ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜಸ್ಥಾನದಲ್ಲಿ ಗೆಹ್ಲೋಟ್ ಬೆಂಬಲಿತ ಶಾಸಕರಿಂದ ರಾಜಿನಾಮೆ ಬೆದರಿಕೆ!

Twitter
Facebook
LinkedIn
WhatsApp
ರಾಜಸ್ಥಾನದಲ್ಲಿ ಗೆಹ್ಲೋಟ್ ಬೆಂಬಲಿತ ಶಾಸಕರಿಂದ ರಾಜಿನಾಮೆ ಬೆದರಿಕೆ!

ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್ ನ ಆಂತರಿಕ ಬಿಕ್ಕಟ್ಟು ಗಣನೀಯವಾಗಿ ಹೆಚ್ಚಿದೆ. ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿ ಮಾಡುವ ಚರ್ಚೆಯ ನಡುವೆ ಅಶೋಕ್ ಗೆಹ್ಲೋಟ್ ಬೆಂಬಲಿಗ ಶಾಸಕರು ಬಂಡಾಯ ಸಾರಿದ್ದಾರೆ.

ಸಿಎಂ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿದ್ದು ಅವರ ಉತ್ತರಾಧಿಕಾರಿಯಾಗಿ ಯುವ ನಾಯಕ ಸಚಿನ್ ಪೈಲಟ್ ಆಗುತ್ತಾರೆ ಎಂಬುದು ಸ್ಪಷ್ಟವಾಗಿತ್ತು. ಆದರೆ ಇದೀಗ ಶಾಸಕರು ಅಶೋಕ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿಯಾಗಿ ಉಳಿಸಿಕೊಳ್ಳುವಂತೆ ಒತ್ತಡ ಹೇರುತ್ತಿದ್ದು ಇಲ್ಲದಿದ್ದರೆ 90ಕ್ಕೂ ಹೆಚ್ಚು ಶಾಸಕರು ಸ್ಪೀಕರ್ ಸಿಪಿ ಜೋಶಿ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಮೂಲಗಳ ಪ್ರಕಾರ, ಈ ಶಾಸಕರು ಶಾಸಕಾಂಗ ಪಕ್ಷದ ಸಭೆಗೆ ಬಂದಿಲ್ಲ. ಈ ಬೆಳವಣಿಗೆ ನಂತರ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಮುಖ್ಯಮಂತ್ರಿ ನಿವಾಸದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ವೀಕ್ಷಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದರು.

ರಾಜಸ್ಥಾನದಲ್ಲಿ ಗೆಹ್ಲೋಟ್ ಬೆಂಬಲಿತ ಶಾಸಕರಿಂದ ರಾಜಿನಾಮೆ ಬೆದರಿಕೆ!

ಇಂದಿನಿಂದ ರಾಜ್ಯದ ಮುಖ್ಯಮಂತ್ರಿ ಹೆಸರನ್ನು ನಿರ್ಧರಿಸುವ ಪ್ರಕ್ರಿಯೆಯೂ ಆರಂಭವಾಗಿತ್ತು. ಇದಕ್ಕಾಗಿ ಸಂಜೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿತ್ತು. ಇದರಲ್ಲಿ ಕಾಂಗ್ರೆಸ್ ಸೇರಿದಂತೆ ಸರ್ಕಾರವನ್ನು ಬೆಂಬಲಿಸುವ ಕೆಲವು ಶಾಸಕರನ್ನು ಕರೆಸಲಾಯಿತು. ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯ ಉಸ್ತುವಾರಿ ಅಜಯ್ ಮಾಕನ್ ಮತ್ತು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಜೈಪುರಕ್ಕೆ ಬಂದಿದ್ದರು. ಇಬ್ಬರೂ ನಾಯಕರನ್ನು ವೀಕ್ಷಕರನ್ನಾಗಿ ಮಾಡಲಾಗಿದೆ. ಈ ಇಬ್ಬರೂ ನಾಯಕರು ಶಾಸಕರ ಜತೆ ಮಾತುಕತೆ ನಡೆಸಿ ಮುಖ್ಯಮಂತ್ರಿ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲಿದ್ದಾರೆ.

ರಾಜಸ್ಥಾನದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಿಂದ ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವು ಶುರುವಾಗಿದೆ. ಹೀಗಾಗಿ ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ವೀಕ್ಷಕರಿಗೆ ಪರಿಸ್ಥಿತಿ ನಿಭಾಯಿಸುವಂತೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ಸ್ಪರ್ಧಿಸುವುದಾಗಿ ಘೋಷಿಸಿದಾಗಿನಿಂದ ಅವರು ಸಿಎಂ ಆಗಿ ಮುಂದುವರಿಯುವ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ. ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅಧ್ಯಕ್ಷ ಸ್ಥಾನವು ಪ್ರಮುಖ ಜವಾಬ್ದಾರಿಯಾಗಿದೆ ಎಂದು ಇತ್ತೀಚೆಗೆ ಹೇಳಿದ್ದಾರೆ. ಯಾವುದೇ ನಾಯಕ ಒಂದೇ ಸಮಯದಲ್ಲಿ ಎರಡು ಪ್ರಮುಖ ಸ್ಥಾನಗಳನ್ನು ಹೊಂದಲು ಸಾಧ್ಯವಿಲ್ಲ. ಅಂದಿನಿಂದ, ಗೆಹ್ಲೋಟ್ ಪಕ್ಷದ ಅಧ್ಯಕ್ಷರಾದರೆ, ರಾಜಸ್ಥಾನದ ಹೊಸ ಸಿಎಂ ಯಾರು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ