ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಂಡೀಸ್ ವಿರುದ್ಧ 1st T20 ಪಂದ್ಯದಲ್ಲಿ ಭಾರತಕ್ಕೆ 68 ರನ್ ಗಳ ಭರ್ಜರಿ ಜಯ

Twitter
Facebook
LinkedIn
WhatsApp
ವಿಂಡೀಸ್ ವಿರುದ್ಧ 1st T20 ಪಂದ್ಯದಲ್ಲಿ ಭಾರತಕ್ಕೆ 68 ರನ್ ಗಳ ಭರ್ಜರಿ ಜಯ

ಟ್ರಿನಿಡಾಡ್: ಏಕದಿನ ಸರಣಿ ಬೆನ್ನಲ್ಲೇ ಆರಂಭವಾಗಿರುವ ಟಿ20 ಸರಣಿಯಲ್ಲೂ ಭಾರತ ಭರ್ಜರಿ ಶುಭಾರಂಭ ಮಾಡಿದ್ದು, ವಿಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ 68 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಭಾರತ ನೀಡಿದ 191 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ವೆಸ್ಟ್ ಇಂಡೀಸ್ ತಂಡ ಭಾರತೀಯ ಬೌಲರ್ ಗಳ ಸಾಂಘಿಕ ಪ್ರದರ್ಶನದಿಂದಾಗಿ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 122 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ ಬರೊಬ್ಬರಿ 68 ರನ್ ಗಳ ಅಂತರದಲ್ಲಿ ವಿಂಡೀಸ್ ಪಡೆ ಭಾರತಕ್ಕೆ ಶರಣಾಯಿತು.

ಟಾಸ್ ಸೋತು ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಆತಿಥೇಯ ತಂಡದ ವಿರುದ್ಧ ಉತ್ತಮ ಮೊತ್ತ ಕಲೆಹಾಕಿತ್ತು. ನಾಯಕ ರೋಹಿತ್ ಶರ್ಮಾ (64), ದಿನೇಶ್ ಕಾರ್ತಿಕ್ (41) ಮತ್ತು ಸೂರ್ಯಕುಮಾರ್ ಯಾದವ್ (24) ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿ, ಎದುರಾಳಿ ತಂಡಕ್ಕೆ 191 ರನ್‌ಗಳ ಬೃಹತ್ ಗುರಿ ನೀಡಿತ್ತು.

ಭಾರತ ನೀಡಿದ್ದ 191 ರನ್‌ಗಳ ಗುರಿ ಬೆನ್ನತ್ತಿದ ಆತಿಥೇಯ ವೆಸ್ಟ್ ಇಂಡೀಸ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 122 ರನ್ ಗಳಿಸಿ ಸೋಲೊಪ್ಪಿಕೊಂಡಿತು. ವೆಸ್ಟ್ ಇಂಡೀಸ್ ಪರ ಯಾವೊಬ್ಬ ಬ್ಯಾಟ್ಸ್‌ಮನ್‌ಗಳು ಸಹ ಭಾರತದ ಬೌಲಿಂಗ್‌ಗೆ ಪ್ರತಿರೋಧ ತೋರದೆ ತರಗಲೆಗಳಂತೆ ವಿಕೆಟ್ ಕಳೆದುಕೊಂಡಿತು.

ಕೈಲ್ ಮೇಯರ್ಸ್(15), ಶಮರ್ಹ್ ಬ್ರೂಕ್ಸ್ (20), ಜೇಸನ್ ಹೋಲ್ಡರ್ (0), ನಾಯಕ ನಿಕೋಲಸ್ ಪೂರನ್ (18), ರೋವ್ಮನ್ ಪೊವೆಲ್ (14), ಶಿಮ್ರಾನ್ ಹೆಟ್ಮೆಯರ್ (14), ಅಕೇಲ್ ಹೊಸೈನ್ (11), ಕೆಮೊ ಪೌಲ್ (19) ರನ್ ಗಳಿಸಿದರು. ಯಾವುದೇ ಹಂತದಲ್ಲೂ ಉತ್ತಮ ಜೊತೆಯಾಟ ನೀಡಲಿಲ್ಲ. ಅಂತಿಮವಾಗಿ ವಿಂಡೀಸ್ ಪಡೆ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 122 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ ಬರೊಬ್ಬರಿ 68 ರನ್ ಗಳ ಅಂತರದಲ್ಲಿ ವಿಂಡೀಸ್ ಪಡೆ ಭಾರತಕ್ಕೆ ಶರಣಾಯಿತು.

ಭಾರತದ ಪರ ಬೌಲಿಂಗ್‌ನಲ್ಲಿ ಅರ್ಷದೀಪ್ ಸಿಂಗ್ 4 ಓವರ್ ಬೌಲಿಂಗ್ ಮಾಡಿ 24 ರನ್ ನೀಡಿ ಪ್ರಮುಖ 2 ವಿಕೆಟ್ ಪಡೆದರು. ರವಿಚಂದ್ರನ್ ಅಶ್ವಿನ್ 4 ಓವರ್ ಬೌಲಿಂಗ್ ಮಾಡಿ 22 ರನ್ ನೀಡಿ 2 ವಿಕೆಟ್ ಪಡೆದರೆ, ರವಿ ಬಿಷ್ಣೋಯ್ 4 ಓವರ್ ಬೌಲಿಂಗ್ ಮಾಡಿ 26 ರನ್ ನೀಡಿ 2 ವಿಕೆಟ್ ಪಡೆದರು. ಇನ್ನು ಭುವನೇಶ್ವರ್ ಕುಮಾರ್ ಮತ್ತು ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್ ಪಡೆದು ಗೆಲುವಿನ ಕಾಣಿಕೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist