ನವದೆಹಲಿ(ಡಿ.01): ದಿಗ್ಗಜ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್ಗೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ರಾಷ್ಟ್ರಪತಿ ಭವನದಲ್ಲಿ ನಡೆದ 2022ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ವಿತರಣಾ ಸಮಾರಂಭದಲ್ಲಿ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ಖೇಲ್ ರತ್ನವನ್ನು ಪ್ರದಾನ ಮಾಡಿದರು. 25 ಲಕ್ಷ ನಗದು, ಪದಕ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಲಕ್ಷ್ಯ ಸೆನ್, ನಿಖತ್ ಜರೀನ್, ಎಲ್ಡೋಸ್ ಪೌಲ್ ಸೇರಿ 25 ಕ್ರೀಡಾಪಟುಗಳು ಅರ್ಜುನ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಪುರಸ್ಕೃತರಿಗೆ 15 ಲಕ್ಷ ನಗದು, ಕಂಚಿನ ಪತ್ರಿಮೆ ನೀಡಲಾಯಿತು. ಇದೇ ವೇಳೆ ಕರ್ನಾಟಕದ ಪ್ಯಾರಾ ಶೂಟಿಂಗ್ ಕೋಚ್ ಸುಮಾರು ಶಿರೂರ್ಗೆ ದ್ರೋಣಾಚಾರ್ಯ ಪ್ರಶಸ್ತಿ ದೊರೆತರೆ, ಮಾಜಿ ಕಬಡ್ಡಿ ಆಟಗಾರ ಬಿ.ಸಿ.ಸುರೇಶ್ ಹಾಗೂ ಮಾಜಿ ಅಥ್ಲೀಟ್ ಅಶ್ವಿನಿ ಅಕ್ಕುಂಜಿಗೆ ಜೀವಮಾನ ಶ್ರೇಷ್ಠ ಸಾಧನೆಗಾಗಿ ಧ್ಯಾನ್ಚಂದ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಲಕ್ಷ್ಯ ಸೆನ್, ನಿಖತ್ ಜರೀನ್, ಎಲ್ಡೋಸ್ ಪೌಲ್ ಸೇರಿ 25 ಕ್ರೀಡಾಪಟುಗಳು ಅರ್ಜುನ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಪುರಸ್ಕೃತರಿಗೆ 15 ಲಕ್ಷ ನಗದು, ಕಂಚಿನ ಪತ್ರಿಮೆ ನೀಡಲಾಯಿತು.
ಇದೇ ವೇಳೆ ಕರ್ನಾಟಕದ ಪ್ಯಾರಾ ಶೂಟಿಂಗ್ ಕೋಚ್ ಸುಮಾರು ಶಿರೂರ್ಗೆ ದ್ರೋಣಾಚಾರ್ಯ ಪ್ರಶಸ್ತಿ ದೊರೆತರೆ, ಮಾಜಿ ಕಬಡ್ಡಿ ಆಟಗಾರ ಬಿ.ಸಿ.ಸುರೇಶ್ ಹಾಗೂ ಮಾಜಿ ಅಥ್ಲೀಟ್ ಅಶ್ವಿನಿ ಅಕ್ಕುಂಜಿಗೆ ಜೀವಮಾನ ಶ್ರೇಷ್ಠ ಸಾಧನೆಗಾಗಿ ಧ್ಯಾನ್ಚಂದ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?