ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜಸ್ಥಾನ: ಟ್ರಕ್​ ಡಿಕ್ಕಿ ಹೊಡೆದು ಹೊತ್ತಿ ಉರಿದ ಲಾರಿಗಳು; 12 ಜಾನುವಾರು ಸಹಿತ ಐವರು ಸಜೀವ ದಹನ

Twitter
Facebook
LinkedIn
WhatsApp
9B407993 FFD5 4CEB A71E 3F9CCE3731EB

ಜೈಪುರ: ರಾಜಸ್ಥಾನದ ಜೈಪುರ-ಅಜ್ಮೀರ್ ರಸ್ತೆಯಲ್ಲಿ ಬುಧವಾರ ಲಾರಿಯೊಂದು ರಸ್ತೆಬದಿಯಲ್ಲಿ ನಿಂತಿದ್ದ ಎರಡು ಟ್ರಕ್ ಗಳಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಜೀವ ದಹನವಾಗಿದ್ದಾರೆ.ಭೀಕರ ಅಪಘಾತದಲ್ಲಿ ದನಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಸೇರಿದಂತೆ ಎಲ್ಲಾ ಮೂರು ಟ್ರಕ್‌ಗಳು ಹೊತ್ತಿ ಉರಿದಿದ್ದು, ಹನ್ನೆರಡು ಜಾನುವಾರು ಸಹ ಸಜೀವ ದಹನಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಪುರ ಗ್ರಾಮಾಂತರದ ದುಡು ಪ್ರದೇಶದಲ್ಲಿನಿನ್ನೆ ಬೆಳಗ್ಗೆ 5.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಟ್ರಕ್ ಡಿಕ್ಕಿಯ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಅದು ಎಲ್ಲಾ ಮೂರು ಟ್ರಕ್‌ಗಳಿಗೂ ಆವರಿಸಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ(ಜೈಪುರ ಗ್ರಾಮಾಂತರ) ದಿನೇಶ್ ಶರ್ಮಾ ತಿಳಿಸಿದ್ದಾರೆ.

ಒಂದು ಟ್ರಕ್‌ನ ಚಾಲಕ ಸೇರಿದಂತೆ ಐವರು ಸಜೀವ ದಹನವಾಗಿದ್ದಾರೆ ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ಹೇಳಿದ್ದಾರೆ

ಮೃತರನ್ನು ಹರ್ಯಾಣದ ಮೂವರು ಪವನ್(28), ಸಂಜು(18), ಧರಮ್‌ವೀರ್(34) ಮತ್ತು ಬಿಹಾರದ ಛಾಪ್ರಾ ಮೂಲದ ಇಬ್ಬರು – ಜಾನ್ ವಿಜಯ್ (35) ಮತ್ತು ಬಿಜ್ಲಿ (26) ಎಂದು ಗುರುತಿಸಲಾಗಿದೆ.

“ಎರಡು ಟ್ರಕ್‌ಗಳು ರಸ್ತೆಬದಿಯಲ್ಲಿ ನಿಂತಿದ್ದವು. ಹರಿಯಾಣದಿಂದ ಪುಣೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ಅವುಗಳಲ್ಲಿ ಒಂದಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ರೆಯ ಮಂಪರು ಈ ಅಪಘಾತಕ್ಕೆ ಕಾರಣವಾಗಿರಬಹುದು” ಎಂದು ಅಧಿಕಾರಿ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ