮಾಡಿದ ಬಿಜೆಪಿಯ ಲೆಕ್ಕಾಚಾರ ಉಲ್ಟಾಪಲ್ಟವಾಗಿದೆ.
ಪುರಸಭೆಯ 2 ನೇ ವಾರ್ಡ್ ನಲ್ಲಿ ನಿರಂತರವಾಗಿ ಗೆಲುವು ಸಾಧಿಸುತ್ತಿದ್ದ ಗಂಗಾಧರ ಪೂಜಾರಿ ಅವರನ್ನು ಬಿಜೆಪಿಗೆ ಎಳೆದುಕೊಂಡು ತಂದಿದ್ದ ಬಿಜೆಪಿಗೆ ಕಾಂಗ್ರೆಸ್ ನ ಕೋಟೆಯನ್ನು ಬೇಧಿಸಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ತನ್ನ ಚಾಕಚಕ್ಯತೆಯಿಂದ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸಫಲತೆಯನ್ನು ಕಂಡಿದೆ ಮತ್ತು ಸಂಘಟನಾತ್ಮಕ ರೀತಿಯಲ್ಲಿ ಪಕ್ಷ ಉತ್ತಮ ಹೆಜ್ಜೆಯನ್ನು ಇಡುತ್ತಿರುವುದು ಉಪಚುನಾವಣೆ ಗೆಲುವು ಸಾಕ್ಷಿಯಾಗಿದೆ.
ಬೆಳ್ತಂಗಡಿ: ಕಾಂಗ್ರೆಸ್ ನ ಮೂವರು ಬೆಂಬಲಿತ ಸದಸ್ಯರಿಗೆ ಜಯ
ಬೆಳ್ತಂಗಡಿ: ತಾಲೂಕಿನ ಇಳಂತಲ, ಕುವೆಟ್ಟು, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ.
ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಾಲತಿ ಎಸ್ ರವರು ಜಯಗಳಿಸಿದ್ದು. ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಪ್ರೇಮಲತಾ ರವರು ಜಯಗಳಿಸಿದ್ದಾರೆ. ಅದೇ ರೀತಿ ಇಳಂತಿಲ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಕುಸುಮ ಈಶ್ವರ ಗೌಡ ರವರು ಜಯಗಳಿಸಿದ್ದಾರೆ.