ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಸ್ತೆ ವಿವಾದ - ಎರಡು ಕುಟುಂಬಗಳ ನಡುವೆ ಜಗಳ ; ಓರ್ವನ ಕಲೆಯಲ್ಲಿ ಅಂತ್ಯ!

Twitter
Facebook
LinkedIn
WhatsApp
indian male voter hand voting ink sign vote india 212785374 3

ಚಿಕ್ಕಮಗಳೂರು: ಜಮೀನಿಗೆ ಹೋಗುವ ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ(Mudigere) ತಾಲೂಕಿನ ಚಿಕ್ಕಹಳ್ಳ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ಪ್ರವೀಣ್ (40) ಎಂದು ಗುರುತಿಸಲಾಗಿದೆ. ಮೃತ ಪ್ರವೀಣ್ ಕುಟುಂಬಕ್ಕೂ ವಿರೋಧಿ ಕುಟುಂಬಕ್ಕೂ ಕಳೆದ ಕೆಲ ವರ್ಷಗಳಿಂದ ವಿವಾದ ನಡೆಯುತ್ತಲೇ ಇತ್ತು. ರಸ್ತೆ ಗಲಾಟೆ ಕೋರ್ಟ್ ಮೆಟ್ಟಿಲು ಏರಿ, ಕೋರ್ಟ್ ತೀರ್ಮಾನ ಕೂಡ ಪ್ರವೀಣ್ ಪರವಾಗಿ ಬಂದಿತ್ತು ಎಂದು ಪ್ರವೀಣ್ ಕುಟುಂಬ ಮಾಹಿತಿ ನೀಡಿದೆ. ಆದರೂ ವಿವಾದ ನಡೆಯುತ್ತಲೇ ಇತ್ತು. ಅಷ್ಟೇ ಅಲ್ಲದೆ, ಪ್ರವೀಣ್ ವಿರೋಧಿ ಕುಟುಂಬಕ್ಕೆ ಜಮೀನಿಗೆ ಹೋಗಲು ಬೇರೆ ರಸ್ತೆ ಕೂಡ ಇತ್ತು. ಆದರೆ, ಆ ಕುಟುಂಬ ಇದೇ ರಸ್ತೆ ಮೇಲೆ ಹೆಚ್ಚು ಅವಲಂಬಿತವಾಗಿತ್ತು. 

ಶುಕ್ರವಾರ ಪ್ರವೀಣ್ ತನ್ನ ಜಮೀನಿಗೆ ಹೋಗುವಾಗ ವಿವಾದಿತ ರಸ್ತೆಯಲ್ಲಿ ವಿರೋಧಿ ಕುಟುಂಬದವರು ಕೆಲಸ ಮಾಡುತ್ತಿದ್ದರು. ಅದನ್ನು ಪ್ರಶ್ನಿಸಲು ಬಂದ ಪ್ರವೀಣ್ ಮೇಲೆ ಸುಮಾರು ಎಂಟಕ್ಕೂ ಹೆಚ್ಚು ಜನ ಕತ್ತಿ ಮತ್ತು ಹಾರೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ. ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಪ್ರವೀಣ್‌ನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. 

ವಿರೋಧಿಗಳು ಮೃತ ಪ್ರವೀಣ್ ತಂದೆ ಲಕ್ಷ್ಮಣ್ ಮೇಲೂ ಹಲ್ಲೆ ನಡೆಸಿದ್ದಾರೆ. ಇದರಿಂದ ಅವರ ಕೈ ಮುರಿದಿದೆ. ಪ್ರವೀಣ್ ತಾಯಿ ಮೇಲೂ ಹಲ್ಲೆ ನಡೆಸಿದ್ದು, ಈ ಹಿಂದೆ ಹಲವು ಬಾರಿ ಇದೇ ರಸ್ತೆ ವಿಚಾರವಾಗಿ ಎರಡು ಕುಟುಂಬಗಳ ಮಧ್ಯೆ ಗಲಾಟೆ (Uproar) ನಡೆದಿತ್ತು. ಈ ಕುರಿತು ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist