![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ವಿಜಯಪುರ: ಜಿಲ್ಲೆಯಲ್ಲಿ ಭೂಮಿ ಮತ್ತೆ ನಡುಗಿದೆ. ಭೂಮಿ ಕಂಪಿಸಿರುವುದನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (Karnataka State Natural Disaster Monitoring Centre – KSNDMC) ದೃಢಪಡಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನ ತೀವ್ರತೆ 2.8 ಪ್ರಮಾಣ ದಾಖಲಾಗಿತ್ತು. ಜಿಲ್ಲೆಯಲ್ಲಿ ಶನಿವಾರ (ಮಾರ್ಚ್ 26) ಸಂಜೆ 7.51ಕ್ಕೆ ಭೂಕಂಪ ಸಂಭವಿಸಿತ್ತು. ಬಸವೇಶ್ವರ ನಗರ ಮತ್ತು ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಭೂಮಿ ಕಂಪನಿಸಿದ ಅನುಭವವಾಗಿದೆ ಎಂದು ಜನರು ತಿಳಿಸಿದ್ದರು. ಈ ಭೂಕಂಪನವು ಭೂಮಿಯಿಂದ 10 ಕಿಮೀ ಆಳದಲ್ಲಿ ಉಂಟಾಗಿದೆ ಎಂದು ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.
ಕಳೆದ ಮಂಗಳವಾರ (ಮಾರ್ಚ್ 22) ಸಹ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿತ್ತು. ಭಾರಿ ಶಬ್ದ ಕೇಳಿ ಬಂದು ಭೂಮಿನಡುಗಿದ ಅನುಭವವಾಗಿದೆ. ವಿಜಯಪುರ ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಕಂಪನವಾಗಿದೆ. ಬೆಳಗ್ಗೆ 11.22ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದ ಅನುಭವದಿಂದ ಜನರು ಭಯಗೊಂಡಿದ್ದಾರೆ. ಕೆಲ ತಿಂಗಳ ಬಳಿಕ ಮತ್ತೇ ಭೂಕಂಪದ ಆತಂಕ ಉಂಟಾಗಿದೆ. 3.5ರಷ್ಟು ತೀವ್ರತೆಯಲ್ಲಿ ರಿಕ್ಟರ್ ಮಾಪನದಲ್ಲಿ ಭೂಮಿ ಕಂಪಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಭೂಕಂಪನದ ಕೇಂದ್ರ ಬಿಂದು ಕಂಡುಬಂದಿದೆ. ಈ ಹಿಂದೆ (ಜನವರಿ 30) ಬೆಳಿಗ್ಗೆ 9.15 ಗಂಟೆಗೆ ಭೂಕಂಪನ ಸಂಭವಿಸಿತ್ತು. ರಿಕ್ಟರ್ ಮಾಪನದಲ್ಲಿ (Richter scale) 2.9 ರಷ್ಟು ತೀವ್ರತೆ ದಾಖಲಾಗಿತ್ತು. ವಿಜಯಪುರ (Vijayapura) ನಗರ ಹಾಗೂ ವಿಜಯಪುರ ತಾಲೂಕಿನ ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ ಸೇರಿ ಹಲವು ಗ್ರಾಮಗಳಲ್ಲಿಯೂ ಭೂಕಂಪನದ ಅನುಭವವಾಗಿತ್ತು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist