ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಧುವಿನ ಬಾಳಿಗೆ ಗ್ರಹಣವಾದ ಮೇಕಪ್- ಮದುವೆಯೇ ಕ್ಯಾನ್ಸಲ್!

Twitter
Facebook
LinkedIn
WhatsApp
Dollarphotoclub 82462294 1

ಹಾಸನ: ಆಕೆ ಮದುವೆಯಾಗಲು  ತಯಾರಾಗಿ ಹೊಸ ಜೀವನದ ಕನಸು ಕಂಡವಳು. ಹೊಸ ಬಾಳಿನ ಬಾಗಿಲಿಗೆ ಹೊಸ ಕನಸಿನ ಬೆಳಕು ಬರುವ ಮುನ್ನವೇ ಮೇಕಪ್ (Marriage Makeup) ಅವಳ ಮುಖವನ್ನು ಗ್ರಹಣದಂತೆ ಆವರಿಸಿ ಕನಸನ್ನು ಕಸಿದುಕೊಂಡಿದೆ.

ಹೌದು, ಹೊಸ ಮಾದರಿಯ ಮೇಕಪ್‍ಗೆ ವಧುವಿನ (Bride) ಮುಖವೇ ವಿರೂಪಗೊಂಡು ಮದುವೆ ಕ್ಯಾನ್ಸಲ್ ಆದ ಘಟನೆ ಹಾಸನದ (Hassan) ಅರಸೀಕೆರೆಯಲ್ಲಿ (Arsikere) ನಡೆದಿದೆ. 

ಮದುವೆಗಾಗಿ ನಗರದ ಗಂಗಾಶ್ರೀ ಹರ್ಬಲ್ ಬ್ಯೂಟಿ ಪಾರ್ಲರ್ ಅಂಡ್ ಸ್ಪಾನಲ್ಲಿ ಮೇಕಪ್ ಮಾಡಿಸಿಕೊಂಡಿದ್ದ ಯುವತಿಗೆ ಈ ದುರ್ಗತಿ ಎದುರಾಗಿದೆ. ಬ್ಯೂಟಿಪಾರ್ಲರ್‌ನ (Beauty Parlour ಮಾಲೀಕರಾದ ಗಂಗಾ, ಹೊಸ ಬಗೆಯ ಮೇಕಪ್ ಮಾಡುವುದಾಗಿ ಹೇಳಿ ಸ್ಟೀಮ್ ನೀಡಿದ್ದಾರೆ. ಇದಾದ ಬಳಿಕ ವಧುವಿನ ಮುಖ ಊದಿಕೊಂಡು, ಸುಟ್ಟಂತೆ ಕಪ್ಪಾಗಿದೆ.

ವಿರೂಪಗೊಂಡ ಯುವತಿಯ ಮುಖ ನೋಡಿ ಮದುವೆಯಾಗಲು ವರ ಹಾಗೂ ವರನ ಕುಟುಂಬ ನಿರಾಕರಿಸಿದೆ. ಕಳೆದ ಹತ್ತು ದಿನಗಳ ಹಿಂದೆ ನಡೆದಿದ್ದ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅವಘಡದ ಕುರಿತು ಅರಸೀಕೆರೆ ನಗರ ಪೊಲೀಸರು ಬ್ಯೂಟಿಪಾರ್ಲರ್ ಮಾಲಕಿಯನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ