ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಿಫ್ಟ್​ನಲ್ಲಿ ಸಿಲುಕಿ ಶಾಲಾ ಮಕ್ಕಳ ಎದುರೇ 26 ವರ್ಷದ ಶಿಕ್ಷಕಿ ಸಾವು!

Twitter
Facebook
LinkedIn
WhatsApp
ಲಿಫ್ಟ್​ನಲ್ಲಿ ಸಿಲುಕಿ ಶಾಲಾ ಮಕ್ಕಳ ಎದುರೇ 26 ವರ್ಷದ ಶಿಕ್ಷಕಿ ಸಾವು!
ಲಿಫ್ಟ್​ನಲ್ಲಿ ಸಿಲುಕಿ ಶಾಲಾ ಮಕ್ಕಳ ಎದುರೇ 26 ವರ್ಷದ ಶಿಕ್ಷಕಿ ಸಾವು!

ಮೃತ ಶಿಕ್ಷಕಿಯನ್ನು ಜಿನಾಲ್ ಫರ್ನಾಂಡಿಸ್ ಎಂದು ಗುರುತಿಸಲಾಗಿದೆ. ಈ ವರ್ಷ ಜೂನ್‌ನಲ್ಲಿ ಅವರು ಶಾಲೆಗೆ ಸಹಾಯಕ ಶಿಕ್ಷಕಿಯಾಗಿ ಸೇರಿದ್ದರು. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಶಾಲೆಯ ಕಟ್ಟಡದ 6ನೇ ಮಹಡಿಯಲ್ಲಿ ಜಿನಾಲ್ ಫರ್ನಾಂಡಿಸ್ ತರಗತಿಯನ್ನು ಮುಗಿಸಿ ಆಫೀಸ್ ರೂಮಿಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಅವರು 6ನೇ ಮಹಡಿಯಲ್ಲಿ ಲಿಫ್ಟ್‌ನೊಳಗೆ ಪ್ರವೇಶಿಸಿದಾಗ ಲಿಫ್ಟ್ ಇದ್ದಕ್ಕಿದ್ದಂತೆ ಮೇಲಕ್ಕೆ ಚಲಿಸಲು ಪ್ರಾರಂಭಿಸಿತು. ಆದರೆ ಅವರ ಒಂದು ಕಾಲು ಲಿಫ್ಟ್‌ನೊಳಗೆ ಮತ್ತು ಅವರ ದೇಹವು ಹೊರಗೆ ಸಿಲುಕಿಕೊಂಡಿತ್ತು. ಇದರಿಂದಾಗಿ ಅವರಿಗೆ ಗಂಭೀರ ಗಾಯಗಳಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಲಿಫ್ಟ್​ನಲ್ಲಿ ಸಿಲುಕಿ ಶಾಲಾ ಮಕ್ಕಳ ಎದುರೇ 26 ವರ್ಷದ ಶಿಕ್ಷಕಿ ಸಾವು!

ಒಂದು ಕಾಲನ್ನು ಲಿಫ್ಟ್​ನೊಳಗೆ ಇಡುತ್ತಿದ್ದಂತೆ ಲಿಫ್ಟ್​ ಮೇಲೆ ಹೋಗಲು ಆರಂಭಿಸಿದ್ದರಿಂದ ಅವರು ಸಹಾಯಕ್ಕಾಗಿ ಕೂಗಿಕೊಂಡಿದ್ದರು. ಅವರ ಕೂಗು ಕೇಳಿದ ಶಾಲಾ ಸಿಬ್ಬಂದಿ ಮತ್ತು ಮಕ್ಕಳು ಸಹಾಯ ಮಾಡಲು ಧಾವಿಸಿದರು. ಆದರೆ ಅಷ್ಟರಲ್ಲಿ ಲಿಫ್ಟ್​ ಮೇಲೆ ಹೋಗಿತ್ತು. ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಜಿನಾಲ್ ಫರ್ನಾಂಡಿಸ್ ಅವರನ್ನು ಹೊರತೆಗೆದರು. ನಂತರ ಆಕೆಯನ್ನು ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಲ್ಲಿ ಅವರು ಮೃತಪಟ್ಟಿದ್ದಾರೆ.

ಈ ಘಟನೆಗೆ ಅಸಹಜ ಸಾವು ಕೇಸ್ ದಾಖಲಿಸಿಕೊಳ್ಳಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಶಾಲೆಯ ಸಿಬ್ಬಂದಿ, ಆಡಳಿತ ಮಂಡಳಿ, ಲಿಫ್ಟ್ ನಿರ್ವಹಣೆ ನೋಡಿಕೊಳ್ಳುವ ಕಂಪನಿಯ ಹೇಳಿಕೆಗಳನ್ನು ದಾಖಲಿಸಿಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ