ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಕ್ಷದ್ವೀಪದ ಸಂಸದ ಫೈಜಲ್ ಲೋಕಸಭೆಯಿಂದ ಅನರ್ಹ!

Twitter
Facebook
LinkedIn
WhatsApp
IMG 06SM Mohammed Faizal 4 1 C78KPSPV

ಲಕ್ಷದ್ವೀಪದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಸಂಸದ ಮೊಹಮ್ಮದ್ ಫೈಜಲ್(Lakshadweep MP Mohammad Faizal)  ಅವರನ್ನು ಲೋಕಸಭಾ ಸದಸ್ಯರಾಗಿ ಅನರ್ಹಗೊಳಿಸಲಾಗಿದೆ ಎಂದು ಲೋಕಸಭೆ ಸಚಿವಾಲಯ ಶುಕ್ರವಾರ ತಡರಾತ್ರಿ ತಿಳಿಸಿದೆ. 2009 ರಲ್ಲಿ ದಾಖಲಾದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರು ಮತ್ತು ಇತರ ಮೂವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ ನಂತರ ಶುಕ್ರವಾರ ತಡ ರಾತ್ರಿ ಲೋಕಸಭೆ ಸಚಿವಾಲಯ ಈ ತೀರ್ಮಾನವನ್ನು ಪ್ರಕಟಿಸಿದೆ.

ಲಕ್ಷದ್ವೀಪದ ಕವರಟ್ಟಿಯ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಬುಧವಾರ ಎನ್‌ಸಿಪಿ ಸಂಸದ ಮತ್ತು ಇತರ ಆರೋಪಿಗಳ ಜಾಮೀನನ್ನು ಅಮಾನತುಗೊಳಿಸಿತ್ತು. ನಂತರ ಅವರನ್ನು ಕೇರಳದ ಕಣ್ಣೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಶಿಕ್ಷೆಯ ವಿರುದ್ಧ ಫೈಝಲ್ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರೂ, ಅದು ತೀರ್ಪಿಗೆ ತಡೆ ನೀಡಲು ನಿರಾಕರಿಸಿತು.

ಪ್ರಾಸಿಕ್ಯೂಷನ್ ಪ್ರಕಾರ, 2009ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಸಾಲಿಯಾ ಅವರ ಜೊತೆ ವಾಗ್ವಾದ ನಡೆದ ನಂತರ ಅವರ ವಿರುದ್ಧ ಹಲ್ಲೆ ನಡೆಸಲು ಸಂಸದ ಮೊಹಮ್ಮದ್ ಫೈಜಲ್ ಜನರ ಗುಂಪನ್ನು ಕರೆದುಕೊಂಡು ಬಂದು ಹಲ್ಲೆ ನಡೆಸಿದ್ದರು. ಈ ಘಟನೆಯಲ್ಲಿ ಗಾಯಗೊಂಡ ಸಾಲಿಯಾ ಅವರನ್ನು ಕೇರಳಕ್ಕೆ ಕರೆದೊಯ್ದು ಖಾಸಗಿ ಆಸ್ಪತ್ರೆಯಲ್ಲಿ ಹಲವು ತಿಂಗಳುಗಳ ಕಾಲ ಚಿಕಿತ್ಸೆ ಕೊಡಿಸಲಾಯಿತು. ಮತ್ತೊಂದೆಡೆ ಭಾರತೀಯ ದಂಡ ಸಂಹಿತೆಯಡಿ ಫೈಜಲ್ ಹಾಗೂ ಇತರರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿತ್ತು.

ಇನ್ನು ಈ ಪ್ರಕರಣದಲ್ಲಿ 32 ಆರೋಪಿಗಳಿದ್ದು, ಮೊದಲ ನಾಲ್ವರಿಗೆ ಶಿಕ್ಷೆ ವಿಧಿಸಲಾಗಿದೆ. ಸಂಸದ ಫೈಜಲ್ ಈ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದಾರೆ. ಆರೋಪಿಗಳ ಪರ ವಕೀಲರು ಇದೊಂದು ಸಣ್ಣ ಘರ್ಷಣೆ ಎಂದು ವಾದ ಮಂಡಿಸಿದರೂ, ನ್ಯಾಯಾಧೀಶರು ವೈದ್ಯಕೀಯ ವರದಿಗಳನ್ನು ಉಲ್ಲೇಖಿಸಿ ಮತ್ತು ಗಾಯಾಳು ದೀರ್ಘಾವಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವುದನ್ನು ಉಲ್ಲೇಖಿಸಿ ವಕೀಲರ ವಾದವನ್ನು ತಿರಸ್ಕರಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ