ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮುಂಬೈ:ರಾಷ್ಟ್ರಪತಿ ಚುನಾವಣೆಯ ಸುತ್ತಲೂ ಸಾಕಷ್ಟು ಗದ್ದಲಗಳು ನಡೆಯುತ್ತಿವೆ. ಈ ಮಧ್ಯೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಅವರು ರಾಷ್ಟ್ರಪತಿ ಹುದ್ದೆಗಾಗಿ ಬ್ಯಾಟಿಂಗ್ ಮಾಡಲಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿವೆ. ಶರದ್ ಪವಾರ್ ಅವರನ್ನು ಭಾರತದ ಮುಂದಿನ ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಲು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಲಾಬಿ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.
ಈ ಎಲ್ಲಾ ಊಹಾಫೋಹಗಳಿಗೆ ತೆರೆ ಎಳೆದಿರುವ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ತಾವು ರಾಷ್ಟ್ರಪತಿ ಚುನಾವಣೆಯ ಸ್ಪರ್ಧೆಯಲ್ಲಿಲ್ಲ ಎಂದು ಹೇಳಿದ್ದಾರೆ.
“ನಾನು ಅಧ್ಯಕ್ಷೀಯ ಚುನಾವಣೆಯಲ್ಲಿ ಅಭ್ಯರ್ಥಿಯಾಗುತ್ತೇನೆ ಎಂಬ ವರದಿಗಳು ಸಂಪೂರ್ಣವಾಗಿ ಸುಳ್ಳು. 300 ಕ್ಕೂ ಹೆಚ್ಚು ಸಂಸದರನ್ನು ಹೊಂದಿರುವ ಪಕ್ಷ ಬಿಜೆಪಿ. ಹೀಗಿರುವಾಗ ರಾಷ್ಟ್ರಪತಿ ಚುನಾವಣೆ ನಡೆಸಿದರೆ, ಅದರ ಫಲಿತಾಂಶ ಏನು ಎಂದು ನನಗೆ ತಿಳಿದಿದೆ. ಆದ್ದರಿಂದ ನಾನು ರಾಷ್ಟ್ರಪತಿ ಅಭ್ಯರ್ಥಿಯಾಗುವುದಿಲ್ಲ” ಎಂದು ಪವಾರ್ ಹೇಳಿದ್ದಾರೆ. ಹಾಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರಾವಧಿ 2022ರ ಜುಲೈ ತಿಂಗಳಿನಲ್ಲಿ ಅಂತ್ಯಗೊಳ್ಳಲಿದೆ.
ಪವಾರ್ ಮತ್ತು ಪ್ರಶಾಂತ್ ಕಿಶೋರ್ ಅವರು ಇದೂವರೆಗೂ 3 ಬಾರಿ ಸಭೆ ನಡೆಸಿದ್ದಾರೆ. ಆದರೆ, ಸಭೆ ರಾಜಕೀಯವಾದುದ್ದಲ್ಲ ಎಂದು ಪವಾರ್ ಹೇಳಿದ್ದಾರೆ.
ಮಂಗಳವಾರ ಮಹಾರಾಷ್ಟ್ರದ ನಾಯಕರೊಂದಿಗೆ ನಡೆದ ಸಭೆಯಲ್ಲಿ ಕಾಂಗ್ರೆಸ್ ರಾಜ್ಯ ಪಕ್ಷದ ಅಧ್ಯಕ್ಷ ನಾನಾ ಪಟೋಲೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಪವಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ತನ್ನ ಪ್ರಾಭಲ್ಯ ಹೆಚ್ಚಿಸಿಕೊಳ್ಳಲು ಸಾಧ್ಯವಾಗದ ಕಾರಣ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಕಣ್ಗಾವಲಿನಲ್ಲಿರಿಸಿಕೊಳ್ಳುತ್ತಿದ್ದಾರೆ ಎಂದು ಪಟೋಲ್ ಇತ್ತೀಚಿನ ವಿಡಿಯೋವೊಂದರಲ್ಲಿ ಹೇಳಿದ್ದರು. ಅವರ ಹೇಳಿಕೆಯು ಮಹಾರಾಷ್ಟ್ರದ ಮೂರು ಪಕ್ಷಗಳ ಮೈತ್ರಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಲ್ಲಿ ಸಾಕಷ್ಟು ಗೊಂದಲಗಳನ್ನು ಉಂಟುಮಾಡಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?