ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಕ್ಫ್ ಆಸ್ತಿ ಕಬಳಿಕೆಯ ವರದಿ ಸದನದಲ್ಲಿ ಮಂಡನೆ: ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
ವಕ್ಫ್ ಆಸ್ತಿ ಕಬಳಿಕೆಯ ವರದಿ ಸದನದಲ್ಲಿ ಮಂಡನೆ: ಸಿಎಂ ಬೊಮ್ಮಾಯಿ

ವಿಧಾನಸಭೆ: ರಾಜ್ಯ ವಕ್ಫ್ ಬೋರ್ಡ್‌ನ 2.5 ಲಕ್ಷ ಕೋಟಿ ರು. ಮೌಲ್ಯದ ಆಸ್ತಿ ಕಬಳಿಕೆ ಅವ್ಯವಹಾರ ಕುರಿತ ಅನ್ವರ್‌ ಮಾಣಿಪ್ಪಾಡಿ ಆಯೋಗದ ಪೂರ್ಣ ವರದಿಯನ್ನು ಸದನದಲ್ಲಿ ಮಂಡಿಸಿ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು. ಜತೆಗೆ, ಈ ಕುರಿತು ಉಪ ಲೋಕಾಯುಕ್ತರು ನೀಡಿರುವ ವರದಿ ಆಧಾರದ ಮೇಲೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮಂಡಿಸಿ ಮಾತನಾಡಿದ ಬಿಜೆಪಿ ಸದಸ್ಯರಾದ ಕೆ.ರಘುಪತಿ ಭಟ್‌, ಬಸನಗೌಡ ಪಾಟಿಲ್‌ ಯತ್ನಾಳ್‌ ಹಾಗೂ ಸಂಜೀವ ಮಠಂದೂರು ಅವರು, ‘2.5 ಲಕ್ಷ ಕೋಟಿ ರು. ಮೌಲ್ಯದ 29 ಸಾವಿರ ಎಕರೆ ಜಮೀನನ್ನು ದೊಡ್ಡ ದೊಡ್ಡ ಕಳ್ಳರು ಕಬಳಿಸಿದ್ದಾರೆ. ಕೂಡಲೇ ವರದಿಯನ್ನು ಸದನದಲ್ಲಿ ಮಂಡಿಸಿ ಚರ್ಚೆಗೆ ಅವಕಾಶ ನೀಡಬೇಕು. ಜತೆಗೆ ಸಿಬಿಐ ತನಿಖೆಗೆ ವಹಿಸಿ ತಪ್ಪಿತಸ್ಥರನ್ನು ಬಂಧಿಸಬೇಕು’ ಎಂದು ಒತ್ತಾಯ ಮಾಡಿದರು.

ಇದನ್ನು ಸ್ವಾಗತಿಸುತ್ತಲೇ ಕುಟುಕಿದ ಕಾಂಗ್ರೆಸ್‌ನ ಯು.ಟಿ.ಖಾದರ್‌, ‘ಅಲ್ಪಸಂಖ್ಯಾತರ ಮೇಲೆ ನಿಮಗಿರುವ ಕಾಳಜಿಗೆ ಅಭಿನಂದನೆ. ರಘುಪತಿ ಭಟ್‌ ಸೇರಿದಂತೆ ಇವರಾರ‍ಯರೂ ಹಿಂದೂಗಳ ಸಮಸ್ಯೆಗಳ ಬಗ್ಗೆಯಾಗಲಿ, ಮೀನುಗಾರರ ಸಮಸ್ಯೆ, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಸ್ಮಾರ್ಚ್‌ ಸಿಟಿ ಬಗ್ಗೆ ಚರ್ಚೆ ಮಾಡಿಲ್ಲ. ಎರಡು ವರ್ಷದಿಂದ ಈ ವಿಚಾರ ಪ್ರಸ್ತಾಪಿಸದೆ ಈಗ 40 ಪರ್ಸೆಂಟ್‌ ವಿಚಾರದಿಂದ ತಪ್ಪಿಸಿಕೊಳ್ಳಲು ಈ ವಿಚಾರ ತಂದಿದ್ದೀರಿ’ ಎಂದು ಟೀಕಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ‘ನಿಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರ ಆಸ್ತಿ ರಕ್ಷಣೆಗೆ ಯತ್ನಿಸದೆ ವರದಿ ತಿರಸ್ಕರಿಸಿದಾಗ ನೀವು ಯಾಕೆ ಮಾತನಾಡಲಿಲ್ಲ?’ ಎಂದು ಖಾದರ್‌ ಅವರನ್ನು ಪ್ರಶ್ನಿಸಿದರು. ಈ ವೇಳೆ ಕಾಂಗ್ರೆಸ್‌ ಹಾಗೂ ಬಿಜೆಪಿ ಸದಸ್ಯರ ನಡುವೆ ತೀವ್ರ ವಾಗ್ವಾದವೂ ನಡೆಯಿತು.

ಬಳಿಕ ಮಾತನಾಡಿದ ಬಸವರಾಜ ಬೊಮ್ಮಾಯಿ, ‘40 ಪರ್ಸೆಂಟ್‌ ವಿಚಾರದ ಬಗ್ಗೆಯೂ ಮಾತನಾಡುತ್ತೇವೆ. ಅದರಲ್ಲಿ ಯಾರಾರ‍ಯರ ಹೆಸರು ಬರುತ್ತದೆ ಎಂಬುದು ನಿಮಗೂ ಗೊತ್ತಾಗಲಿದೆ. ಅದಕ್ಕೂ ನೀವೇ ಉತ್ತರ ಕೊಡಬೇಕಾಗುತ್ತದೆ. ಅದು ಭ್ರಷ್ಟಾಚಾರ ಆದರೆ ಪವಿತ್ರವಾದ ಸರ್ಕಾರಿ ವಕ್ಫ್ ಆಸ್ತಿ ಕಬಳಿಕೆಯೂ ಭ್ರಷ್ಟಾಚಾರ ಎಂಬುದು ತಿಳಿದಿರಲಿ. 2.5 ಲಕ್ಷ ಕೋಟಿ ರು. ಆಸ್ತಿ ದೊಡ್ಡ ದೊಡ್ಡ ಭ್ರಷ್ಟರ ಪಾಲಾಗಿದೆ. ಈ ಬಗ್ಗೆ ವರದಿಯನ್ನು ಸದನದಲ್ಲಿ ಮಂಡಿಸಿ ಪ್ರತಿಯೊಬ್ಬ ಸದಸ್ಯರಿಗೂ ಪ್ರತಿ ನೀಡುತ್ತೇವೆ. ಜತೆಗೆ ಈ ಕುರಿತ ಉಪ ಲೋಕಾಯುಕ್ತ ವರದಿ ಆಧರಿಸಿ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.

ಪರಿಷತ್‌ನಲ್ಲೂ ಮಾಣಿಪ್ಪಾಡಿ ವರದಿ ಪ್ರಸ್ತಾಪ: ವಕ್ಫ್ ಆಸ್ತಿ ಕಬಳಿಕೆ ಕುರಿತ ಅನ್ವರ್‌ ಮಾಣಿಪ್ಪಾಡಿ ವರದಿ ಕುರಿತು ವಿಧಾನಪರಿಷತ್‌ನಲ್ಲೂ ಪ್ರಸ್ತಾಪವಾಗಿದೆ. ಆದರೆ ನಿಯಮ ಪ್ರಕಾರ ನೋಟಿಸ್‌ ನೀಡದ ಕಾರಣ, ವರದಿಯನ್ನು ಸದನದಲ್ಲಿ ಸರ್ಕಾರ ಮಂಡಿಸಬೇಕೆಂದು ಕೋರಿದ ಬಿಜೆಪಿ ಸದಸ್ಯರ ಮನವಿಯನ್ನು ಸಭಾಪತಿ ರಘುನಾಥ್‌ರಾವ್‌ ಮಲ್ಕಾಪುರೆ ತಳ್ಳಿ ಹಾಕಿದರು. ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ವಕ್ಫ್ ಸಚಿವರು ವರದಿಯನ್ನು ಸದನದಲ್ಲಿ ಮಂಡಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಆಕ್ಷೇಪ ವ್ಯಕ್ತಪಡಿಸಿದರೂ ಬಿಜೆಪಿ ಸದಸ್ಯರು ಪಟ್ಟು ಮುಂದುವರೆಸಿದರು. ಇದಕ್ಕೆ ಅಸಮಾಧಾನಗೊಂಡ ಸಭಾಪತಿ ಮಲ್ಕಾಪುರೆ, ಪ್ರತಿಪಕ್ಷಗಳ ರೀತಿ ಆಡಳಿತ ಪಕ್ಷದವರು ಮಾತನಾಡಿದರೆ ಹೇಗೆ? ಈ ಬಗ್ಗೆ ಮೊದಲೇ ನೋಟಿಸ್‌ ನೀಡದ ಕಾರಣ ಯಾರಿಗೂ ಮಾತನಾಡಲು ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ