ಚಂಡೀಗಢ: ರಸ್ತೆ ಬದಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಟ್ರಕ್ ಹರಿದ ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿ, 11 ಕಾರ್ಮಿಕರು ಗಾಯಗೊಂಡ ಘಟನೆ ಹರಿಯಾಣದಲ್ಲಿ ನಡೆದಿದೆ. ಹರ್ಯಾಣದ (Haryana) ಜಜ್ಜರ್ ಜಿಲ್ಲೆಯ (Jhajjar) ಆಸೋಧ ಟೋಲ್ ಪ್ಲಾಜಾದಿಂದ (Aasodha toll plaza) ಸುಮಾರು 2 ಕಿಮೀ ದೂರದಲ್ಲಿರುವ ಕುಂಡ್ಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ವೇಯಲ್ಲಿ (Kundli-Manesar-Palwal expressway) ಮುಂಜಾನೆ ಈ ಘಟನೆ ನಡೆದಿದೆ. ಟ್ರಕ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ಮಲಗಿದ್ದ ಮೂವರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಟ್ರಕ್ ಪಲ್ಟಿಯಾದ ಪರಿಣಾಮ ಕಾರ್ಮಿಕರ ದೇಹ ಛಿದ್ರ ಛಿದ್ರಗೊಂಡಿದ್ದು, ದುರಂತದ ಭಯಾನಕತೆಯನ್ನು ತೋರಿಸುತ್ತಿದೆ.
ಇಲ್ಲೇ ಸಮೀಪದಲ್ಲಿ ನಡೆಯುತ್ತಿದ್ದ ನಿರ್ಮಾಣ ಕಾಮಗಾರಿಯಲ್ಲಿ ಈ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಒಟ್ಟು 18 ಕಾರ್ಮಿಕರು ಎಕ್ಸ್ಪ್ರೆಸ್ವೇ ಪಕ್ಕದಲ್ಲಿ ಮಲಗಿದ್ದಾಗ ಟ್ರಕ್ ನಿಯಂತ್ರಣ ತಪ್ಪಿ ಅವರ ಮೇಲೆ ಹರಿದಿದೆ. ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಮಿತ್ ಯಶವರ್ಧನ್ (Amit Yashwardhan) ತಿಳಿಸಿದ್ದಾರೆ. ಹನ್ನೆರಡು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಹತ್ತು ಜನರನ್ನು ರೋಹ್ಟಕ್ನ (Rohtak) ಪಿಜಿಐಎಂಎಸ್ಗೆ (PGIMS) ಸಾಗಿಸಲಾಗಿದೆ ಎಂದು ಅವರು ಹೇಳಿದರು.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?