ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ನವದೆಹಲಿ (ಆ.26): ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಐದು ಪುಟಗಳ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದು, ಇದರಲ್ಲಿ ಇಂದು ಕಾಂಗ್ರೆಸ್ ಪಕ್ಷ ಈ ಸ್ಥಿತಿಯಲ್ಲಿರುವ ಕಾರಣ ರಾಹುಲ್ ಗಾಂದಿ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ದಿನದಿಂದ ಹೊರಬೀಳುವವರೆಗಿನ ಪಯಣದ ಬಗ್ಗೆ ಇದರಲ್ಲಿ ವಿಸ್ತ್ರತವಾಗಿ ಬರೆದಿದ್ದಾರೆ. ರಾಹುಲ್ ಗಾಂಧಿ ರಾಜಕೀಯಕ್ಕೆ ಪ್ರವೇಶ ಪಡೆದ ದಿನದಿಂದ ಅಥವಾ 2013ರ ಜನವರಿಯಲ್ಲಿ ಅವರನ್ನು ನೀವು ಉಪಾಧ್ಯಕ್ಷರಾಗಿ ನೇಮಕ ಮಾಡಿದ ದಿನದಿಂದ, ಈ ಹಿಂದೆ ಪಕ್ಷದಲ್ಲಿದ್ದ ಸಂಪೂರ್ಣ ಸಲಹಾ ವಿಧಾನವನ್ನು ಕೆಡವಿ ಹಾಕಲಾಯಿತು ಎಂದು ಗುಲಾಂ ನಬಿ ಅಜಾದ್ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದು, ಇಂದಿನ ಎಲ್ಲಾ ಸ್ಥಿತಿಗೆ ರಾಹುಲ್ ಗಾಂಧಿ ಹಾಗೂ ಅವರ ಚಿಕ್ಕಮಕ್ಕಳಂಥ ವರ್ತನೆಯೇ ಕಾರಣ ಎಂದು ಆರೋಪ ಮಾಡಿದ್ದಾರೆ.
ರಾಹುಲ್ ಅನನುಭವಿಗಳ ಮಾತು ಕೇಳ್ತಾರೆ: ಗುಲಾಂ ನಬಿ ಆಜಾದ್ ತಮ್ಮ ಪತ್ರದಲ್ಲಿ ರಾಹುಲ್ ಗಾಂಧಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಹುಲ್ ತಮ್ಮ ಸುತ್ತ ಅನನುಭವಿ ಜನರನ್ನು ಇಟ್ಟುಕೊಂಡು ಹಿರಿಯ ನಾಯಕರನ್ನು ಬದಿಗೊತ್ತುತ್ತಾರೆ ಎಂದು ಬರೆದುಕೊಂಡಿದ್ದಾರೆ. ಈ ಹಿಂದೆಯೂ ರಾಹುಲ್ ಗಾಂಧಿ ಅರೆಕಾಲಿಕ ರಾಜಕಾರಣಿ ಎಂಬ ಆರೋಪ ಕೇಳಿಬಂದಿತ್ತು. ಈ ಹಿಂದೆಯೂ ಹಾರ್ದಿಕ್ ಪಟೇಲ್ ಮತ್ತು ಹಿಮಂತ ಬಿಸ್ವಾ ಶರ್ಮಾ ಅವರು ಸಮಯ ನೀಡುತ್ತಿಲ್ಲ ಎಂದು ಆರೋಪಿಸಿದ್ದರು.
ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅನ್ನು ನಡೆಸುತ್ತಿರುವ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯು ಇಚ್ಛಾಶಕ್ತಿ ಮತ್ತು ಸಾಮರ್ಥ್ಯವನ್ನು ಕಳೆದುಕೊಂಡಿದೆ ಎಂದು ಗುಲಾಂ ನಬಿ ಆಜಾದ್ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರೆ ಆರಂಭಿಸಿದ ಬಗ್ಗೆ ಬರೆದಿರುವ ಆಜಾದ್, ‘ಭಾರತ್ ಜೋಡೋ ಯಾತ್ರೆ’ ಪ್ರಾರಂಭಿಸುವ ಮೊದಲು ಪಕ್ಷದ ನಾಯಕತ್ವವು ‘ಕಾಂಗ್ರೆಸ್ ಜೋಡೋ ಯಾತ್ರೆ’ ಮಾಡಬೇಕಿತ್ತು ಎಂದು ಬರೆದಿದ್ದಾರೆ.
ಪ್ರಧಾನಿಯ ಸುಗ್ರೀವಾಜ್ಞೆ ಹರಿದಿದ್ದು ಅವರ ಬಾಲಿಶ ವರ್ತನೆ: ದುರದೃಷ್ಟವಶಾತ್, ರಾಹುಲ್ ಗಾಂಧಿಯವರ ರಾಜಕೀಯ ಪ್ರವೇಶದ ನಂತರ, ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ಮಾಡಿದಾಗ, ಅವರು ಕಾಂಗ್ರೆಸ್ ಕೆಲಸ ಮಾಡುವ ಮಾರ್ಗವನ್ನು ಮುಕ್ತಾಯ ಮಾಡಿದರು. ಅವರು ಇಡೀ ಸಲಹಾ ವ್ಯವಸ್ಥೆಯನ್ನು ನಾಶಪಡಿಸಿದರು. ಇದರೊಂದಿಗೆ ಪ್ರಧಾನಿ ಹೊರಡಿಸಿದ ಸುಗ್ರೀವಾಜ್ಞೆಯನ್ನು ರಾಹುಲ್ ಹರಿದು ಹಾಕಿರುವುದು ಅವರ ಬಾಲಿಶ ವರ್ತನೆಯನ್ನು ತೋರಿಸುತ್ತದೆ. ಇದು 2014ರಲ್ಲಿ ಪಕ್ಷದ ಸೋಲಿಗೆ ಕಾರಣವಾಯಿತು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸದಂತೆ ಗುಲಾಂ ನಬಿ ಆಜಾದ್ ಗಾಂಧಿ ಕುಟುಂಬವನ್ನು ಗುರಿಯಾಗಿಸಿದ್ದಾರೆ. ಯಾವುದೇ ಮಟ್ಟದಲ್ಲಿ ಸಂಘಟನೆಯಲ್ಲಿ ಎಲ್ಲಿಯೂ ಚುನಾವಣೆ ನಡೆದಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.
ಆಜಾದ್ ತಮ್ಮ ಪತ್ರದಲ್ಲಿ ರಾಹುಲ್ ಆಗಮನದೊಂದಿಗೆ ಚರ್ಚೆಯ ಸಂಪ್ರದಾಯವನ್ನು ಕೊನೆಗೊಳಿಸಿದ್ದಾರೆ. ಇದರೊಂದಿಗೆ 2019ರ ಸೋಲಿನ ನಂತರ ಪಕ್ಷದ ಸ್ಥಿತಿ ಹದಗೆಟ್ಟಿದೆ ಎಂದ ಅವರು, ರಾಹುಲ್ ಗಾಂಧಿ ಸಿಟ್ಟಿಗೆದ್ದು ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟು ನಂತರ ಸಿಡಬ್ಲ್ಯುಸಿಯಿಂದ ನಿಮ್ಮನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮಾಡಿದರೂ ಈವರೆಗೂ ನೀವು ಕೆಲಸ ಮಾಡುತ್ತಿದ್ದೀರಿ. ಇಂದಿನವರೆಗೆ ನೀವು ಹಂಗಾಮಿ ಅಧ್ಯಕ್ಷರಾಗಿ ಉಳಿದುಕೊಂಡಿದ್ದೀರಿ.
ಇಂದು ಕಾಂಗ್ರೆಸ್ ರಿಮೋಟ್ ಕಂಟ್ರೋಲ್ ಮಾದರಿಯಲ್ಲಿ ನಡೆಯುತ್ತಿದೆ ಎಂದು ಗುಲಾಂ ನಬಿ ಆಜಾದ್ ಆರೋಪಿಸಿದರು. ರಾಹುಲ್ ಗಾಂಧಿ ಅವರ ಪಿಎ ಮತ್ತು ಭದ್ರತಾ ಸಿಬ್ಬಂದಿ ಪಕ್ಷದ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರಾಹುಲ್ ನಾಯಕತ್ವದಲ್ಲಿ 49 ವಿಧಾನಸಭಾ ಚುನಾವಣೆಗಳಲ್ಲಿ 39 ರಲ್ಲಿ ಸೋಲು ಕಂಡಿದ್ದೇವೆ
ಎಂದು ಪತ್ರದಲ್ಲಿ ಅವರು ಆರೋಪಿಸಿದ್ದಾರೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?