ಶುಕ್ರವಾರ, ಮೇ 3, 2024
ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವರದಕ್ಷಿಣೆ ತರದ ಸೊಸೆಗೆ ಆ್ಯಸಿಡ್ ಕುಡಿಸಿದ ಅತ್ತೆ!

Twitter
Facebook
LinkedIn
WhatsApp
index 21

ರಾಯ್‌ಬರೇಲಿ(ಫೆ.25): ವರದಕ್ಷಿಣೆ ಕಿರುಕುಳ ಭಾರತದಲ್ಲಿ ಆಳವಾಗಿ ಬೇರೂರಿದೆ. ಒಂದೊಂದು ರೂಪದಲ್ಲಿ ವರದಕ್ಷಿಣ ಬಹುತೇಕ ಮದುವೆಯಲ್ಲಿ ನಡೆಯುತ್ತಲೇ ಇದೆ. ಇದೀಗ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಅತ್ಯಂತ ಭೀಕರ ಘಟನೆ ನಡೆದಿದೆ. 2.5 ಲಕ್ಷ ರೂಪಾಯಿ ಹಣ ಹಾಗೂ ಒಂದು ಕಾರು ವರದಕ್ಷಿಣೆ ರೂಪದಲ್ಲಿ ತಂದಿಲ್ಲ ಎಂದು ಸೊಸೆಗೆ ಅತ್ತೆ ಆ್ಯಸಿಡ್ ಕುಡಿಸಿದ ಘಟನೆ ನಡೆದಿದೆ. ಆ್ಯಸಿಡ್ ಕುಡಿದ ಸೊಸೆ ಸಾವು ಬದುಕಿನ ನಡುವೆ ಹೋರಾಡಿ ಮೃತಪಟ್ಟಿದ್ದಾಳೆ. 

25 ವರ್ಷದ ಅಂಜುಮ್ 6 ವರ್ಷಗಳ ಹಿಂದೆ ಇಲಿಯಾಸ್‌ ಜೊತೆ ವೈಹಾಕಿ ಜೀವನಕ್ಕೆ ಕಾಲಿಟ್ಟಿದ್ದಾಳೆ. ಮದುವೆಯಾದ ದಿನದಿಂದ ಗಂಡ ಹಾಗೂ ಆತ್ತೆ ವರದಕ್ಷಿಣೆ ರೂಪದಲ್ಲಿ ಏನೂ ತಂದಿಲ್ಲ ಎಂದು ಕಿರುಕುಳ ನೀಡುತ್ತಲೇ ಬಂದಿದ್ದಾರೆ. ಹೀಗಾಗಿ ಹಲವು ಬಾರಿ ತವರು ಮನೆಗೆ ಬಂದು ತಂಗಿದ ಉದಾಹರಣೆಯೂ ಇದೆ. ಪ್ರತಿ ಬಾರಿ ಈ ರೀತಿ ತವರು ಮನೆಗೆ ಬಂದಾಗ, ಅತ್ತೆ ಜೊತೆ ಜಗಳವಾಡಿ ಮನೆ ಬಿಟ್ಟು ಬರುತ್ತಿದ್ದಾಳೆ ಎಂದು ಗಂಡನ ಹಾಗೂ ಆತನ ಕುಟುಂಬಸ್ಥರು ಕಟ್ಟು ಕತೆ ಕಟ್ಟಿದ್ದರು. ಇತ್ತ ಕಷ್ಟ ಪಟ್ಟು ಮದುವೆ ಮಾಡಿದ ಪೋಷಕರಿಗೆ ಈ ವಿಚಾರಗಳನ್ನು ಹೇಗೆ ತಿಳಿಸಲಿ ಎಂದು ಒಂದು ಮಾತೂ ಆಡಿಲ್ಲ.

ಫೆಭ್ರವರಿ 20 ರಂದು ವರದಕ್ಷಿಣೆ ಕಿರುಕುಳ ಜೋರಾಗಿದೆ. 2.5 ಲಕ್ಷ ರೂಪಾಯಿ ಹಾಗೂ ಒಂದು ಕಾರು ತವರು ಮನೆಯಿಂದ ತರುವಂತೆ ಎಚ್ಚರಿಸಿದ್ದಾರೆ. ಇದಕ್ಕಾಗಿ ಪಟ್ಟು ಹಿಡಿದಿದ್ದಾರೆ. ಪೋಷಕರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಅವರಲ್ಲಿ 2.5 ಲಕ್ಷ ರೂಪಾಯಿ, ಕಾರು ಕೊಡಿಸುವ ಶಕ್ತಿ ಇಲ್ಲ ಎಂದಿದ್ದಾಳೆ. ಇದು ಅತ್ತೆ ಹಾಗೂ ಗಂಡನ ರೊಚ್ಚಿಗೆಬ್ಬಿಸಿದೆ. ಈ ಕೋಪದಲ್ಲಿ ಅತ್ತೆ ಬಲವಂತವಾಗಿ ಆ್ಯಸಿಡ್ ಕುಡಿಸಿದ್ದಾರೆ.

ಬಳಿಕ ಆಕೆಯನ್ನು ಅಲ್ಲೆ ಬಿಟ್ಟು ಅತ್ತೆ ಹೊರಟು ಹೋಗಿದ್ದಾರೆ. ತೀವ್ರ ನೋವು ಸುಟ್ಟಗಾಯದಿಂದ ಬಳಲಿದ ಅಂಜುಮ್ ತನಗಾದ ಅನ್ಯಾಯವನ್ನು ಹೇಳಿಕೊಂಡಿದ್ದಾಳೆ. ಫೆಬ್ರವರಿ 21 ರಂದು ಪೋಷಕರಿಗೆ ಬರಸಿಡಿಲು ಬಡಿದಂತಾಗಿದೆ. ಮಗಳು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾಳೆ ಅನ್ನೋ ಮಾಹಿತಿ ಪಡೆದು ಆಸ್ಪತ್ರೆ ಧಾವಿಸಿದ್ದಾರೆ. ಸತತ ಚಿಕಿತ್ಸೆ ನೀಡಿದರೂ ಯಾವದೇ ಪ್ರಯೋಜನವಾಗಲಿಲ್ಲ. ಇಂದು(ಫೆ.25) ಅಂಜುಮ್ ಮೃತಪಟ್ಟಿದ್ದಾಳೆ.

ಅಂಜುಮ್ ದೇಹದಲ್ಲಿ ಹಲವು ಗಾಯಗಳಿರುವುದು ಪತ್ತೆಯಾಗಿದೆ. ಈ ಮೂಲಕ ಅಂಜುಮ್ ಮೇಲೆ ಹಲ್ಲೆಯಾಗಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಅಂಜುಮ್ ಕುಟುಂಬಸ್ಥರ ದೂರು ನೀಡಿದ್ದಾರೆ. ಇತ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ