ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಡಿಯೋ…ಲಿಫ್ಟ್‌ನೊಳಗೆ ಶಾಲಾ ಬಾಲಕನಿಗೆ ಕಚ್ಚಿದ ಸಾಕು ನಾಯಿ

Twitter
Facebook
LinkedIn
WhatsApp
ವಿಡಿಯೋ…ಲಿಫ್ಟ್‌ನೊಳಗೆ ಶಾಲಾ ಬಾಲಕನಿಗೆ ಕಚ್ಚಿದ ಸಾಕು ನಾಯಿ

ಶಾಲೆ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕ ತನ್ನ ತಾಯಿಯ ಜೊತೆ ವಸತಿ ಸಮುಚ್ಚಯದ ಲಿಫ್ಟ್ ನಲ್ಲಿ ನಿಂತಿದ್ದ ವೇಳೆ ಸಾಕು ನಾಯಿಯೊಂದು ಕಚ್ಚಿ ಗಾಯಗೊಳಿಸಿದೆ. ಈ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದ್ದು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ವಿಡಿಯೋ ಸೆರೆಯಾಗಿದೆ.

ಸಾಮಾನ್ಯವಾಗಿ ಬೀದಿ ನಾಯಿಗಳಿಂದ ಮಕ್ಕಳಿಗೆ ಅಪಾಯವಾಗುತ್ತಿತ್ತು, ಆದರೆ ಈಗ ಸಾಕು ನಾಯಿಗಳು ಕೂಡ ಮಕ್ಕಳ ಮೇಲೆ ದಾಳಿ ಮಾಡಲು ಆರಂಭಿಸಿವೆ. ಅಪಾರ್ಟ್ಮೆಂಟ್ಗಳಲ್ಲಿ ವಾಸಿಸುವ ಸಾಕು ನಾಯಿಗಳು ವಿಶೇಷವಾಗಿ ಹೆಚ್ಚು ಆಕ್ರಮಣಕಾರಿ ಆಗುತ್ತಿವೆ. ಇಂತಹ ಪ್ರಕರಣಗಳು ದೆಹಲಿ-ಎನ್‌ಸಿಆರ್‌ನಲ್ಲಿ ನಿರಂತರವಾಗಿ ಬರುತ್ತಿದ್ದು, ಸಾಕು ನಾಯಿಯು ಮಾಲೀಕರ ಮುಂದೆ ಮಕ್ಕಳು ಮತ್ತು ಹಿರಿಯರ ಮೇಲೆ ದಾಳಿ ಮಾಡಿದೆ. ಲಿಫ್ಟ್‌ನಲ್ಲೂ ಇಂತಹ ಹಲವು ಘಟನೆಗಳು ನಡೆದಿವೆ.

ಈ ಪ್ರಕರಣ ಬಿಸ್ರಖ್ ಪ್ರದೇಶದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು. ನೋಯ್ಡಾ ಪ್ರದೇಶದ ಲಾ ರೆಸಿಡೆನ್ಸಿಯ ವಸತಿ ಸಮುಚ್ಚಯದ ಲಿಫ್ಟ್‌ನಲ್ಲಿ ಈ ಘಟನೆ ನಡೆದಿದೆ. ತನ್ನ ತಾಯಿ ಜೊತೆ ಬಾಲಕ ಶಾಲೆಗೆ ಹೊರಟಿದ್ದು ಈ ವೇಳೆ ನಾಯಿಯನ್ನು ಅದರ ಮಾಲಕ ಲಿಫ್ಟ್ ನೊಳಗೆ ತಂದಿದ್ದಾರೆ ಈ ವೇಳೆ ಬಾಲಕನ ಕೈಗೆ ನಾಯಿ ಕಚ್ಚಿ ಗಾಯಗೊಳಿಸಿದೆ, ಕೂಡಲೇ ಆಸ್ಪತ್ರೆಗೆ ಬಾಲಕನನ್ನು ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ ಇದುವರೆಗೆ ಒಟ್ಟು ನಾಲ್ಕು ಚುಚ್ಚುಮದ್ದುಗಳನ್ನು ನೀಡಲಾಗಿದೆ ಎಂದು ಪೋಷಕರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಾಯಿ ಕಚ್ಚುವ ಅನೇಕ ಘಟನೆಗಳು ನಡೆಯುತ್ತಿವೆ. ಅಲ್ಲದೆ ಇತ್ತೀಚೆಗೆ ನಗರದಲ್ಲಿ ನಾಯಿ ಕಡಿತದಿಂದ 8 ತಿಂಗಳ ಮಗು ಸಾವನ್ನಪ್ಪಿತ್ತು. ಗಮನಾರ್ಹವಾದ ವಿಚಾರ ಏನೆಂದರೆ ಸಾಕು ನಾಯಿಗಳ ಕಾಟ ಹೆಚ್ಚುತ್ತಿರುವ ಬಗ್ಗೆ ನೋಯ್ಡಾದಲ್ಲಿ ಹೊಸ ನಾಯಿ ನೀತಿಯನ್ನು ಜಾರಿಗೆ ತರಲಾಗಿದೆ. ಅದರಂತೆ ಸಾಕುಪ್ರಾಣಿಗಳನ್ನು ಸಾಕಲು ನೋಯ್ಡಾ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳುವುದು ಈಗ ಕಡ್ಡಾಯವಾಗಿದೆ. ಇದಲ್ಲದೆ ಸಾಕು ನಾಯಿ ಕಚ್ಚಿದರೆ ಅದರ ಮಾಲೀಕರಿಂದ ಚಿಕಿತ್ಸಾ ವೆಚ್ಚ ಹಾಗೂ 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ