ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಂಗಳೂರು: ಉದ್ಯಮ ಮತ್ತು ಕೈಗಾರಿಕೆಗೆ ಸಂಬಂಧಿಸಿದಂತೆ ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ರಾಜ್ಯವು 62,085 ಕೋಟಿ ರೂ. ವಿದೇಶೀ ನೇರ ಬಂಡವಾಳ ಆಕರ್ಷಿಸಿ ಮೊದಲನೇ ಸ್ಥಾನದಲ್ಲಿ ಇರುವುದಾಗಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ದೇಶದ ಒಟ್ಟಾರೆ ವಿದೇಶೀ ನೇರ ಬಂಡವಾಳದ 48% ಹೂಡಿಕೆ ಕರ್ನಾಟಕಕ್ಕೆ ಸಂಬಂಧಿಸಿದಂತೆ ಆಗಿದೆ ಎಂದು ಅವರು ತಿಳಿಸಿದ್ದಾರೆ. 2019 – 20 ರಲ್ಲಿ 30,746 ಕೋಟಿ, 2020-21 ರಲ್ಲಿ 56,884 ಕೋಟಿ ರೂ. ಗಳನ್ನು ಆಕರ್ಷಣೆ ಮಾಡಿ ಮೂರನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನದಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ರಾಜ್ಯದಲ್ಲಿ ಉದ್ಯಮ ಸ್ನೇಹಿ ಕ್ರಮಗಳನ್ನು ಜಾರಿಗೆ ತರುವುದು, ಉದ್ಯೋಗಕ್ಕೆ ಮೂಲಸೌಕರ್ಯ ಒದಗಿಸುವದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ವಿಚಾರದಲ್ಲಿ ಕರ್ನಾಟಕ ಉದ್ಯೋಗ ಮಿತ್ರ ದೇಶದ ಅಗ್ರಮಾನ್ಯ ಪ್ರಚಾರ ಏಜೆನ್ಸಿಯಾಗಿ ಹೊರಹೊಮ್ಮಿದೆ. ಹೂಡಿಕೆ ಪ್ರಚಾರ ಏಜೆನ್ಸಿ ಶ್ರೇಯಾಂಕದಡಿ ಕರ್ನಾಟಕದ ಉದ್ಯೋಗ ಮಿತ್ರ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮೆರೆದಿದೆ ಎಂದು ಅವರು ಹೇಳಿದ್ದಾರೆ.
ದೇಶದ ಒಟ್ಟು 20 ರಾಜ್ಯಗಳ ಸಾಧನೆಯನ್ನು ಪರಿಗಣಿಸಿ ಈ ಶ್ರೇಯಾಂಕ ನೀಡಲಾಗಿದೆ. ಹೂಡಿಕೆ ಉತ್ತೇಜನ, ಪ್ರಚಾರಕ್ಕೆ ಸಂಬಂಧಿಸಿದಂತೆ ಒಟ್ಟು 8 ವಿಭಾಗಗಳ ಪೈಕಿ 4 ರಲ್ಲಿ ರಾಜ್ಯ 100% ಅಂಕ ಗಳಿಸಿದೆ. ಉದ್ಯಮಿಗಳಿಗೆ ಹೂಡಿಕೆಗೆ ಅವಕಾಶ ಮತ್ತು ಪೂರಕ ಸೌಲಭ್ಯ ಒದಗಿಸುವಲ್ಲಿ ಉದ್ಯೋಗ ಮಿತ್ರದ ಪಾತ್ರ ಗಣನೀಯ ಎಂದು ಅವರು ಹೇಳಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?