ಬೆಳ್ತಂಗಡಿ (ದಕ್ಷಿಣ ಕನ್ನಡ): ಇನ್ನೇನು ವಧುವಿಗೆ ವರ ತಾಳಿ ಕಟ್ಟಬೇಕು… ಅಷ್ಟರಲ್ಲಿ ಜಗಳ ಶುರು ಮಾಡಿದ ವಧು, ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ.
ಇಂತಹ ಘಟನೆ ನಾರಾವಿಯಲ್ಲಿ ಶುಕ್ರವಾರ ನಡೆದಿದೆ. ಮದುವೆ ಮಂಟಪದಲ್ಲಿ ಪರಸ್ಪರ ಹಾರ ಬದಲಾಯಿಸುವಾಗ ವಧುವಿನ ಕೊರಳು ಮತ್ತು ಕಿವಿಗೆ ವರನ ಕೈ ತಾಗಿದ್ದನ್ನೇ ನೆಪ ಮಾಡಿಕೊಂಡು ವಧು ಸಿಟ್ಟಾದಳು.
ಹಿರಿಯರ ಮಾತುಕತೆ ಬಳಿಕ ಮದ್ವೆ ನಡೆಸಲು ಕುಟುಂಬಸ್ಥರು ಸಜ್ಜಾದರು. ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಮತ್ತೆ ಸಿಟ್ಟಿಗೆದ್ದ ವಧು, ತಾಳಿ ಸಹಿತ ಹೂವಿನ ಹಾರವನ್ನು ಎಸೆದು ಈ ಮದುವೆಯೇ ಬೇಡ ಎಂದಳು. ಇದರ ಬೆನ್ನಲ್ಲೇ ಈ ಪ್ರಕರಣ ಮತ್ತೊಂದು ತಿರುವು ಪಡೆದಿದೆ.
ಈ ಘಟನೆ ಬೆನ್ನಲ್ಲೇ ಎರಡು ಕುಟುಂಬಗಳ ನಡುವೆಯೂ ಸಣ್ಣಮಟ್ಟಿನ ಜಗಳ ಏರ್ಪಟ್ಟಿತ್ತು. ಸ್ಥಳಕ್ಕಾಗಮಿಸಿದ ವೇಣೂರು ಪೊಲೀಸರ ಸಮ್ಮುಖ ಮಾತುಕತೆ ನಡೆದರೂ, ಪ್ರಯೋಜನವಾಗದೆ ಮದುವೆ ನಡೆಯಲಿಲ್ಲ. ನಿಶ್ಚಿತಾರ್ಥ ಸಂದರ್ಭ ಬಂದಿದ್ದ ವರನೇ ಬೇರೆ, ಹೆಣ್ಣು ನೋಡಲು ಬಂದವನೇ ಬೇರೆ, ಈಗ ಮದುವೆ ಆಗುತ್ತಿರುವವನೇ ಬೇರೆ. ಮೂರು ಬಾರಿಯೂ ಬಂದದ್ದು ಬೇರೆ ಬೇರೆ. ಇದೇ ಕಾರಣಕ್ಕೆ ವಧು ಮದುವೆಯನ್ನ ತಿರಸ್ಕರಿಸಲು ಮುಖ್ಯ ಕಾರಣ ಎಂದು ಆರೋಪಿಸುವ ಮೂಲಕ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?