ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಕೀಲ, ಮಹಿಳೆ ಮಧ್ಯೆ ಬೀದಿ ಕಾಳಗ

Twitter
Facebook
LinkedIn
WhatsApp
HD wallpaper orange fire background fire textures fire flames fire background with fire flames patterns orange fire flames 1

ಮಡಿಕೇರಿ: ಮಹಿಳೆ ಮತ್ತು ವಕೀಲ ಹೊಡೆದಾಡಿಕೊಂಡ ಘಟನೆ ಘಟನೆ ಕುಶಾಲನಗರದ (Kushalnagar) ಪಟೇಲ್ ಬಡಾವಣೆಯಲ್ಲಿ (Patel Badavane) ನಡೆದಿದೆ.

ಮನೆ ನಿರ್ಮಾಣ (Home Construction) ಮಾಡುವಾಗ ಸ್ವಲ್ಪ ಜಾಗಬಿಟ್ಟು ನಿರ್ಮಿಸುವಂತೆ ಮಹಿಳೆಗೆ ವಕೀಲ (Lawyer) ಸಂತೋಷ್ ಕುಮಾರ್ ಸೂಚಿಸಿದ್ದರು. ಆದರೆ ಸ್ವಲ್ಪವೂ ಜಾಗ ಬಿಡದೇ ಮಹಿಳೆ ಮನೆ ನಿರ್ಮಾಣಕ್ಕೆ ಮುಂದಾಗಿದ್ದಕ್ಕೆ ನಡೆದ ಜಗಳ ಬಡಿದಾಟದಲ್ಲಿ ಅಂತ್ಯಗೊಂಡಿದೆ. 

ಹಲವು ದಿನಗಳಿಂದ ಮನೆಯ ಜಾಗದ ವಿಷಯವಾಗಿ ಎರಡು ಕುಟುಂಬದ ನಡುವೆ ಜಗಳ ನಡೆಯುತ್ತಿತ್ತು. ಶನಿವಾರ ಜಗಳ ಮತ್ತಷ್ಟು ತಾರಕಕ್ಕೆ ಏರಿದೆ. ವಕೀಲ ಸಂತೋಷ್ ಮಹಿಳೆಗೆ ಕೆಟ್ಟದಾಗಿ ನಿಂದಿಸಿದ್ದಾನೆ. ಈ ವೇಳೆ ವಕೀಲನಿಗೆ ಮಹಿಳೆ ಸುಮಿತ್ರಾ ಕಪಾಳಮೋಕ್ಷ ಮಾಡಿದ್ದಾಳೆ. ಮಹಿಳೆ ಹೊಡೆಯುತ್ತಿದ್ದಂತೆ ವಕೀಲ ತೀವ್ರ ಹಲ್ಲೆ ನಡೆಸಿದ್ದಾನೆ.

ಇಬ್ಬರ ಜಗಳ ಜೋರಾಗುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ತೆರಳಿ ಕಿತ್ತಾಟ ನಿಲ್ಲಿಸಿದ್ದಾರೆ. ಗಾಯಗೊಂಡಿರುವ ಸುಮಿತ್ರಾರನ್ನು ಮಡಿಕೇರಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿರುವ ಹಿನ್ನೆಲೆಯಲ್ಲಿ ವಕೀಲ ಮತ್ತು ಆತನ ಪತ್ನಿ ವಿರುದ್ಧ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ